Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಅಧಿಕೃತ ನಕಾಶೆಯಲ್ಲಿ ಅರುಣಾಚಲ...

ತನ್ನ ಅಧಿಕೃತ ನಕಾಶೆಯಲ್ಲಿ ಅರುಣಾಚಲ ಪ್ರದೇಶದ ಆರು ಸ್ಥಳಗಳ ಹೆಸರುಗಳನ್ನು ಬದಲಿಸಿದ ಚೀನಾ

ವಾರ್ತಾಭಾರತಿವಾರ್ತಾಭಾರತಿ19 April 2017 3:21 PM IST
share
ತನ್ನ ಅಧಿಕೃತ ನಕಾಶೆಯಲ್ಲಿ ಅರುಣಾಚಲ ಪ್ರದೇಶದ ಆರು ಸ್ಥಳಗಳ ಹೆಸರುಗಳನ್ನು ಬದಲಿಸಿದ ಚೀನಾ

ಹೊಸದಿಲ್ಲಿ,ಎ.19: ಚೀನಾ ಏಕಪಕ್ಷೀಯವಾಗಿ ಅರುಣಾಚಲ ಪ್ರದೇಶದ ಆರು ಸ್ಥಳಗಳ ಹೆಸರುಗಳನ್ನು ಬದಲಿಸದ್ದು, ಇವುಗಳಿಗೆ ಚೀನಿ ಹೆಸರುಗಳನ್ನಿರಿಸಿದೆ. ಇದು ಈ ತಿಂಗಳ ಆರಂಭದಲ್ಲಿ ಈ ರಾಜ್ಯಕ್ಕೆ ಟಿಬೆಟಿಯನ್‌ರ ಆಧ್ಯಾತ್ಮಿಕ ಗುರು ದಲಾಯಿ ಲಾಮಾ ಅವರ ಭೇಟಿಯ ವಿರುದ್ಧ ಚೀನಾದ ಪ್ರತೀಕಾರದ ಮೊದಲ ಸಂಕೇತವಾಗಿರುವಂತಿದೆ.

ಈ ಪ್ರದೇಶದ ‘ಸಾರ್ವಭೌಮತೆ ’ಯನ್ನು ಭಾರತಕ್ಕೆ ತೋರಿಸಲು ಹೆಸರುಗಳನ್ನು ಬದಲಿಸಲಾಗಿದೆ ಎಂದು ಚೀನಾದ ಸರಕಾರಿ ಮಾಧ್ಯಮವು ಹೇಳಿದೆ. ವಿವಾದಿತ ಪ್ರದೇಶಕ್ಕೆ ಲಾಮಾ ಅವರ ಭೇಟಿಗೆ ಅವಕಾಶ ನೀಡುತ್ತಿರುವುದಕ್ಕಾಗಿ ಪರಿಣಾಮಗಳನ್ನೆದುರಿಸ ಬೇಕಾಗುತ್ತದೆ ಎಂದು ಚೀನಾ ಹಲವಾರು ಸಂದರ್ಭಗಳಲ್ಲಿ ಭಾರತಕ್ಕೆ ಎಚ್ಚರಿಕೆ ನೀಡಿತ್ತು.

ದಕ್ಷಿಣ ಟಿಬೆಟ್‌ನಲ್ಲಿಯ ಆರು ಸ್ಥಳಗಳ ಹೆಸರುಗಳನ್ನು ಚೀನಾ ಬದಲಿಸಿದೆ. ಈ ಪ್ರದೇಶವು ಚೀನಾದ ಭೂಭಾಗವಾಗಿದೆಯಾದರೂ ಕೆಲವು ಭಾಗಗಳು ಭಾರತದ ನಿಯಂತ್ರಣದಲ್ಲಿವೆ ಎಂದು ಸರಕಾರಿ ಮಾಧ್ಯಮವು ಹೇಳಿದೆ.

ಸ್ವಾಯತ್ತ ಟಿಬೆಟ್ ಪ್ರದೇಶದೊಂದಿಗೆ ಧಾರ್ಮಿಕವಾಗಿ ನಿಕಟ ನಂಟು ಹೊಂದಿರುವ ಅರುಣಾಚಲ ಪ್ರದೇಶದ ಹೆಚ್ಚಿನ ಭಾಗಗಳು ದಕ್ಷಿಣ ಟಿಬೆಟ್ ಎಂದು ಚೀನಾ ಪ್ರತಿಪಾದಿಸುತ್ತಿದೆ ಮತ್ತು ದಲಾಯಿ ಲಾಮಾರನ್ನು ಚೀನದ ಮುಖ್ಯಭೂಮಿಯೊಳಗೆ ಸ್ವತಂತ್ರ ಟಿಬೆಟ್‌ನ್ನು ರೂಪಿಸಲು ಪ್ರಯತ್ನಿಸುತ್ತಿರುವ ಪ್ರತ್ಯೇಕತಾವಾದಿ ಎಂದು ಬಣ್ಣಿಸಿದೆ.

ಚೀನಾದ ಅಧಿಕೃತ ನಕಾಶೆಗಳಲ್ಲಿ ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್ ಎಂದೇ ತೋರಿಸಲಾಗುತ್ತಿದೆ.

ರೋಮನ್ ಅಕ್ಷರಮಾಲೆಯನ್ನು ಬಳಸಿ ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ ವೋಗ್ಯಾನ್ಲಿಂಗ್,ಮಿಲಾ ರಿ,ಕಿಡೆಂಗಾರ್ಬೊ ರಿ, ಮೈಂಕುಕಾ, ಬುಮೊ ಲಾ ಮತ್ತು ನಮ್ಕಾಪಬ್ ರಿ ಎಂದು ನಾಮಕರಣ ಮಾಡಲಾಗಿದೆ ಎಂದು ವರದಿಯು ತಿಳಿಸಿದೆ.

ದಲಾಯಿ ಲಾಮಾ ಅವರ ಒಂಭತ್ತು ದಿನಗಳ ಅರುಣಾಚಲ ಪ್ರದೇಶ ಪ್ರವಾಸವು ಎ.12ರಂದು ಅಂತ್ಯಗೊಂಡಿದ್ದು, ಮರುದಿನವೇ ಈ ಹೊಸ ಹೆಸರುಗಳನ್ನಿಡಲಾಗಿದೆ. ಹೆಸರುಗಳ ಬದಲಾವಣೆಯು ಚೀನಾ ತನ್ನ ನಿಲುವನ್ನು ಕಠಿಣಗೊಳಿಸುತ್ತಿದೆ ಮತ್ತು ಅರುಣಾಚಲ ಪ್ರದೇಶ,ವಿಶೇಷವಾಗಿ ತವಾಂಗ್ ತನ್ನದೆನ್ನುವ ಪ್ರತಿಪಾದನೆಗೆ ಒತ್ತು ನೀಡುತ್ತಿದೆ ಎನ್ನುವುದನ್ನು ಸೂಚಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X