Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫ್ರೂಟಿ ಪ್ರಿಯರೇ, ಈ ವರದಿಯನ್ನೊಮ್ಮೆ ಓದಿ

ಫ್ರೂಟಿ ಪ್ರಿಯರೇ, ಈ ವರದಿಯನ್ನೊಮ್ಮೆ ಓದಿ

ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪೆನಿಗಳ ಈ 9 ಉತ್ಪನ್ನಗಳು ಬಳಕೆಗೆ ಅಯೋಗ್ಯ!

ವಾರ್ತಾಭಾರತಿವಾರ್ತಾಭಾರತಿ19 April 2017 9:27 AM IST
share
ಫ್ರೂಟಿ ಪ್ರಿಯರೇ, ಈ ವರದಿಯನ್ನೊಮ್ಮೆ ಓದಿ

ಹೊಸದಿಲ್ಲಿ, ಎ.19: ದೇಶದಲ್ಲಿ ಮಾರಾಟವಾಗುವ ಅಗ್ರಗಣ್ಯ ಕಂಪೆನಿಗಳ ಆಹಾರಪದಾರ್ಥಗಳ ಗುಣಮಟ್ಟ ತೀರಾ ಕಳಪೆ ಎನ್ನುವ ಅಂಶ ಇದೀಗ ಬಹಿರಂಗವಾಗಿದೆ.

ರಾಜಸ್ಥಾನ, ತಮಿಳುನಾಡು, ಹರ್ಯಾಣ ಹಾಗೂ ಅಸ್ಸಾಂ ರಾಜ್ಯಗಳ ಆಹಾರ ಗುಣಮಟ್ಟ ನಿಯಂತ್ರಣ ಸಂಸ್ಥೆಗಳು ಆಹಾರ ಪದಾರ್ಥ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಿದಾಗ ಬಹಳಷ್ಟು ವಸ್ತುಗಳ ಗುಣಮಟ್ಟ ನಿಗದಿತ ಮಟ್ಟದಲ್ಲಿ ಇಲ್ಲದಿರುವುದು ಪತ್ತೆಯಾಗಿದೆ. 2016ರ ಏಪ್ರಿಲ್‌ನಿಂದ 2017ರ ಜನವರಿವರೆಗೆ ಈ ವಸ್ತುಗಳ ಮಾದರಿ ಪಡೆದು ವಿಶ್ಲೇಷಣೆಗೆ ಒಳಪಡಿಸಲಾಗಿತ್ತು.

ಮಾಹಿತಿ ಹಕ್ಕು ಕಾಯ್ದೆಯಡಿ ಇಂಡಿಯನ್ ಎಕ್ಸ್ ಪ್ರೆಸ್ ಸಲ್ಲಿಸಿದ ಅರ್ಜಿಗೆ ಪಡೆದಿರುವ ಉತ್ತರದಲ್ಲಿ ಈ ಅಂಶ ಬಹಿರಂಗವಾಗಿದೆ. ಕಳಪೆ ಉತ್ಪನ್ನಗಳಲ್ಲಿ ಪೆಪ್ಸಿಕೋದ "ಮಿರಿಂಡ", ನೆಸ್ಲೆಯ "ಸಿರಿಲ್ಯಾಕ್ ವ್ಹೀಟ್", ಅದಾನಿ ಗುಂಪಿನ "ಫಾರ್ಚ್ಯೂನ್ ಎಣ್ಣೆ", ಮೇರಿಕೊ ಇಂಡಿಯಾದ "ಸಫೋಲಾ ಎಣ್ಣೆ", ಪಾರ್ಲೆ ಆಗ್ರೋ ಕಂಪೆನಿಯ "ಫ್ರೂಟಿ" ಹಾಗೂ "ಚೀಸ್" ಸೇರಿವೆ.

ಹೆರ್ಬಾಲೈಫ್‌ನ ಶಕ್ತಿದಾಯಕ ಪೇಯ, ಮುರುಗಪ್ಪ ಗುಂಪಿನ ಪ್ಯಾರಿ ಕುಡಿಯುವ ನೀರು, ಹಳ್ದಿರಾಮ್ ಅವರ ಆಲೂ ಭೂಜಿಯಾ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿದೆ ಎಂದು ಉತ್ತರದಲ್ಲಿ ಹೇಳಲಾಗಿದೆ. ಹಲವು ಪ್ರಕರಣಗಳಲ್ಲಿ ಈ ದೂರುಗಳನ್ನು ಪ್ರಶ್ನಿಸಲಾಗಿದ್ದು, ಮತ್ತೆ ಕೆಲ ಪ್ರಕರಣಗಳಲ್ಲಿ ಮಾದರಿಗಳ ಮರು ವಿಶ್ಲೇಷಣೆಗೆ ಆಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.

