Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೇಕಡವಾರು ಅಂಕ ನಿಗದಿ: ಬಡ...

ಶೇಕಡವಾರು ಅಂಕ ನಿಗದಿ: ಬಡ ವಿದ್ಯಾರ್ಥಿಗಳಿಗೆ ಸಿಗದ ಪಾಲಿಕೆಯ ಪ್ರೋತ್ಸಾಹ ಧನ

ಎನ್‌ಎಸ್‌ಯುಐ ಸಂಘಟನೆ ಆರೋಪ: ಪಾಲಿಕೆ ಆಡಳಿತ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ19 April 2017 11:37 PM IST
share
ಶೇಕಡವಾರು ಅಂಕ ನಿಗದಿ: ಬಡ ವಿದ್ಯಾರ್ಥಿಗಳಿಗೆ ಸಿಗದ ಪಾಲಿಕೆಯ ಪ್ರೋತ್ಸಾಹ ಧನ

ಶಿವಮೊಗ್ಗ, ಎ.19: ಶಿವಮೊಗ್ಗ ಮಹಾನಗರ ಪಾಲಿಕೆಯು ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ನೀಡುವ ಪ್ರೋತ್ಸಾಹ ಧನಕ್ಕೆ ಶೇಕಡವಾರು ಅಂಕ ನಿಗದಿ ಮಾಡಿ, ಅತೀ ಹೆಚ್ಚು ಅಂಕ ಗಳಿಸಿದವರಿಗೆ ಮಾತ್ರ ನೆರವು ನೀಡುತ್ತಿದೆ. ಇದರಿಂದ ಕಡಿಮೆ ಅಂಕಗಳಿಸಿದ ಬಡ ವರ್ಗದ ವಿದ್ಯಾರ್ಥಿಗಳು ಸಹಾಯಧನ ಸೌಲಭ್ಯದಿಂದ ವಂಚಿತವಾಗುತ್ತಿದ್ದಾರೆ ಎಂದು ಎನ್‌ಎಸ್‌ಯುಐ ಸಂಘಟನೆ ಆರೋಪಿಸಿದೆ.

ಮತ್ತೊಂದೆಡೆ ಈ ಆರೋಪವನ್ನು ಪಾಲಿಕೆಯ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷ ಐಡಿಯಲ್ ಗೋಪಿ ನಿರಾಕರಿಸಿದ್ದಾರೆ. ಇದರಲ್ಲಿ ಯಾವುದೇ ಹುರುಳಿಲ್ಲ. ಯೋಜನೆಯಡಿ ಮೀಸಲಿರುವ ಅನುದಾನಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

 ಈ ಹಿಂದಿನ ಸಾಲಿನಲ್ಲಿ ಶೇಕಡವಾರು ಅಂಕಗಳ ಪರಿಗಣನೆ ಮಾಡದೆ ಪ್ರೋತ್ಸಾಹ ಧನ ಮಂಜೂರು ಮಾಡಲಾಗುತ್ತಿತ್ತು. ಆದರೆ 2016-17ನೇ ಸಾಲಿನಲ್ಲಿ ಶೇಕಡವಾರು ಅಂಕಗಳ ನಿಗದಿ ಮಾಡಿ ಪ್ರೋತ್ಸಾಹ ಧನ ಮಂಜೂರು ಮಾಡಲಾಗಿದೆ. ಇದರಿಂದ ಕಡಿಮೆ ಅಂಕ ಪಡೆದವರು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎನ್‌ಎಸ್‌ಯು ರಾಜ್ಯ ಮುಖಂಡ ಸಿ.ಜಿ.ಮಧುಸೂಧನ್ ದೂರಿದ್ದಾರೆ. ಎಸೆಸೆಲ್ಸಿಯಲ್ಲಿ ಶೇ.84ರಷ್ಟು, ಪಿಯುಸಿ ಹಾಗೂ ಉದ್ಯೋಗಾಧರಿತ ಡಿಪ್ಲೊಮಾ ಕೋರ್ಸ್ ಗಳಲ್ಲಿ ಶೇ.94.24ರಷ್ಟು, ಪ್ಯಾರಾ ಮೆಡಿಕಲ್ ಕೋರ್ಸ್-ಡಿಪ್ಲೊಮಾ-ಡಿ.ಇಡಿ-ಸಿಪಿಇಡಿ ಇತರ ತಾಂತ್ರಿಕ ತರಗತಿಗಳಿಗೆ 86.11 ರಷ್ಟು, ಬಿಎ, ಬಿಎಸ್ಸಿ, ಬಿಕಾಂ, ಎಂಎಸ್‌ಡಬ್ಲ್ಯೂ, ಎಂಸಿಎ, ಬಿಇ ಗೆ ಶೇ.90.13 ರಷ್ಟು, ಎಂ.ಇಡಿ, ಎಂ.ಪಿ.ಇಡಿ 80.08 ಹಾಗೂ ಎಂಬಿಬಿಎಸ್, ಬಿಡಿಎಸ್, ಎಂ.ಟೆಕ್, ಎಂ.ಎಸ್, ಎಂ.ಡಿ, ಎಂ.ಇ ತರಗತಿಗಳಿಗೆ ಶೇ.66.89ರಷ್ಟು ಅಂಕ ನಿಗದಿಗೊಳಿಸಿ, ಇದಕ್ಕಿಂತ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಬಾಕಿ ಇರುವ ಅರ್ಜಿಗಳನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
 
