Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿಯಲ್ಲಿ ಸಂಕಷ್ಟದಲ್ಲಿದ್ದ ಭಾರತೀಯನಿಗೆ...

ಸೌದಿಯಲ್ಲಿ ಸಂಕಷ್ಟದಲ್ಲಿದ್ದ ಭಾರತೀಯನಿಗೆ ನೆರವಾದ ಫೇಸ್ಬುಕ್ ಸ್ಟೇಟಸ್

ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದವನಿಗೆ ಆಪತ್ಪಾಂಧವನಾದ ಇಂಡಿಯನ್ ಸೋಶಿಯಲ್ ಪೋರಂ

ವಾರ್ತಾಭಾರತಿವಾರ್ತಾಭಾರತಿ20 April 2017 11:40 AM IST
share
ಸೌದಿಯಲ್ಲಿ ಸಂಕಷ್ಟದಲ್ಲಿದ್ದ ಭಾರತೀಯನಿಗೆ ನೆರವಾದ ಫೇಸ್ಬುಕ್ ಸ್ಟೇಟಸ್

ಸೌದಿ ಅರೇಬಿಯಾ, ಎ.20: ಸೌದಿ ಅರೇಬಿಯಾದ ಮಕ್ಕ ಪ್ರದೇಶದಲ್ಲಿ ಹೌಸ್ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಕಫೀಲ್ ನ ಕಿರುಕುಳದಿಂದ ನೊಂದು, ಸೌದಿ ಕಾನೂನಿಗೆ ಸಿಲುಕಿ ತಾನು ನರಕಯಾತನೆ ಅನುಭವಿಸುತ್ತಿರುವ ವಿಚಾರವನ್ನು ಫೇಸ್ಬುಕ್ ಮೂಲಕ ಗೆಳೆಯನೊಬ್ಬನಿಗೆ ತಿಳಿಸಿದ್ದು, ಈ ಬಗ್ಗೆ ಅವರ ಗೆಳೆಯ ಹಾಕಿದ್ದ ಸ್ಟೇಟಸ್ ನಿಂದಾಗಿ ನೊಂದ ವ್ಯಕ್ತಿ ಮತ್ತೆ ಭಾರತಕ್ಕೆ ಹಿಂದಿರುಗುವಂತಾಗಿದೆ.

ಮಕ್ಕದಲ್ಲಿ ಹೌಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಬಾಬಾ ಪಟೇಲ್ ಚಲಾಯಿಸುತ್ತಿದ್ದ ಕಾರಿಗೆ ಹಿಂದಿನಿಂದ ಬಂದ ವಾಹನವೊಂದು ಢಿಕ್ಕಿ ಹೊಡೆದಿತ್ತು. ಕಫೀಲ್ ನ ವಾಹನಕ್ಕೆ ಇನ್ಶೂರೆನ್ಸ್ ಇಲ್ಲದಿದ್ದುದರಿಂದ 16,000 ಸೌದಿ ರಿಯಾಲ್ ಗಳನ್ನು ಪಾವತಿಸಬೇಕು ಎಂದು ಆತ ಪಟ್ಟುಹಿಡಿದಿದ್ದ. ಇಷ್ಟೇ ಅಲ್ಲದೆ ಹಣ ಪಾವತಿಸದಿದ್ದಲ್ಲಿ ಊರಿಗೆ ಕಳುಹಿಸುವುದಿಲ್ಲ ಎಂದು ಬೆದರಿಸುತ್ತಿದ್ದ. ಇದರಿಂದ ಕಂಗಾಲಾದ ಬಾಬಾ ಪಟೇಲ್ ಫೇಸ್ ಬುಕ್ ಮೂಲಕ ಗೆಳೆಯ ಅಶ್ರಫ್ ಅಚ್ಚು (ಸಾಹುಕಾರ್) ಎಂಬವರಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಈ ಸಂದರ್ಭ ಅಶ್ರಫ್ ಫೇಸ್ ಬುಕ್ ನಲ್ಲಿ ಬಾಬಾ ಪಟೇಲ್ ಅನುಭವಿಸುತ್ತಿರುವ ಸಮಸ್ಯೆಯ ಬಗ್ಗೆ ಸ್ಟೇಟಸ್ ಹಾಕಿದ್ದರು. ಇದನ್ನು ಗಮನಿಸಿದ ಮಕ್ಕ ಇಂಡಿಯನ್ ಸೋಶಿಯಲ್ ಫೋರಮ್ ಸದಸ್ಯರಾದ ಶಾಕಿರ್ ಹಕ್  ನೆಲ್ಯಾಡಿ  ಬಾಬಾ ಪಟೇಲ್ ರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಇಂಡಿಯನ್ ಸೋಶಿಯಲ್ ಫೋರಮ್ ನಾಯಕರು, ಕಫೀಲ್ ಹಾಗೂ ಸೌದಿ ಕಾರ್ಮಿಕ ಕೋರ್ಟ್ ಮೂಲಕ 16,000 ರಿಯಾಲ್ ಗಳನ್ನು 6,400 ರಿಯಾಲ್ ಗೆ ಇಳಿಸುವಲ್ಲಿ ನೆರವಾಗಿದ್ದಲ್ಲದೆ, ಭಾರತಕ್ಕೆ ಹೋಗಬೇಕಾದ ಟಿಕೆಟ್ ನ ವ್ಯವಸ್ಥೆಯನ್ನು ಕಫೀಲ್ ಮೂಲಕವೇ ಮಾಡಿಸಲಾಯಿತು.

ಪಾವತಿಸಬೇಕಾದ 6,400 ರಿಯಾಲ್ ಹಣವನ್ನು ಹೊಂದಿಸುವ ಉದ್ದೇಶದಿಂದ "ಆಪರೇಷನ್ ಬಾಬಾ ಪಟೇಲ್" ಎಂಬ ವಾಟ್ಸಾಪ್ ಗ್ರೂಪನ್ನು ಇಂಡಿಯನ್ ಸೋಶಿಯಲ್ ಪೋರಂ ಸದಸ್ಯರಾದ ಇಮ್ರಾನ್ ಅಡ್ಡೂರ್ , ಕಲಂದರ್  ನೌಶಾದ್ ಕರ್ನಿರೆ, ಶಾಹುಲ್ ಹಮೀದ್ ಕಾಶಿಪಟ್ನ, ಶಾಕಿರ್ ಹಕ್ ನೆಲ್ಯಾಡಿ, ಅಶ್ರಫ್ ಅಚ್ಚು, ದಮ್ಮಾಮ್ ನ ಬಿಜಾಪುರ ಅಸೋಸಿಯೇಷನ್ ನ ಇಸ್ಮಾಯಿಲ್ ಖಾಝಿ ನೇತೃತ್ವದಲ್ಲಿ ರಚಿಸಿ 6,400 ಸೌದಿ ರಿಯಾಲ್ ಗಳನ್ನು ಹೊಂದಿಸಲಾಯಿತು. 

ಕಫೀಲ್ ಗೆ ನೀಡಬೇಕಾದ 6,400 ಸೌದಿ ರಿಯಾಲ್ ಗಳನ್ನು ಪಾವತಿಸಿದ ರಂದು ಬಾಬಾ ಪಟೇಲ್ ಮುಂಬೈ ವಿಮಾನ ನಿಲ್ದಾಣದ ಮೂಲಕ ಭಾರತ ತಲುಪಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X