2017ರ ಜನವರಿ 12ರ ದಿನಾಂಕ ನಮೂದಿಸಿರುವ "ಮಿರಿಂಡಾ" ಗುಣಮಟ್ಟವನ್ನು ವಿಶ್ಲೇಷಿಸಿದ ಐದು ವರದಿಗಳು ಕೂಡಾ ಇದು ಕಳಪೆ ಗುಣಮಟ್ಟದಿಂದ ಕೂಡಿರುವುದು ಸುರಕ್ಷತಾ ಅಧಿಕಾರಿ ನಡೆಸಿದ ವಿಶ್ಲೇಷಣೆಯಿಂದ ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿವೆ. ಇದು ಕುಡಿಯಲು ಯೋಗ್ಯವಲ್ಲ ಎಂದು ಹೇಳಿದೆ. ಈ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಪ್ರಶ್ನಿಸಿದಾಗ, "ಕಾನೂನು ಕ್ರಮ ಕೈಗೊಳ್ಳಲು ಆಹಾರ ಹಾಗೂ ಔಷಧ ಅಡ್ಮಿನಿಸ್ಟ್ರೇಷನ್ (ಎಫ್‌ಡಿಎ) ಆಯುಕ್ತರಿಗೆ ಪತ್ರ ಬರೆಯಲಾಗಿದೆ" ಎಂಬ ಉತ್ತರ ಬಂದಿದೆ. ಪದೇ ಪದೇ ಪರೀಕ್ಷೆ ನಡೆಸಿದಾಗಲೂ "ಕಳಪೆ ಗುಣಮಟ್ಟದ್ದು ಹಾಗೂ ಅಸುರಕ್ಷಿತ" ಎಂಬ ವರದಿಗಳು ಬಂದಿದೆ. ಆದರೆ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ, ಇದು ನಮ್ಮ ಕಚೇರಿಗೆ ಸಂಬಂಧಿಸಿದ್ದಲ್ಲ ಎಂಬ ಉತ್ತರ ಬಂದಿದೆ.

ಆದರೆ ಇದುವರೆಗೆ 2016ರ ಮೇ 18ರ ಒಂದು ವರದಿ ಮಾತ್ರ ನಮ್ಮ ಕೈಸೇರಿದೆ. ಇದರ ಮರು ವಿಶ್ಲೇಷಣೆಗೆ ಮನವಿ ಮಾಡಿದ್ದೇವೆ ಎನ್ನುವುದು ಪೆಪ್ಸಿಕೋ ಇಂಡಿಯಾ ಸಮರ್ಥನೆ. ಹೀಗೆ ಬಹುತೇಕ ಕಂಪೆನಿಗಳು ಕೂಡಾ ಮರು ವಿಶ್ಲೇಷಣೆಗೆ ಮನವಿ ಮಾಡಿದ್ದಾಗಿ ಹೇಳಿಕೊಂಡು ಜಾರಿಕೊಂಡಿವೆ. ಹರ್ಬಲ್‌ಲೈಫ್ ಇಂಟರ್‌ನ್ಯಾಷನಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಫ್ರೆಶ್ ಎನರ್ಜಿ ಡ್ರಿಂಕ್ ಮಿಕ್ಸ್ ಗುಣಮಟ್ಟವೂ ಕಳಪೆ ಎಂದು 2015ರ ಮೇ 30ರ ಪ್ರಯೋಗಾಲಯ ವರದಿ ಹೇಳಿದೆ. ಈ ಬಗ್ಗೆ ಎಡಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾಗಿ ಅಧಿಕಾರಿಗಳು ಹೇಳುತ್ತಾರೆ. ಕಂಪೆನಿ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು, ಇದು ನ್ಯಾಯಾಲಯದಲ್ಲಿ ಇರುವ ಪ್ರಕರಣವಾಗಿರುವುದರಿಂದ ಅಭಿಪ್ರಾಯ ವ್ಯಕ್ತಪಡಿಸುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂಬ ಸಬೂಬು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X