Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಚಿಕ್ಕಮಗಳೂರು: ಗುಳೆ ಹೊರಟ ರೈತಾಪಿ...

​ಚಿಕ್ಕಮಗಳೂರು: ಗುಳೆ ಹೊರಟ ರೈತಾಪಿ ಕುಟುಂಬಗಳು

ಹನಿ ನೀರಿಗೂ ಹಾಹಾಕಾರ, ಮರೀಚಿಕೆಯಾದ ಮಳೆ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ19 April 2017 11:43 PM IST
share
​ಚಿಕ್ಕಮಗಳೂರು: ಗುಳೆ ಹೊರಟ ರೈತಾಪಿ ಕುಟುಂಬಗಳು

ಚಿಕ್ಕಮಗಳೂರು, ಎ.19: ಕಡೂರು ತಾಲೂಕಿನ ನಿಡಘಟ್ಟ ಗ್ರಾಮ ಕಳೆದ ಹಲವು ವರ್ಷಗಳಿಂದ ಭೀಕರ ಬರಗಾಲಕ್ಕೆ ತುತ್ತಾಗಿದೆ. ಇಲ್ಲಿ ಶಾಶ್ವತ ನೀರಿನ ಮೂಲ ಇಲ್ಲದಿರುವ ಪರಿಣಾಮ ಕುಡಿಯುವ ನೀರಿಗಾಗಿ ಜನ ಹಾಗೂ ಜಾನುವಾರುಗಳು ಪರದಾಡುವ ಸ್ಥಿತಿ ಎದುರಾಗಿದ್ದು, ಜನರು ಗುಳೆಹೋಗುವತ್ತ ದೃಷ್ಟಿ ಹರಿಸಿದ್ದಾರೆ.

ಈಗಾಗಲೇ ನಿಡಘಟ್ಟ ಗ್ರಾಮದಿಂದ 1,200ಕ್ಕೂ ಅಧಿಕ ಕುಟುಂಬಗಳು ಗುಳೇ ಹೋಗಿವೆ. ಬೆಂಗಳೂರಿನ ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಆಡುಗೋಡಿ, ಹೆಬ್ಬಾಳದಂತಹ ಪ್ರದೇಶಗಳಲ್ಲಿ ಈ ಊರಿನ ಜನರು ಕಾಣ ಸಿಗುತ್ತಾರೆ. ಭೀಕರ ಬರಗಾಲಕ್ಕೆ ತುತ್ತಾಗಿ ನಾಪತ್ತೆಯಾಗಿರುವ ಇಲ್ಲಿನ ಜನರು ಉದ್ಯೋಗಕ್ಕಾಗಿ ಬೆಂಗಳೂರು ನಗರಕ್ಕೆ ವಲಸೆ ಹೋಗುತ್ತಿದ್ದಾರೆ.

‘ನೀನು ಇಲ್ಲಿಗೆ ಬಂದಿದ್ದೀಯಾ, ನಾನು ಇಲ್ಲೇ ಕೆಲಸ ಮಾಡುತ್ತಿದ್ದೀನಿ, ನೀನು ಎಲ್ಲಿ-ಏನ್ ಕೆಲಸ ಮಾಡು ತ್ತಿದ್ದಿಯಾ? ಹೆಂಡತಿ-ಮಕ್ಕಳು ಎಲ್ಲಿದ್ದಾರೆ? ದನಕರುಗಳನ್ನು ಎಲ್ಲಿ ಬಿಟ್ಟು ಬಂದ್ದಿದೀಯ’ ಎಂಬ ಪ್ರಶ್ನೆಗಳೊಂದಿಗೆ ಅವರವರೇ ತಮ್ಮ ಕರುಣಾಜನಕ ಕಥೆಯನ್ನು ಪರಸ್ಪರ ಮಾತಾಡಿಕೊಂಡು ಕೊರಗುತ್ತಿದ್ದಾರೆ.

