Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕಸ್ತೂರಿ ರಂಗನ್ ವರದಿ ವಿರೋಧಿಸಿ...

​ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಿರವಾಸೆ-ಸುಗುಡುವಾನಿ ಗ್ರಾಮಸ್ಥರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ19 April 2017 5:23 PM IST
share
​ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಿರವಾಸೆ-ಸುಗುಡುವಾನಿ ಗ್ರಾಮಸ್ಥರಿಂದ ಧರಣಿ

ಚಿಕ್ಕಮಗಳೂರು, ಎ.19: ಕಸ್ತೂರಿ ರಂಗನ್ ವರದಿಯಲ್ಲಿ ಜನ ವಸತಿ-ಕೃಷಿ-ಪ್ಲಾಂಟೇಷನ್ ಹಾಗೂ ನಿವೇಶನ ಹಂಚಿಕೆಗಾಗಿ ಮೀಸಲಿಟ್ಟಿರುವ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಿಂದ ಕೈ ಬಿಡುವಂತೆ ಆಗ್ರಹಿಸಿ ಸಿರವಾಸೆ ಗ್ರಾಪಂ ವ್ಯಾಪ್ತಿಯ ಸಿರವಾಸೆ-ಸುಗುಡುವಾನಿ ಗ್ರಾಮಸ್ಥರು ನಗರದ ಆಜಾದ್ ಪಾರ್ಕ್‌ನಲ್ಲಿ ಬುಧವಾರ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.

ಜಾಗರ ಹೋಬಳಿ ಕಸಾಪ ಅಧ್ಯಕ್ಷ ರವಿ ಕೆಳವಾಸೆ ಮಾತನಾಡಿ, ಹಸಿರು ಪೀಠದಲ್ಲಿ ಕಲಂ 4ರ ಸೂಕ್ಷ್ಮ ಪ್ರದೇಶಗಳೆಂದು ಕಾಣಿಸಿರುವುದು ಸರಿಯಲ್ಲ. ಈ ವಿಚಾರದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ 5 ತಾಲ್ಲೂಕುಗಳ 147 ಗ್ರಾಮಗಳು ಕಸ್ತೂರಿ ರಂಗನ್ ವರದಿಯಂತೆ ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಗೆ ಸೇರುತ್ತವೆ. ಚಿಕ್ಕಮಗಳೂರು ತಾಲ್ಲೂಕಿನ 27 ಗ್ರಾಮಗಳು, ಕೊಪ್ಪ ತಾಲ್ಲೂಕಿನ 32, ಮೂಡಿಗೆರೆ ತಾಲ್ಲೂಕಿನ 27, ಎನ್.ಆರ್.ಪುರ ತಾಲ್ಲೂಕಿನ 35 ಹಾಗೂ ಶೃಂಗೇರಿ ತಾಲ್ಲೂಕಿನ 26 ಗ್ರಾಮಗಳು ವರದಿಯಲ್ಲಿ ಸೇರಿವೆ. ಸಿರವಾಸೆ, ಸುಗುಡುವಾನಿ, ಜಾಗರ, ಬೊಗಸೆ, ಬಾಸಪುರ, ಕಡವತಿ, ಬಿದರೆ ಇತ್ಯಾದಿ ಗ್ರಾಮಗಳು ಒಳಪಡುತ್ತಿವೆ ಎಂದು ಹೇಳಿದರು.

ಆದರೆ ಗ್ರಾಮಗಳಲ್ಲಿ ತಲತಲಾಂತರಗಳಿಂದ ವಾಸಿಸುತ್ತಿರುವ ಇಲ್ಲಿನ ಜನರು ಪರಿಸರ ಸ್ನೇಹಿಯಾಗಿ ಕೃಷಿ ಚಟುವಟಿಕೆ ನಡೆಸಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಕಸ್ತೂರಿ ರಂಗನ್‌ ಅವೈಜ್ಞಾನಿಕ ಸಮೀಕ್ಷೆ ನಡೆಸಿ ಪಶ್ಚಿಮ ಘಟ್ಟ ಹಾದು ಹೋಗಿರುವ ಭೂಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶಗಳೆಂದು ಘೋಷಿಸಿದ್ದಾರೆ. ಆದರೆ ಈ ವ್ಯಾಪ್ತಿಗಳಲ್ಲಿರುವ ಜನ ವಸತಿ, ಕೃಷಿ ಪ್ರದೇಶವನ್ನು ಅವರು ಗಣನೆ ತೆಗೆದುಕೊಂಡಿರುವುದಿಲ್ಲ ಎಂದು ತಿಳಿಸಿದರು.

ನೂರಾರು ವರ್ಷಗಳಿಂದ ದಟ್ಟ ಮಲೆನಾಡು ಪ್ರದೇಶಗಳೊಗೆ ವಾಸಿಸುತ್ತಿರುವ ರೈತರು, ಕೃಷಿ ಕೂಲಿ ಕಾರ್ಮಿಕರು, ಬೆಳೆಗಾರರು, ಪರಿಸರ ಸ್ನೇಹಿಯಾಗಿ ಬದುಕು ನಡೆಸುತ್ತಿದ್ದು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಈ ಪ್ರದೇಶ ವಾಸಿಸುತ್ತಿರುವ ಜನರ ಬದುಕು ಸಂಪೂರ್ಣವಾಗಿ ನಿರ್ನಾಮವಾಗಲಿದೆ. ಆದ್ದರಿಂದ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವಾಗ, ಜನ ವಸತಿ, ಪ್ಲಾಂಟೇಷನ್ ಹಾಗೂ ನಿವೇಶನ ಹಂಚಿಕೆಗಾಗಿ ಮೀಸಲಿಟ್ಟಿರುವ ಪರಿಸರ ಸೂಕ್ಮ ಪ್ರದೇಶಗಳ ವರದಿಯಿಂದ ಕೈಬಿಡುವಂತೆ ಆಗ್ರಹಿಸಿದ್ದಾರೆ.

ಸಿರವಾಸೆ ಗ್ರಾಪಂ ಅಧ್ಯಕ್ಷೆ ರೂಪಾ, ಉಪಾಧ್ಯಕ್ಷೆ ಹೂವಮ್ಮ, ಜಿಪಂ ಸದಸ್ಯೆ ಕವಿತಾ ಲಿಂಗರಾಜು ಮುಖಂಡರಾದ ಜೇಸಿಂತ್ ಅನಿಲ್ ಕುಮಾರ್, ಜಾರ್ಜ್ ಆಸ್ಟಿನ್, ಪ್ರೇಮಾಕ್ಷಿ ಅಮೀನ್, ಜೆ.ಸಿ.ಲಕ್ಷ್ಮಣ್, ವಿಶ್ವನಾಥ್, ಕೆ.ಜಿ.ಪ್ರಕಾಶ್, ಪ್ರೇಂಕುಮಾರ್, ಮಲ್ಲಿಕಾ ಕುಳ್ಳನ್, ವಾಸು ಪೂಜಾರಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X