Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಚ್-1ಬಿ ವೀಸಾ ಕಾರ್ಯಕ್ರಮ ಮರುಪರಿಶೀಲನೆ...

ಎಚ್-1ಬಿ ವೀಸಾ ಕಾರ್ಯಕ್ರಮ ಮರುಪರಿಶೀಲನೆ : ಸರಕಾರಿ ಆದೇಶಕ್ಕೆ ಟ್ರಂಪ್ ಸಹಿ

ವಾರ್ತಾಭಾರತಿವಾರ್ತಾಭಾರತಿ19 April 2017 8:18 PM IST
share
ಎಚ್-1ಬಿ ವೀಸಾ ಕಾರ್ಯಕ್ರಮ ಮರುಪರಿಶೀಲನೆ : ಸರಕಾರಿ ಆದೇಶಕ್ಕೆ ಟ್ರಂಪ್ ಸಹಿ

ವಾಶಿಂಗ್ಟನ್, ಎ. 19: ಗರಿಷ್ಠ ಕೌಶಲ ಹೊಂದಿರುವ ವಿದೇಶೀಯರಿಗಾಗಿರುವ ಎಚ್-1ಬಿ ವೀಸಾ ಯೋಜನೆಯನ್ನು ಮರುಪರಿಶೀಲಿಸಿ ಅದರಲ್ಲಿ ಮಾರ್ಪಾಡುಗಳನ್ನು ತರುವಂತೆ ಫೆಡರಲ್ ಸಂಸ್ಥೆಗಳಿಗೆ ಸೂಚನೆ ನೀಡುವ ಸರಕಾರಿ ಆದೇಶವೊಂದಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಸಹಿ ಹಾಕಿದ್ದಾರೆ.

‘‘ಅತ್ಯಂತ ಪರಿಣತ ಹಾಗೂ ಅತ್ಯಂತ ಹೆಚ್ಚು ವೇತನ ಪಡೆಯುವವರಿಗೆ’’ ಆದ್ಯತೆ ಲಭಿಸುವಂತೆ ವೀಸಾ ಕಾರ್ಯಕ್ರಮದಲ್ಲಿ ಬದಲಾವಣೆಯಾಗಬೇಕು ಎಂದು ಆದೇಶ ಹೇಳುತ್ತದೆ.

ಅತ್ಯಂತ ಕೌಶಲಭರಿತ ವಿದೇಶೀಯರಿಗಾಗಿ ಅಮೆರಿಕ ಪ್ರತಿ ವರ್ಷ 85,000 ಎಚ್-1ಬಿ ವೀಸಾಗಳನ್ನು ನೀಡುತ್ತದೆ. ಈ ಪೈಕಿ 65,000 ಮಂದಿಯನ್ನು ವಿದೇಶಗಳಿಂದ ತರಿಸಲಾಗುತ್ತದೆ ಹಾಗೂ ಅಮೆರಿಕದ ಕಾಲೇಜುಗಳಲ್ಲಿ ಕಲಿತವರಿಗೆ 20,000 ವೀಸಾಗಳನ್ನು ನೀಡಲಾಗುತ್ತದೆ. ಈ ವೀಸಾಗಳಿಗೆ ಭಾರೀ ಬೇಡಿಕೆಯಿರುವುದರಿಂದ ವೀಸಾ ವಿಜೇತರನ್ನು ಲಾಟರಿ ಮೂಲಕ ಆರಿಸಲಾಗುತ್ತದೆ.

‘‘ಈಗ ಎಚ್-1ಬಿ ವೀಸಾಗಳನ್ನು ಸಂಪೂರ್ಣವಾಗಿ ಲಾಟರಿ ಮೂಲಕ ಆರಿಸಲಾಗುತ್ತದೆ. ಅದು ತಪ್ಪು’’ ಎಂದು ವಿಸ್‌ಕಾನ್ಸಿನ್ ರಾಜ್ಯದ ಕಾರ್ಖಾನೆಯೊಂದರಲ್ಲಿ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ ಹೇಳಿದರು.

‘‘ಬದಲಿಗೆ ಈ ವೀಸಾಗಳನ್ನು ಅತ್ಯಂತ ಪರಿಣತ ಹಾಗೂ ಅತ್ಯಧಿಕ ವೇತನ ಪಡೆಯುವ ಅರ್ಜಿದಾರರಿಗೆ ನೀಡಬೇಕು ಹಾಗೂ ಅಮೆರಿಕನ್ನರ ಸ್ಥಾನಗಳಲ್ಲಿ ಇತರರನ್ನು ನೇಮಿಸಲು ಈ ವೀಸಾಗಳನ್ನು ಬಳಸಬಾರದು’’ ಎಂದು ಅವರು ನುಡಿದರು.

ಭಾರತೀಯ ನೌಕರರನ್ನು ಕಾಡುತ್ತಿರುವ ಅಸ್ಥಿರತೆ

ಎಚ್-1ಬಿ ವೀಸಾ ಕಾರ್ಯಕ್ರಮದ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಭಾರತೀಯ ಐಟಿ ಕ್ಷೇತ್ರದ ನೌಕರರ ಮೇಲೆ ತೂಗುಗತ್ತಿಯಗಿ ಪರಿಣಮಿಸಿದೆ. ಈ ನಿರ್ಬಂಧಗಳಿಂದಾಗಿ ತಮ್ಮ ನೌಕರರನ್ನು ಅಮೆರಿಕಕ್ಕೆ ಕಳುಹಿಸಲು ಭಾರತೀಯ ಐಟಿ ಕಂಪೆನಿಗಳಿಗೆ ಕಷ್ಟವಾಗುತ್ತದೆ. ಯಾಕೆಂದರೆ ಅದು ಹೆಚ್ಚಿನ ವೆಚ್ಚದಾಯಕ ಕೆಲಸವಾಗುತ್ತದೆ.

ಅದೇ ವೇಳೆ, ಡಾಲರ್‌ಎದುರು ರೂಪಾಯಿ ವೌಲ್ಯ ಏರುತ್ತಿರುವುದರಿಂದಲೂ ಭಾರತೀಯ ಐಟಿ ಕಂಪೆನಿಗಳು ನಷ್ಟ ಅನುಭವಿಸುತ್ತಿವೆ ಎನ್ನಲಾಗಿದೆ. ಇವುಗಳೆಲ್ಲದರ ಪರಿಣಾಮವಾಗಿ ಭಾರತೀಯ ಐಟಿ ಕಂಪೆನಿಗಳು ಬದುಕುಳಿಯುವುದಕ್ಕಾಗಿ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಕ್ರಮಕ್ಕೆ ಮುಂದಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X