Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಗುಂಡ್ಲುಪೇಟೆ ತಾಲೂಕಿನಾದ್ಯಂತ ನೀರಿಗಾಗಿ...

​ಗುಂಡ್ಲುಪೇಟೆ ತಾಲೂಕಿನಾದ್ಯಂತ ನೀರಿಗಾಗಿ ಹಾಹಾಕಾರ: ರೈತರು ಕಂಗಾಲು

ವಾರ್ತಾಭಾರತಿವಾರ್ತಾಭಾರತಿ18 April 2017 9:31 PM IST
share
​ಗುಂಡ್ಲುಪೇಟೆ ತಾಲೂಕಿನಾದ್ಯಂತ ನೀರಿಗಾಗಿ ಹಾಹಾಕಾರ: ರೈತರು ಕಂಗಾಲು

ಗುಂಡ್ಲುಪೇಟೆ, ಎ.18: ದಿನೇ ದಿನೇ ಏರುತ್ತಿರುವ ಬಿಸಿಲಿನ ಬೇಗೆ, ನೀರಿಗಾಗಿ ಹಾಹಾಕಾರ, ಜಾನುವಾರುಗಳಿಗೆ ನೀರಿಲ್ಲ ಮೇವಿಲ್ಲ, ರೈತರು ಬೆಳೆದ ಬೆಳೆ ಕೈಕೊಟ್ಟಿದೆ, ಕೂಲಿ ಕಾರ್ಮಿಕರು ಕೂಲಿ ಸಿಗದೆ ವಲಸೆ ಹೋಗುತ್ತಿದ್ದಾರೆ.

ತಾಲೂಕಿನಾದ್ಯಂತ ಹಿಂದೆಂದೂ ಕಂಡು ಕೇಳರಿಯದೆ ಭೀಕರ ಜಲಕ್ಷಾಮ ಉಂಟಾಗಿದ್ದು, ಉರಿಬಿಸಿಲನ್ನೂ ಲೆಕ್ಕಿಸಿದೆ ರೈತರು ವ್ಯವಸಾಯ ನಂಬಿ ಜೀವನ ನಡೆಸುತ್ತಿದ್ದರೆ, ಕೂಲಿಕಾರ್ಮಿಕರು ಕೈಗೆ ಕೂಲಿ ಇಲ್ಲದೆ ಕೇರಳ, ಕೊಡಗಿನ ಕಡೆ ವಲಸೆ ಹೋಗುತ್ತಿದ್ದಾರೆ. ಭೂಮಿಯಲ್ಲಿನ ಜಲಮೂಲಗಳು ಒಣಗಿ ಹೋಗುತ್ತಿದ್ದು, ಕುಡಿಯುವ ನೀರಿಗೆ ಹಾಹಾಕಾರ ಹೆಚ್ಚುತ್ತಿದ್ದರೂ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸತತವಾಗಿ ಎರಡು ವರ್ಷಗಳಿಂದ ಕೈಕೊಟ್ಟ ಮಳೆಯಿಂದಾಗಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಅಂತರ್ಜಲ ಕುಸಿತವುಂಟಾಗಿದ್ದು, ಕೊಳವೆ ಬಾವಿಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾಗಿದ್ದು, ಕುಡಿಯುವ ನೀರಿನ ಕೊರತೆಯಿಂದ ಜನ-ಜಾನುವಾರುಗಳು ಪರಿತಪಿಸುವಂತಾಗಿದೆ. ಕಬಿನಿಯಿಂದ ಪಟ್ಟಣಕ್ಕೆ ನೀರು ಸರಬರಾಜಾಗುವ ಮಾರ್ಗದ 28 ಗ್ರಾಮಗಳನ್ನು ಹೊರತು ಪಡಿಸಿ ಬೇರಾವುದೇ ಪ್ರದೇಶಕ್ಕೆ ನದಿ ನೀರು ಸರಬರಾಜಾಗುತ್ತಿಲ್ಲ. ತೆರಕಣಾಂಬಿ, ಶ್ಯಾನಡ್ರಹಳ್ಳಿ ಹಾಗೂ ಬಲಚವಾಡಿ ಗ್ರಾಮಗಳ ಕೆರೆಗಳಿಗೆ ನದಿ ನೀರು ತುಂಬಿಸಿದ ಪರಿಣಾಮವಾಗಿ ಈ ಗ್ರಾಮಗಳಲ್ಲಿ ನೀರಿನ ಕೊರತೆಯಾಗಿಲ್ಲ. ಇವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿಯೂ ನೀರಿಗಾಗಿ ಹಾಹಾಕಾರವುಂಟಾಗಿದೆ. ಅಲ್ಲದೆ ಕಳೆದ ತಿಂಗಳಿನಿಂದ ಪಟ್ಟಣಕ್ಕೂ ನೀರು ಸರಬರಾಜಾಗುತ್ತಿಲ್ಲ.

