Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಸೌಲಭ್ಯಗಳ ಜಾರಿಗೆ ಸಂಘಟಿತರಾಗಿ...

ಸರಕಾರಿ ಸೌಲಭ್ಯಗಳ ಜಾರಿಗೆ ಸಂಘಟಿತರಾಗಿ ಹೋರಾಡೋಣ: ಮಹಾಂತೇಶ್

ವಾರ್ತಾಭಾರತಿವಾರ್ತಾಭಾರತಿ20 April 2017 9:55 PM IST
share
ಸರಕಾರಿ ಸೌಲಭ್ಯಗಳ ಜಾರಿಗೆ ಸಂಘಟಿತರಾಗಿ ಹೋರಾಡೋಣ: ಮಹಾಂತೇಶ್

ಮಂಗಳೂರು, ಎ.20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಲ್ಲಿ ತಲೆಹೊರೆ ಕಾರ್ಮಿಕರಿಗಾಗಿ ಕೆಲವು ಯೋಜನೆಗಳ ಘೋಷಣೆಯಾಗಿದ್ದು, ಇದರ ಪರಿಣಾಮಕಾರಿ ಜಾರಿಗೆ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್‌ನ ಉಪಾಧ್ಯಕ್ಷ ಕಾಂ.ಕೆ.ಮಹಾಂತೇಶ್ ಬೆಂಗಳೂರು ಹೇಳಿದ್ದಾರೆ.

ನಗರದ ಮಿನಿವಿಧಾನಸೌಧ ಬಳಿಯ ಎನ್‌ಜಿಒ ಸಭಾಂಗಣದಲ್ಲಿ ಗುರುವಾರ ನಡೆದ ಬಂದರು ಪ್ರದೇಶ ಮಟ್ಟದ ತಲೆಹೊರೆ ಕಾರ್ಮಿಕರ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರಿ ನೌಕರರಿಗೆ ಹಾಗೂ ಇತರ ಕಂಪೆನಿಗಳಲ್ಲಿ ದುಡಿಯುವ ನೌಕರರಿಗೆ ಸರಕಾರಿ ಸೌಲಭ್ಯಗಳು ಸಿಗುತ್ತಿವೆ. ಆದರೆ, ಹಮಾಲಿ ಕಾರ್ಮಿಕರು ಇಂತಹ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇತ್ತೀಚಿನ ಕೆಲವು ತಿಂಗಳುಗಳಿಂದ ಕಾರ್ಮಿಕ ಸಂಘಟನೆಗಳು ನಡೆಸಿರುವ ನಿರಂತರ ಹೋರಾಟದ ಫಲವಾಗಿ ಇಂದು ತಲೆಹೊರೆ ಕಾರ್ಮಿಕರಿಗೆ ಭವಿಷ್ಯ ನಿಧಿ ಪಡೆಯಲು ಸಾಧ್ಯವಾಗಿದೆ. ಅಲ್ಲದೆ, ಸರಕಾರದಿಂದ ಕೆಲವು ಯೋಜನೆಗಳು ಘೋಷಣೆಯಾಗಿದ್ದು, ಯೋಜನೆಗಳ ಪರಿಣಾಮಕಾರಿ ಜಾರಿಗೆ ಹೋರಾಡಬೇಕಾಗಿದೆ ಎಂದರು.

ಹಮಾಲಿ ಕಾರ್ಮಿಕರಿಗೆ ಕನಿಷ್ಠ ಕೂಲಿ ನಿಗದಿ, ಕೆಲಸದ ಸಂದರ್ಭದಲ್ಲಿ ಆರೋಗ್ಯಕರ ವಾತಾವರಣ, ಭದ್ರತೆ, ನಿವೇಶನ, ವಸತಿ ಮೊದಲಾದ ಬೇಡಿಕೆಗಳನ್ನು ಮುಂದಿಟ್ಟು ಕಾರ್ಮಿಕರು ಹೋರಾಟ ನಡೆಸಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು. ದುಡಿಯುವ ಮಹಿಳೆಯರು ಇಂದಿಗೂ ಶೋಷಣೆಗೊಳಪಡುತ್ತಿದ್ದಾರೆ. ಸ್ತ್ರೀ-ಪುರುಷ ಕಾರ್ಮಿಕರಿಗೆ ಕೂಲಿ ತಾರತಮ್ಯ, ಲೈಂಗಿನ ದೌರ್ಜನ್ಯಗಳು ನಡೆಯುತ್ತಿವೆ. ದುಡಿಯುವ ಮಹಿಳೆಯರು ತಮ್ಮ ಜೀವಾನಾಧಾರಕ್ಕಾಗಿ ಹೆಚ್ಚಿನ ಸಂಕಷ್ಟ ಪಡುತ್ತಾರೆ. ದುಡಿಯುವ ಮಹಿಳೆಯು ಮನೆಕೆಲಸ, ಮಕ್ಕಳ ಪೋಷಣೆ ಸಹಿತ ಇತರ ಕೆಲಸಗಳನ್ನು ಪೂರ್ಣಗೊಳಿಸಿಯೇ ಮನೆಯಿಂದ ಹೊರಡುತ್ತಾರೆ. ಕೆಲಸದ ಸಂದರ್ಭದಲ್ಲೂ ಅವರಿಗೆ ಶೋಷಣೆಗಳು ತಪ್ಪಿಲ್ಲ. ದುಡಿಯುವ ಮಹಿಳೆಗೆ ಹೆರಿಗೆ ರಜಾ ಸೌಲಭ್ಯ, ಪಿಂಚಣಿ, ಪಿಎಫ್ ಸಹಿತ ಇತರ ಸೌಲಭ್ಯಗಳು ದೊರೆಯವ ತನಕ ಹೋರಾಟವನ್ನು ನಿರಂತರಗೊಳಿಸಬೇಕೆಂದು ಮಹಾಂತೇಶ್ ಕರೆ ನೀಡಿದರು.

ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ತಲೆಹೊರೆ ಕಾರ್ಮಿಕರಿಗೆ ಕೆಲಸದ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆಯ ಅಗತ್ಯವಿದೆ ಎಂದರು.

ಬಂದರು ಪ್ರದೇಶ ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಅಹ್ಮದ್ ಬಾವ ಅಧ್ಯಕ್ಷತೆ ವಹಿಸಿದ್ದರು. ಸಿಐಟಿಯು ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಹಮಾಲಿ ಕಾರ್ಮಿಕರ ಸಂಘದ ಖಜಾಂಚಿ ನಝೀರ್ ಬೆಂಗರೆ, ಹಮೀದ್ ಮಲಾರ್, ರಫೀಕ್ ಹರೇಕಳ, ವಿಲ್ಲಿ ವಿಲ್ಸನ್, ಸುಲೋಚನಾ, ಜಯಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X