Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂಕೋರ್ಟ್ ತೀರ್ಪು - ಅಡ್ವಾಣಿ,...

ಸುಪ್ರೀಂಕೋರ್ಟ್ ತೀರ್ಪು - ಅಡ್ವಾಣಿ, ಜೋಷಿ ರಾಷ್ಟ್ರಪತಿ ಕನಸಿಗೆ ಹಿನ್ನಡೆ

ಮೋದಿ ಒಳಸಂಚು - ಲಾಲೂ

ವಾರ್ತಾಭಾರತಿವಾರ್ತಾಭಾರತಿ19 April 2017 7:43 PM IST
share
ಸುಪ್ರೀಂಕೋರ್ಟ್ ತೀರ್ಪು - ಅಡ್ವಾಣಿ, ಜೋಷಿ ರಾಷ್ಟ್ರಪತಿ ಕನಸಿಗೆ ಹಿನ್ನಡೆ

ಹೊಸದಿಲ್ಲಿ, ಎ.19: ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಒಳಸಂಚು ನಡೆಸಿದ ಆರೋಪದಲ್ಲಿ ಹಿರಿಯ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿಮನೋಹರ ಜೋಷಿ ಅವರನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಯಾಗಬೇಕು ಎಂಬ ಈ ಇಬ್ಬರು ಮುಖಂಡರ ಮಹಾತ್ವಾಕಾಂಕ್ಷೆಗೆ ಹಿನ್ನಡೆ ಉಂಟಾಗಿದೆ.

ರಾಷ್ಟ್ರಪತಿ ಹುದ್ದೆಗೆ ಚುನಾವಣೆ ಜೂನ್-ಜುಲೈ ತಿಂಗಳಲ್ಲಿ ನಡೆಯಲಿದೆ. 89ರ ಹರೆಯದ ಅಡ್ವಾಣಿ ಮತ್ತು 83ರ ಹರೆಯದ ಜೋಷಿ ಅವರನ್ನು ರಾಷ್ಟ್ರಪತಿ ಹುದ್ದೆಯ ಕಣದಲ್ಲಿರುವ ಪ್ರಧಾನ ಅಭ್ಯರ್ಥಿಗಳು ಎಂದು ಬಿಂಬಿಸಲಾಗಿತ್ತು.

   1992ರಲ್ಲಿ ನಡೆದ ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಅಡ್ವಾಣಿ, ಜೋಷಿ, ಉಮಾಭಾರತಿ ಹಾಗೂ ಇತರ 13 ಮಂದಿ ಕ್ರಿಮಿನಲ್ ಒಳಸಂಚು ಪ್ರಕರಣದ ವಿಚಾರಣೆ ಎದುರಿಸಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ. ಇದೀಗ ಲಕ್ನೊದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಎರಡು ವರ್ಷಗಳೊಳಗೆ ಪೂರ್ಣಗೊಳಿಸಬೇಕು ಮತ್ತು ವಿಚಾರಣಾ ನ್ಯಾಯಾಧೀಶರನ್ನು ವರ್ಗಾಯಿಸಕೂಡದು ಎಂದು ನ್ಯಾಯಾಲಯ ಸೂಚಿಸಿದೆ. 16ನೇ ಶತಮಾನದ ಬಾಬರಿ ಮಸೀದಿ ಕಟ್ಟಡವನ್ನು ಗುಂಪೊಂದು ದ್ವಂಸಗೊಳಿಸುವ ಮೊದಲು ರಾಮಕಥಾ ಕುಂಜದ ವೇದಿಕೆಯಲ್ಲಿ ಭಾಷಣ ಮಾಡಿದ್ದರೆಂಬ ಆರೋಪದ ಬಗ್ಗೆ ವಿಚಾರಣೆಯನ್ನು ಅಡ್ವಾಣಿ, ಜೋಷಿ, ಉಮಾಭಾರತಿ, ವಿನಯ್ ಕಟಿಯಾರ್ (ಬಿಜೆಪಿ ನಾಯಕರು), ಸಾಧ್ವಿ ರಿತಂಬರಾ, ದಿವಂಗತ ಆಚಾರ್ಯ ಗಿರಿರಾಜ ಕಿಶೋರ್, ಅಶೋಕ್ ಸಿಂಘಾಲ್ ಮತ್ತು ವಿಷ್ಣು ಹರಿ ದಾಲ್ಮಿಯ(ವಿಹಿಂಪ) ಎದುರಿಸುತ್ತಿದ್ದರು.