ಬಡ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆದರೆ ಇದರಲ್ಲಿಯೂ ಶೇಕಡವಾರು ಅಂಕ ನಿಗದಿಗೊಳಿಸಿ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಮಾತ್ರ ಸೌಲಭ್ಯ ಕಲ್ಪಿಸುತ್ತಿರುವುದು ಸರಿಯಲ್ಲ. ಇದರಿಂದ ಕಡಿಮೆ ಅಂಕ ಗಳಿಸಿದ ನೂರಾರು ವಿದ್ಯಾರ್ಥಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಶೇಕಡವಾರು ಅಂಕ ನಿಗದಿ ರದ್ದುಪಡಿಸಬೇಕು. ಪ್ರೋತ್ಸಾಹ ಧನಕ್ಕೆ ಮೀಸಲಿಡುವ ಮೊತ್ತ ಹೆಚ್ಚಿಸಿ, ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳಿಗೂ ಸೌಲಭ್ಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಸಿ.ಜಿ.ಮಧುಸೂಧನ್ ಒತ್ತಾಯಿಸಿದ್ದಾರೆ.

ಬಡ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಪಾಲಿಕೆಯು ಹೆಚ್ಚಿನ ಅನುದಾನ ಮೀಸಲಿಟ್ಟು, ಹೆಚ್ಚಿನ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಶೇಕಡಾವಾರು ಅಂಕ ನಿಗದಿಗೊಳಿಸಿ, ಸೌಲಭ್ಯ ಕಲ್ಪಿಸಬಾರದು.

ಸಿ.ಜಿ.ಮಧುಸೂಧನ್, ಎನ್ನೆಸ್‌ಯುಐ ರಾಜ್ಯ ಮುಖಂಡ

ಅರ್ಜಿ ಸಲ್ಲಿಸಿದ ಎಲ್ಲರಿಗೂ ಸೌಲಭ್ಯ ಸಿಗುತ್ತಿಲ್ಲ. ಅಂಕಗಳ ಮಾನದಂಡದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಇದು ಅನಿವಾರ್ಯ ಕೂಡ ಆಗಿದೆ. ಹಾಗಂತ ಇಂತಿಷ್ಟೇ ಅಂಕ ಪಡೆದವರು ಅರ್ಜಿ ಸಲ್ಲಿಸಬೇಕೆಂಬ ನಿಯಮ ಮಾಡಿಲ್ಲ. ಎನ್‌ಎಸ್‌ಯುಐ ಆರೋಪದಲ್ಲಿ ಹುರುಳಿಲ್ಲವಾಗಿದೆ.

ಐಡಿಯಲ್ ಗೋಪಿ, ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X