Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬೇಡ:...

ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬೇಡ: ಎಚ್.ಎಸ್.ದೊರೆಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ18 April 2017 11:48 PM IST
share
ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬೇಡ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು,ಎ.18: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ರಾಜಕೀಯ ಪಕ್ಷಗಳ ಮಾದರಿಯ ಚುನಾವಣೆ ಬದಲಾಗಿ, ನೇರ ಆಯ್ಕೆ ವಿಧಾನ ಅನುಸರಿಸಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ನಗರದ ಕಸಾಪದಲ್ಲಿ ಅವ್ವ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಕೋ.ವೆಂ.ರಾಮಕೃಷ್ಣೇಗೌಡ ರಚಿಸಿರುವ "ವರ್ತಮಾನ" ಕೃತಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಇತ್ತೀಚಿಗೆ ಕಸಾಪ ಅಧ್ಯಕ್ಷ ಸ್ಥಾನವನ್ನು ಮಾರುಕಟ್ಟೆಯ ವಸ್ತುವನ್ನಾಗಿಸಿಕೊಂಡಿದ್ದಾರೆ. ಕಸಾಪ ಅಧ್ಯಕ್ಷಗಿರಿಯ ಸ್ಥಾನದ ಚುನಾವಣೆಯಲ್ಲಿ ಅನೇಕ ಅಕ್ರಮಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಮತದಾರರಿಗೆ ಹಣವನ್ನು ಹಂಚುತ್ತಿದ್ದಾರೆ. ಹಣದ ಬಲದಿಂದ ಗೆದ್ದು ಬಂದವರಿಂದ ಕನ್ನಡದ ರಕ್ಷಣೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಕಸಾಪ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ಬದಲಾಗಿ ನೇರವಾಗಿ ಆಯ್ಕೆ ಮಾಡುವ ವಿಧಾನವನ್ನು ಬಳಸಿಕೊಳ್ಳಬೇಕು. ಕಸಾಪದ ಜಿಲ್ಲಾಧ್ಯಕ್ಷರು, ಸದಸ್ಯರೆಲ್ಲರೂ ಒಂದು ಕಡೆ ಸೇರಿ ಅರ್ಹತೆವುಳ್ಳವರನ್ನು ನೇರವಾಗಿ ನೇಮಕ ಮಾಡಬೇಕು. ಈ ಕುರಿತು ನಿಕಟ ಪೂರ್ವ ಅಧ್ಯಕ್ಷರು, ಸಾಹಿತಿಗಳು ಒಂದು ಕಡೆ ಸೇರಿ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ ಮತ್ತು ಅನಿವಾರ್ಯ ಎಂದು ಸಲಹೆ ನೀಡಿದರು.

ಪ್ರತ್ಯೇಕ ನೀತಿ ರೂಪಿಸಲಿ: ಎಲ್ಲ ರಾಜ್ಯಗಳಲ್ಲೂ ಖಾಸಗಿ ಸಂಸ್ಥೆಯ ಉದ್ಯೋಗಗಳಲ್ಲಿ ಸ್ಥಳೀಯರಿಗೆ ಮೊದಲು ಪ್ರಾತಿನಿಧ್ಯ ನೀಡಬೇಕು. ಸ್ಥಳೀಯರಲ್ಲಿ ಅರ್ಹತೆಯನ್ನು ಪರಿಗಣಿಸಿ ಉದ್ಯೋಗಕ್ಕೆ ನೇಮಕ ಮಾಡುವಂತ ಪ್ರತ್ಯೇಕ ನೀತಿಯೊಂದನ್ನು ರೂಪಿಸಬೇಕಿದೆ. ಒಂದು ವೇಳೆ ಯೋಗ್ಯರು ಇಲ್ಲವಾದಲ್ಲಿ ಬೇರೆಯವರನ್ನು ನೇಮಕ ಮಾಡಿಕೊಳ್ಳಲ್ಲಿ. ಅದಕ್ಕೇನು ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್, ಹಿರಿಯ ಸಾಹಿತಿ ಡಾ.ವಿಜಯಾ ಸುಬ್ಬರಾಜ್, ಕವಿ ಬಾಗೂರು ಮಾರ್ಕಂಡೇಯ, ಲೇಖಕ ಡಾ.ಕೋ.ವೆಂ.ರಾಮಕೃಷ್ಣೇಗೌಡ ಸೇರಿದಂತೆ ಇತರರು ಇದ್ದರು.

ಬಳಿಗಾರ್ ಉತ್ತರ
ಕಸಾಪ ಚುನಾವಣಾ ಸ್ವರೂಪದ ಬಗ್ಗೆ ದೊರೆಸ್ವಾಮಿಯವರು ಆಡಿದ ಮಾತು ವೇದಿಕೆಯ ಮೇಲಿದ್ದ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರಿಗೆ ತಾಗಿದ್ದು ಸ್ಪಷ್ಟವಾಗಿತ್ತು. ಅವರ ಅಸಮಾಧಾನಕ್ಕೆ ಉತ್ತರಿಸಿದ ಬಳಿಗಾರ್, ಕಸಾಪ ಚುನಾವಣೆ ಆದಷ್ಟೂ ನ್ಯಾಯಸಮ್ಮತವಾಗಿಯೇ ನಡೆದಿದೆ. ಪರಿಷತ್‌ನ ಮತದಾರರು ಜಾತಿ ಲೆಕ್ಕಾಚಾರಗಳನ್ನು ಮೀರಿ, ಪ್ರಬುದ್ಧತೆಯಿಂದ ವರ್ತಿಸಿಕೊಂಡು ಬಂದಿದ್ದಾರೆ. ಇಲ್ಲದಿದ್ದರೆ ನಿಜವಾದ ಸಾಹಿತ್ಯಾಸಕ್ತರು ಇದರ ಚುಕ್ಕಾಣಿ ಹಿಡಿಯುವುದು ಸಾಧ್ಯವಿರಲಿಲ್ಲ. ಆದರೂ ಅಲ್ಲಲ್ಲಿ ಲೋಪಗಳಿವೆ ಎನ್ನುವುದು ಕೂಡ ನಿಜ ಎಂದರು.

ಈ ಹಂತದಲ್ಲಿ ಎದ್ದು ನಿಂತ ಸಭಿಕರೊಬ್ಬರು "ಸ್ವಾಮಿ, ಹೋದ ಸಲ ಬೆಂಗಳೂರು ನಗರ ಜಿಲ್ಲಾ ಕಸಾಪ ಚುನಾವಣೆಯಲ್ಲಿ ಏನ್ ನಡೀತು ಹೇಳಿ?" ಎಂದು ದನಿ ಏರಿಸಿದರು. ಆಗಲೂ ಬಳಿಗಾರ್ ಅವರು "ಈಗಾಗಲೇ ಹೇಳಿರುವಂತೆ ಕಸಾಪ ಚುನಾವಣೆಯಲ್ಲಿ ಅಲ್ಲಲ್ಲಿ ಲೋಪಗಳಾಗಿವೆ ಎನ್ನುವುದು ನಿಜ. ಅದನ್ನೆಲ್ಲ ಸರಿಪಡಿಸುವ ಕೆಲಸ ಆಗಬೇಕಾಗಿರುವುದು ವಾಸ್ತವ" ಎಂದು ಹೇಳುವ ಮೂಲಕ ಸಮಾಧಾನ ಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X