ಕಡೂರು ಮಳೆಯಾಶ್ರಿತ ತಾಲೂಕುಗಳಲ್ಲಿ ಒಂದಾಗಿದೆ. ಆದರೆ ಇಲ್ಲಿನ ಜನರಿಗೆ ಮಳೆ ಮರೀಚಿಕೆಯಾಗಿದೆ. ಎರಡು ದಶಕಗಳ ಬರಕ್ಕೆ ಬೇಸತ್ತ ಇಲ್ಲಿನ ಜನ ಇದೀಗ ಹಳ್ಳಿಗಳನ್ನು ಖಾಲಿ ಮಾಡುತ್ತಿದ್ದಾರೆ. ಹೀಗಾಗಿ ನಿಡಘಟ್ಟ ಗ್ರಾಮದ ಬಹುತೇಕ ರೈತರ ಮನೆಗಳು ಬೀಕೋ ಎನ್ನುತ್ತಿವೆ. ಇಲ್ಲಿನ ಭೀಕರ ಬರದ ಛಾಯೆಯ ನಡುವೆ ಹನಿ ನೀರಿಗೂ ಹಾಹಾಕಾರ, ಸರಕಾರದ ನಿರ್ಲಕ್ಷ್ಯದಿಂದ ಇಲ್ಲಿನ ಕುಟುಂಬಗಳಲ್ಲಿ ಹೈನುಗಾರಿಕೆ, ಕೃಷಿಯ ಬಗ್ಗೆ ಮೊದಲಿನ ಚೈತನ್ಯ ಉಳಿದಿಲ್ಲ. ಹಳ್ಳಿಗಳೆಲ್ಲಾ ವೃದ್ಧಾಶ್ರಮಗಳಾಗಿವೆ.

ಕಡೂರು ತಾಲೂಕಿನಾದ್ಯಂತ ಅಂತರ್ಜಲ ಸಂಪೂರ್ಣ ಬತ್ತಿ ಹೋಗಿದೆ. 1,800 ಅಡಿ ಬೋರ್ ಕೊರಿಸಿದರೂ ಹನಿ ನೀರಿಗೂ ಹಾಹಾಕಾರ ಎದುರಾಗಿದೆ. ಕೆಲ ದಿನಗಳ ಕಾಲ ಕಾಫಿ ತೋಟದ ಕೆಲಸಗಳಿಗೆ ಹೋಗುತ್ತಿದ್ದರು. ಆದರೆ ಆ ಹಣ ಯಾವುದಕ್ಕೂ ಸಾಲದ ಕಾರಣ ರೈತರು ಮನೆ-ಜಮೀನುಗಳನ್ನು ಪಾಳು ಬಿಟ್ಟು ಕೆಲಸ ಅರಸಿ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ವಯಸ್ಸಾದ ವಯೋವೃದ್ಧರು ಹಳ್ಳಿಗಳಲ್ಲಿ ಮನೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ಜಾನುವಾರುಗಳೆಲ್ಲಾ ಕಸಾಯಿಖಾನೆ ಪಾಲಾಗಿವೆ.

ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳಿನಿಂದ ಅಲ್ಲಲ್ಲಿ ಮಳೆಯಾಗಿದೆ. ಆದರೆ ನಿಡಘಟ್ಟ ಪ್ರದೇಶದಲ್ಲಿ ಮಳೆ ಬಂದಿಲ್ಲ. ಈ ಭಾಗಕ್ಕೆ ಇನ್ನೊಂದು ತಿಂಗಳಲ್ಲಿ ಮಳೆ ಬಾರದಿದ್ದರೆ ಇಲ್ಲಿನ ಪರಿಸ್ಥಿತಿ ಮತ್ತಷ್ಟು ಆತಂಕ ತರುವುದರಲ್ಲಿ ಎರಡು ಮಾತಿಲ್ಲ. ಭೀಕರ ಬರಕ್ಕೆ ಕಡೂರು ಭಾಗದ ಬಯಲುಸೀಮೆ ಅಕ್ಷರಶಃ ನಲುಗಿ ಹೋಗಿದೆ. ಬಡ ರೈತರು ತುತ್ತಿಗಾಗಿ ಗುಳೇ ಹೋಗುವಷ್ಟು ಅಸಹಾಯಕರಾಗಿದ್ದಾರೆ. ಈ ಪರಿಸ್ಥಿತಿ ಹೀಗೆ ಮುಂದುವರಿದರೆ ಭವಿಷ್ಯದ ಪರಿಸ್ಥಿತಿ ಹೇಳತೀರದ್ದು. ಇನ್ನಾದರೂ ಸರಕಾರ ಇತ್ತ ಗಮನ ಹರಿಸಿ ಸಂಕಷ್ಟದಲ್ಲಿರುವ ಗ್ರಾಮೀಣ ಭಾಗದ ರೈತರ ಸಹಿತ ಸಾಮಾನ್ಯ ಜನರನ್ನು ಕಾಪಾಡಬೇಕಿದೆ.

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X