ಎ.22: ಇಡ್ಯಾ ಖಿಲ್ರಿಯಾ ಮೌಲೂದ್ ನೇರ್ಚೆ ಸಮಾರೋಪ
ಸುರತ್ಕಲ್, ಎ.19: ಅಭಿಲ್ ಅಬ್ಬಾಸ್ ಖಿಲ್ರ್ ನೆಬಿ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ 56ನೆ ವರ್ಷದ ಇಡ್ಯಾ ಖಿಲ್ರ್ ಮೌಲೂದ್ ನೇರ್ಚೆ ಕಾರ್ಯಕ್ರಮದ ಸಮಾರೋಪ ಸಮಾರಂಭವು ಎ.22ರಂದು ಇಡ್ಯಾ ಮಸೀದಿಯ ವಠಾರದಲ್ಲಿ ನಡೆಯಲಿದೆ.
ಸಂಜೆ 5 ಗಂಟೆಗೆ ಬೃಹತ್ ಸಂದಲ್ ಮೆರವಣಿಗೆ ನಡೆಯಲಿದ್ದು, ಬಳಿಕ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಲ್ಹಾಜ್ ಮುಹಮ್ಮದ್ ಅಝ್ಹರ್ ಫೈಝಿ ಬೊಳ್ಳೂರು ಉಸ್ತಾದ್ ವಹಿಸಲಿದ್ದಾರೆ. ಅಲ್ಹಾಜ್ ಅಸೈಯ್ಯದ್ ಶಿಹಾಬುದ್ದೀನ್ ಸಖಾಫಿ ಅಲ್ ಹೈದ್ರೋಸ್ ತಂಞಳ್ ಕಿಲ್ಲೂರು ದುಆ ನೆರವೇರಿಸಲಿದ್ದಾರೆ. ಕುಂಬ್ರ ಕರ್ನಾಟಕ ಇಸ್ಲಾಮಿಕ್ ಸೆಂಟರ್ನ ಪ್ರೊಫೆಸರ್ ಅನೀಸ್ ಕೌಸರು ಮುಖ್ಯ ಭಾಷಣ ಮಾಡಲಿದ್ದಾರೆ.
ಡಾ. ಅಲ್ಹಾಜ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಲಕಟ್ಟೆ ಹಝ್ರತ್, ಮಂಗಳೂರು ಉತ್ತರ ವಿಧಾನ ಸಭಾಕ್ಷೇತ್ರ ಶಾಸಕ ಮೊಯ್ದಿನ್ ಬಾವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಶಿಕ್ಷಣ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ತನ್ವೀರ್ ಸೇಠ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಯು.ಟಿ. ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಗಮದ ಅಧ್ಯಕ್ಷ ಎಂ. ಎ. ಅಬ್ದುಲ್ ಗಫೂರ್, ಮಂಗಳೂರು ಮನಪಾ ಉಪ ಮೇಯರ್ ರಜನೀಶ್ ಕಾಪಿಕಾಡು, ಮನಪಾ ಸದಸ್ಯ ಅಶೋಕ್ ಶೆಟ್ಟಿ, ಸುರತ್ಕಲ್ ಈದ್ಗಾ ಜುಮಾ ಮಸೀದಿಯ ಅಧ್ಯಕ್ಷ ಐ. ಯಾಕೂಬ್, ಝಿಲ್ರಿಯಾ ವಿದ್ಯಾ ಸಮಿತಿಯ ಗೌರವಾಧ್ಯಕ್ಷ ಹಾಜಿ ಐ. ಬಾಪುಞಿ, ದ.ಕ. ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಹಾಜಿ ಐ ಮೊಯ್ದಿನಬ್ಬ, ಕೃಷ್ಣಾಪುರ ಮಿಸ್ಬಾ ಮಹಿಳಾ ಕಾಲೇಜಿನ ಅಧ್ಯಕ್ಷ ಹಾಜಿ ಮಮ್ತಾಝ್ ಅಲಿ, ದ.ಕ. ಮೊಗವೀರ ಮಹಾಸಭಾದ ಅಧ್ಯಕ್ಷ ಗಂಗಾಧರ ಅಡ್ವೊಕೇಟ್, ಜಿಲ್ಲಾ ಯೂತ್ ಕಾಂಗ್ರಸ್ ಅಧ್ಯಕ್ಷ ಮಿಥುನ್ ರೈ, ಮುಕ್ಕ ಧೂಮಾವತಿ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸೂರ್ಯನಾರಾಯಣ ಎಚ್., ಹೊಸಬೆಟ್ಟು ವೀರಮಾರುತಿ ವ್ಯಾಯಾಮ ಶಾಲೆಯ ಅಧ್ಯಕ್ಷ ಶರತ್ ಎಲ್. ಕರ್ಕೇರ, ಮುಕ್ಕ ಸೀಫುಡ್ಸ್ನ ಮ್ಯಾನೇಜಿಂಗ್ ಡೈರೆಕ್ಟರ್ ಹಾಜಿ ಕೆ. ಮುಹಮ್ಮದ್ ಹಾರಿಸ್, ಉಪ್ಪಿನಂಗಡಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಹಮ್ಮದ್ ಕೆಂಪಿ, ಚೊಕ್ಕಬೆಟ್ಟು ಜುಮಾ ಮಸೀದಿಯ ಖತೀಬ್ ಅಬ್ದುಲ್ ಅಝೀಝ್ ದಾರಿಮಿ, ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಇಡ್ಯಾ ಖಿಲ್ರಿಯಾ ಜುಮಾ ಮಸೀದಿಯ ಪ್ರಕಟನೆ ತಿಳಿಸಿದೆ.







