Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ 5ರಂದು "ಮರಳಿ ಮನೆಗೆ" ಚಲನಚಿತ್ರ...

ಮೇ 5ರಂದು "ಮರಳಿ ಮನೆಗೆ" ಚಲನಚಿತ್ರ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ18 April 2017 5:43 PM IST
share
ಮೇ 5ರಂದು ಮರಳಿ ಮನೆಗೆ ಚಲನಚಿತ್ರ ಬಿಡುಗಡೆ

ಮಡಿಕೇರಿ, ಎ.18: ನಿಖಿಲ್ ಹೋಂ ಸ್ಕ್ರೀನ್ ನಿರ್ಮಾಣದ "ಮರಳಿ ಮನೆಗೆ" ಕನ್ನಡ ಚಲನಚಿತ್ರ ರಾಜ್ಯಾದ್ಯಂತ ಮೇ 5ರಂದು ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಯೋಗೇಶ್ ಮಾಸ್ಟರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ನಿರ್ದೇಶನದ ಮೊದಲ ಚಿತ್ರ ಇದಾಗಿದ್ದು, ನಟಿ ಶ್ರುತಿ ಅವರ ಭಾವನಾತ್ಮಕ ಚಿತ್ರಗಳ ಸರಣಿಗೆ ಈ ಚಿತ್ರ ಮತ್ತೊಂದು ಪ್ರವೇಶವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

"ಮರಳಿ ಮನೆಗೆ" ಚಿತ್ರದ ಕಥೆ ತನ್ನ ಮರಳಿ ಮನೆಗೆ ಕಾದಂಬರಿ ಆಧಾರಿತವಾಗಿದ್ದು, ಸಂಭಾಷಣೆ, ಸಾಹಿತ್ಯ, ಸಂಗೀತ ನಿರ್ದೇಶನ ಮತ್ತು ಚಿತ್ರ ನಿರ್ದೇಶನ ತಾವೇ ಮಾಡಿದ್ದು, ಶ್ರುತಿ, ಶಂಕರ್ ಆರ್ಯನ್, ಸಹನಾ, ಸುಚೇಂದ್ರ ಪ್ರಸಾದ್, ಅರುಂಧತಿ ಜಟ್ಕರ್, ರೋಹಿತ್ ನಾಗೇಶ್ ನಟಿಸಿದ್ದಾರೆ. ವಿಶೇಷ ಪಾತ್ರಗಳಲ್ಲಿ ಅನಿರುದ್ಧ ಜಟ್ಕರ್ ನಟಿಸಿದ್ದು, ಪತ್ರಕರ್ತೆ ಗೌರಿ ಲಂಕೇಶ್ ಇದೇ ಪ್ರಥಮ ಬಾರಿಗೆ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ ಎಂದು ತಿಳಿಸಿದರು.

ಮೈಸೂರಿನ ರಂಗಭೂಮಿ ಹಿನ್ನೆಲೆಯ ಸುಖದೇವ್ ತೇಜಸ್ವಿ ಮತ್ತು ಬಾಲ ಭರತ ನಾಟ್ಯ ಪ್ರತಿಭೆ ಅನನ್ಯ ಬಾಲ ಕಲಾವಿದರಾಗಿ ನಟಿಸಿದ್ದು, ತಿಪಟೂರು, ದಂಡಿನ ಶಿವರ, ಅಮ್ಮಸಂದ್ರ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಸುಭಾಷ್ ಎಲ್. ಗೌಡ ಮತ್ತು ಎಸ್.ಎನ್.ಲಿಂಗೇಗೌಡ ಚಿತ್ರವನ್ನು ನಿರ್ಮಿಸಿದ್ದು, ಗೀತೆಗಳಿಗೆ ಪ್ರಧಾನ ಸ್ಥಾನವಿರುವ ಈ ಚಿತ್ರದಲ್ಲಿ ಮೇಘನಾ ವೆಂಕಟೇಶ್, ಚೇತನ್ ಸೋಸ್ಕ, ಮುನಿರಾಜು, ಶ್ವೇತಾ ಪ್ರಭು ಹಾಗೂ ರಘುನಂದನ ಭಟ್ ಹಿನ್ನೆಲೆ ಗಾಯಕರಾಗಿದ್ದಾರೆ.

ಮರಾಠಿ ಕುಟುಂಬವೊಂದರ ಕಥೆ ಪ್ರಧಾನವಾಗಿರುವ ಈ ಚಿತ್ರದಲ್ಲಿ ಮರಾಠಿ ಭಾಷೆಯ ಪ್ರಯೋಗವೂ ಇದ್ದು, ಅದಕ್ಕೆ ಕನ್ನಡದ ಉಪ ಶೀರ್ಷಿಕೆಗಳನ್ನು ನೀಡಲಾಗಿದೆ. ಸಮಾಜದ ಮೊದಲ ಮತ್ತು ಅತಿ ಚಿಕ್ಕ ಘಟಕವಾದ ಕೌಟುಂಬಿಕ ಮೌಲ್ಯಗಳನ್ನು ಕೇಂದ್ರೀಕರಿಸುವ ಈ ಚಲನಚಿತ್ರ, ಕುಟುಂಬಗಳು ಒಡೆದು ಹೋಗುತ್ತಿರುವ ಈ ಕಾಲಘಟ್ಟದಲ್ಲಿ ಅಗತ್ಯವಾಗಿದೆ. ಕೌಟುಂಬಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಈ ಚಿತ್ರ ಒಳಗೊಂಡಿದ್ದು, ಲಂಡನ್, ಕೆನಡಾ, ಲಾಸ್ ಏಂಜಲಿಸ್, ಪ್ರಯಾಗ, ಪೂನಾ ಮೊದಲಾದ ಕಡೆ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡಿದೆ ಎಂದು ಹೇಳಿದರು.

ಚಲನಚಿತ್ರದ ಕಥೆ 80ರ ದಶಕದ್ದಾಗಿದ್ದು, ಹೆಚ್ಚಿನ ಆಧುನಿಕ ತಂತ್ರಜ್ಞಾನದ ಶೈಲಿಗಳಿಗೆ ಹೊರತಾಗಿ ಚಿತ್ರವನ್ನು ಸಾಧ್ಯವಾದಷ್ಟು ಅದೇ ಶೈಲಿಯಲ್ಲಿ ಕಟ್ಟಿಕೊಡಲು ಯತ್ನಿಸಲಾಗಿದೆ. ಒಂದು ಹಳೆಯ ಚಿತ್ರವನ್ನು ಮತ್ತೆ ಹೊಸದಾಗಿ ನೋಡಿಸುವ ಪ್ರಯತ್ನದಂತಿದೆ ಎಂದು ಯೋಗೇಶ್ ಮಾಸ್ಟರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಚಿತ್ರನಟ ಶಂಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X