Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಡ್ಡಮತದಾನ ಮಾಡಲು ನಾನು ಹೇಳಿಲ್ಲ:...

ಅಡ್ಡಮತದಾನ ಮಾಡಲು ನಾನು ಹೇಳಿಲ್ಲ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಿದ್ಧ; ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 April 2017 11:12 PM IST
share
ಅಡ್ಡಮತದಾನ ಮಾಡಲು ನಾನು ಹೇಳಿಲ್ಲ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೂ ಸಿದ್ಧ; ಕುಮಾರಸ್ವಾಮಿ

ನಾಗಮಂಗಲ, ಎ.19: ಇತ್ತೀಚೆಗೆ ನಾಗಮಂಗಲದಲ್ಲಿ ನಡೆದ ಸಮಾವೇಶದಲ್ಲಿ ಜೆಡಿಎಸ್‌ ನಿಂದ ಅಮಾನತಾದ ಶಾಸಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ತಳ್ಳಿಹಾಕಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಶಾಸಕರು ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಿದ್ದಾರೆ.

ತಾಲೂಕಿನ ಕದಬಹಳ್ಳಿ ದೇವರಮಾವಿನಕೆರೆ ಗ್ರಾಮದ ಲಕ್ಷ್ಮಿದೇವಿ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಲು ತಾನು ಹೇಳಿರಲಿಲ್ಲ. ಈ ಬಗ್ಗೆ ಧರ್ಮಸ್ಥಳದಲ್ಲಿ ಆಣೆ ಮಾಡಲು ಸಿದ್ಧ ಎಂದರು.

"ನನ್ನ ಪಕ್ಷದಿಂದಲೇ ರಾಜ್ಯಸಭೆಗೆ ಅಭ್ಯರ್ಥಿಯನ್ನು ನಿಲ್ಲಿಸಿರುವಾಗ ಬೇರೆ ಪಕ್ಷಕ್ಕೆ ಮತ ಹಾಕಿ ಎಂದು ನಾನು ಹೇಳಲು ಸಾಧ್ಯವೆ? ಜಮೀರ್ ಅಹಮದ್ ಆರೋಪದಲ್ಲಿ ಎಷ್ಟು ಸತ್ಯವಿದೆ ಎಂಬುದು ಜನರಿಗೆ ಗೊತ್ತಿದೆ" ಎಂದು ಅವರು ಹೇಳಿದರು.

'ತನ್ನ ಕುಟುಂಬದವರಿಂದಲೇ ಕುಮಾರಸ್ವಾಮಿ ಬೀದಿಗೆ ಬರುತ್ತಾರೆಂಬ' ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜನ ಸೇವೆಗಾಗಿ ಬೀದಿಗಿಳಿದು ರಾಜಕಾರಣ ಮಾಡುತ್ತೇನೆ, ಅವರಂತೆ (ಬಾಲಕೃಷ್ಣ) ಏರ್‌ಕಂಡೀಷನರ್ ಕೊಠಡಿಯಲ್ಲಿ ಕುಳಿತು ರಾಜಕೀಯ ಮಾಡುವುದಿಲ್ಲ ಎಂದು ತಿರುಗೇಟು ನೀಡಿದರು.'ಪಕ್ಷದಲ್ಲಿದ್ದಾಗ ತನ್ನನ್ನು ರಾಜಕೀಯವಾಗಿ ತುಳಿಯಲು ದೇವೇಗೌಡರು ನೂರು ಬಾರಿ ಪ್ರಯತ್ನ ಮಾಡಿದ್ದರು' ಎಂಬ ಚಲುವರಾಯಸ್ವಾಮಿ ಆರೋಪದಲ್ಲಿ ಸತ್ಯವಿಲ್ಲ. ತಮ್ಮ ಮೇಲಿನ ಜನರ ಆಕ್ರೋಶ ಕಡಿಮೆ ಮಾಡಿಕೊಳ್ಳಲು ಸುಳ್ಳು ಆರೋಪಗಳನ್ನು ನಮ್ಮ ಮೇಲೆ ಹೊರಿಸುತ್ತಿದ್ದಾರೆ ಎಂದರು.

ಬೇರೊಂದು ಪಕ್ಷ ಸೇರುವ ತವಕದಲ್ಲಿರುವ ನೀವು ನಮ್ಮ ಬಗ್ಗೆ ಮಾತನಾಡುವುದೇಕೆ ಎಂದು ಪ್ರಶ್ನಿಸಿದ ಅವರು, ತನ್ನ ವಿರುದ್ಧ ಮತ್ತಷ್ಟು ಆರೋಪ, ಟೀಕೆ ಮಾಡಿ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳಬೇಡಿ. ನಿಮ್ಮೆಲ್ಲಾ ಆರೋಪಗಳಿಗೆ ನಾಗಮಂಗಲದ ಸಮಾವೇಶದಲ್ಲೇ ಉತ್ತರ ಕೊಡುತ್ತೇನೆ ಎಂದು ಎಚ್ಚರಿಸಿದರು.

ಜನಾಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ನಾಗಮಂಗಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಗ್ಗೆ ಗೊಂದಲಗಳಿರುವುದು ನಿಜ. ಮಾಜಿ ಶಾಸಕರಾದ ಶಿವರಾಮೇಗೌಡ, ಸುರೇಶ್‌ಗೌಡ ಹಾಗೂ ಲಕ್ಷ್ಮಿಅಶ್ವಿನ್‌ಗೌಡ ಟಿಕೆಟ್ ಆಕಾಂಕ್ಷಿತರಾಗಿದ್ದಾರೆ. ಕ್ಷೇತ್ರದ ಜನರ ಅಭಿಪ್ರಾಯ ಪಡೆದು ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಈ ಸಂದರ್ಭ ವಿಧಾನಪರಿಷತ್ ಸದಸ್ಯ ಎನ್.ಅಪ್ಪಾಜಿಗೌಡ, ಮಾಜಿ ಶಾಸಕರಾದ ಕೆ.ಸುರೇಶ್‌ಗೌಡ, ಎಲ್.ಆರ್.ಶಿವರಾಮೇಗೌಡ, ಲಕ್ಷ್ಮಿಅಶ್ವಿನ್‌ಗೌಡ, ಜಿಪಂ ಸದಸ್ಯ. ಶಿವಪ್ರಕಾಶ್, ಮನ್‌ಮುಲ್ ಮಾಜಿ ಅಧ್ಯಕ್ಷ ಜವರೇಗೌಡ, ನೆಲ್ಲಿಗೆರೆ ಬಾಲು, ಇತರ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X