  ಪಕ್ಷದಲ್ಲಿ ತನ್ನನ್ನು ವಯೋವೃದ್ಧರೆಂದು ಮೂಲೆಗುಂಪು ಮಾಡಲಾಗುತ್ತಿದ್ದು ರಾಜಕೀಯ ನಿವೃತ್ತಿಗೆ ಪಕ್ಷದ ಕೆಲವರಿಂದಲೇ ಪರೋಕ್ಷ ಸಲಹೆ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ರಂಗದಲ್ಲಿ ತನ್ನ ಪಾತ್ರ ಬಹುತೇಕ ನೇಪಥ್ಯಕ್ಕೆ ಸರಿದಿದೆ ಎಂದು ಅಡ್ವಾಣಿ ‘ಲೋಕಮತ’ ಪತ್ರಿಕೆಗೆ ಇತ್ತೀಚೆಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು. ಅದಾಗ್ಯೂ, ವಯಸ್ಸು ಮತ್ತು ಕಾರ್ಯ ನಿರ್ವಹಿಸುವ ಸಾಮರ್ಥ್ಯಕ್ಕೆ ಪರಸ್ಪರ ಸಂಬಂಧವಿಲ್ಲ ಎಂದೂ ಅವರು ಒತ್ತಿಹೇಳಿದ್ದರು.

2013ರಲ್ಲಿ ಮೋದಿಯನ್ನು ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದಾಗ ಅಡ್ವಾಣಿ ತೀವ್ರ ಅಸಮಾಧಾನಗೊಂಡಿದ್ದರು. ಆ ಬಳಿಕ, ತಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸಂದರ್ಭ ಸಿಕ್ಕಾಗಲೆಲ್ಲಾ ಹೇಳುತ್ತಿದ್ದರು.

 ಮೋದಿ ಒಳಸಂಚು - ಲಾಲೂ : ಅಡ್ವಾಣಿ ವಿರುದ್ಧದ ಒಳಸಂಚಿನ ಆರೋಪವನ್ನು ಪುನರೂರ್ಜಿತಗೊಳಿಸಿರುವ ಕ್ರಮದ ಹಿಂದೆ ಮೋದಿಯವರ ಒಳಸಂಚಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಹೇಳಿದ್ದಾರೆ. ಸಿಬಿಐ ಮೋದಿಯ ಕೈಗೊಂಬೆಯಾಗಿದೆ. ಬಾಬರಿ ಪ್ರಕರಣದಲ್ಲಿ ಒಳಸಂಚು ನಡೆಸಿರುವ ಪ್ರಕರಣವನ್ನು ಪುನರೂರ್ಜಿತಗೊಳಿಸುವುದಾಗಿ ಸಿಬಿಐ ತಿಳಿಸಿದೆ. ಅಡ್ವಾಣಿ ರಾಷ್ಟ್ರಪತಿಯಾಗಲಿದ್ದಾರೆ ಎಂಬ ವರದಿ ಇತ್ತು. ಇದನ್ನು ತಪ್ಪಿಸಲು ಮೋದಿ ಹೂಡಿದ ಒಳಸಂಚಿನ ಫಲವಿದು ಎಂದು ಲಾಲೂ ಆರೋಪಿಸಿದ್ದಾರೆ.

 ಇದೀಗ, ಅಡ್ವಾಣಿ ಮತ್ತು ಜೋಷಿಗೆ ಬಿಜೆಪಿ ಮುಖಂಡರು ಬೆಂಬಲ ಸೂಚಿಸಿದ್ದರೂ ಈ ಇಬ್ಬರು ಮುಖಂಡರು ತಮ್ಮ ಸಂಸದ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವಂತೆ ಒತ್ತಡ ಬರುವ ಸಾಧ್ಯತೆಯಿದೆ ಎಂದೂ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಾವು ಸಚಿವ ಸಂಪುಟಕ್ಕೆ ಅಥವಾ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹಿರಿಯ ಬಿಜೆಪಿ ನಾಯಕಿ ಉಮಾ ಭಾರತಿ ಸ್ಪಷ್ಟಪಡಿಸಿದ್ದಾರೆ.

ಅದೇನಿದ್ದರೂ, ರಾಜಕೀಯವಾಗಿ ಈ ಪ್ರಕರಣ ಬಿಜೆಪಿಗೆ ಲಾಭದಾಯಕವಾಗಲಿದೆ ಎನ್ನಲಾಗುತ್ತಿದೆ. ಈ ವಿಷಯವನ್ನು ಮುಂದಿಟ್ಟುಕೊಂಡು ಸಂಘಪರಿವಾರ , ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಷಯಕ್ಕೆ ಜನರ ಬೆಂಬಲ ಸಂಗ್ರಹಿಸಿ 2019ರ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಳಿಸಲು ಮುಂದಾಗುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X