ಬಹಳ ದಿನಗಳಿಂದಲೂ ನೀರಿನ ಸಮಸ್ಯೆ ಎದುರಿಸುತ್ತಿರುವ ಶಿಂಡನಪುರ, ಚಿಕ್ಕತುಪ್ಪೂರು, ದೊಡ್ಡತುಪ್ಪೂರು, ಕಗ್ಗಳ, ಬೊಮ್ಮಲಾಪುರ, ವಡ್ಡಗೆರೆ, ಅಂಕಹಳ್ಳಿ, ಕೊಡಸೋಗೆ, ಬನ್ನಿತಾಳಪುರ, ಭೀಮನಬೀಡು, ಕೂತನೂರು, ಮಲ್ಲಯ್ಯನಪುರ, ಹಂಗಳ, ಮಗುವಿನಹಳ್ಳಿ, ಕಲಿಗೌಡನಹಳ್ಳಿ, ಹುಂಡೀಪುರ, ಬೇಗೂರು, ಮಡಹಳ್ಳಿ, ಸೋಮಹಳ್ಳಿ, ಶೀಗೆವಾಡಿ, ಚಿಕ್ಕಾಟಿ, ತೊಂಡವಾಡಿ, ಸೇರಿದಂತೆ ನೂರಕ್ಕೂ ಹೆಚ್ಚಿನ ಗ್ರಾಮಗಳಲ್ಲಿ ಸಮಸ್ಯೆ ತೀವ್ರವಾಗಿದೆ.

ಮಳೆಯಾಶ್ರಿತ ಪ್ರದೇಶವಾದ ತಾಲೂಕಿನಲ್ಲಿ ಬಹುತೇಕ ಕೃಷಿ ಚುಟುಕಚಿಕೆ ಕುಂಠಿತಗೊಂಡಿದೆ. ನೀರಾವರಿ ಜಮೀನುಗಳಲ್ಲಿ ಅಂತರ್ಜಲ ಕುಸಿತ ಕಂಡಿರುವುದರಿಂದ ದೀರ್ಘಾವದಿ ಬೆಳೆಗಳಾದ ಕಬ್ಬು, ಹರಿಶಿನ, ಬಾಳೆಯಂತಹ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಸಾಧ್ಯವಾಗದೆ ಬಹುಪಾಲು ವ್ಯವಸಾಯದ ಭೂಮಿಗಳು ಪಾಳು ಬಿದ್ದಿವೆ. ಇನ್ನು ಮಳೆಯಾಶ್ರಿತ ಅಲ್ಪಾವಧಿ ಬೆಳೆಗಳಾದ ಹತ್ತಿ, ಕಡಲೆ,ಜೋಳ, ಸೂರ್ಯಕಾಂತಿ ಬೆಳೆಬೆಳೆಯಲು ಸಾಧ್ಯವಾಗಿಲ್ಲ. ಬೆಳೆಗಳನ್ನು ನಂಬಿ ಬದುಕುತ್ತಿರುವ ರೈತರು ಬ್ಯಾಂಕುಗಳಲ್ಲಿ ಸಾಲ ಮಾಡಿ ಬೇಸಾಯದಲ್ಲಿ ತೊಡಗಿದ್ದರು ಆದರೆ ಕಳೆದ ಎರಡು ವರ್ಷಗಳಿಂದ ಸತತವಾಗಿ ಮಳೆ ಕೈಕೊಟ್ಟ ಪರಿಣಾಮ ಒಂದೆಡೆ ಮಳೆ ಕೊರತೆಯಾದರೆ ಮತ್ತೊಂದೆಡೆ ಸಾಲಭಾದೆಯಲ್ಲಿ ಸಿಲುಕಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹೆಚ್ಚಾಗಿದ್ದು, ಹಳೆಯ ಕೊಳವೆ ಬಾವಿಗಳಲ್ಲಿ ಆಳದವರೆಗೂ ಪೈಪ್ ಇಳಿಸಿ ನೀರೆತ್ತಲಾಗುತ್ತಿದ್ದರೂ ವಿದ್ಯುತ್ ಕೊರತೆಯಿಂದಾಗಿ ಸಮರ್ಪಕ ಸರಬರಾಜು ಮಾಡಲಾಗುತ್ತಿಲ್ಲ. ಓವರ್ ಹೆಡ್ ಟ್ಯಾಂಕುಗಳಿದ್ದರೂ ಇವುಗಳಿಗೆ ನೀರು ತುಂಬಿಸಿ ಎಷ್ಟೋ ಕಾಲವಾಗಿದೆ. ಬೀದಿಗೊಂದು ತೊಂಬೆಗಳಿದ್ದರೂ ಇವುಗಳಿಗೆ ನೀರು ತುಂಬಿಸುತ್ತಿಲ್ಲ. ಗ್ರಾಮಗಳಿಂದ ದೂರವಿರುವ ಕೊಳವೆ ಬಾವಿಗಳ ಬಳಿಯೇ ನೀರು ವಿತರಣೆ ಮಾಡಬೇಕಾಗಿದೆ. ಪರಿಣಾಮವಾಗಿ ಗೃಹಬಳಕೆಗೆ ಹಾಗೂ ಕುಡಿಯಲು ಅಗತ್ಯವಾದ ನೀರು ಸಂಗ್ರಹಿಸಲು ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಜಾನುವಾರುಗಳಿಗೂ ಮೇವು ಮತ್ತು ನೀರಿನ ಅಭಾವ ಉಂಟಾಗಿದ್ದು ಹಲವಾರು ಕಡೆ ಜಾನುವಾರುಗಳನ್ನು ಸಾಕಲಾಗದೆ ಮಾರಾಟ ಮಾಡಲು ಮುಂದಾಗಿದ್ದು ರೈತಾಪಿ ವರ್ಗ ಕಂಗಾಲಾಗಿದೆ. ಈ ಕೂಡಲೆ ಜಿಲ್ಲಾಡಳಿತವು ರೈತರ ನೆರವಿಗೆ ಧಾವಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X