Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬರ ನಿರ್ವಹಣೆಯನ್ನು ಸಮರೋಪಾದಿಯಲ್ಲಿ...

ಬರ ನಿರ್ವಹಣೆಯನ್ನು ಸಮರೋಪಾದಿಯಲ್ಲಿ ನಡೆಸಲು ಅಧಿಕಾರಿಗಳಿಗೆ ಕಠಿಣ ಸೂಚನೆ: ಡಾ.ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ20 April 2017 10:39 PM IST
share
ಬರ ನಿರ್ವಹಣೆಯನ್ನು ಸಮರೋಪಾದಿಯಲ್ಲಿ ನಡೆಸಲು ಅಧಿಕಾರಿಗಳಿಗೆ ಕಠಿಣ ಸೂಚನೆ: ಡಾ.ಜಿ.ಪರಮೇಶ್ವರ್

ಚಿಕ್ಕಮಗಳೂರು, ಎ.20: ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಎಲ್ಲಾ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಸರ್ಕಾರ ಪರಿಹಾರಕ್ಕೆ ಅಗತ್ಯ ಹಣ ಬಿಡುಗಡೆ ಮಾಡಿದೆ. ಬರ ನಿರ್ವಹಣೆಯನ್ನು ಸಮರೋಪಾದಿಯಲ್ಲಿ ಮುಂದುವರೆಸಲು ಅಧಿಕಾರಿಗಳಿಗೆ ಕಠಿಣ ಸೂಚನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಗುರುವಾರ ನಗರದ ಜಿಪಂ ಸಭಾಂಗಣದಲ್ಲಿ ಬರಪರಿಹಾರ ಕುರಿತಂತೆ ನಡೆಸಿದ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯದ ಬಹುತೇಕ ಕಡೆ ಕಳೆದ ವರ್ಷ ಮಳೆ ಬೀಳದ ಕಾರಣ ಒಟ್ಟು 176 ತಾಲೂಕುಗಳಲ್ಲಿ 163 ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿದೆ. ಪರಿಹಾರಕ್ಕಾಗಿ ಕೇಂದ್ರ ಸರ್ಕಾರದಿಂದ ಸಕಾಲಿಕ ನೆರವು ದೊರೆಯದಿದ್ದರೂ ಅಗತ್ಯ ಹಣವನ್ನು ಬಿಡುಗಡೆ ಮಾಡಲಾಗಿದೆ. 2016-17ನೇ ಸಾಲಿನಲ್ಲಿ 17 ಸಾವಿರ ಕೋಟಿ ಬರದಿಂದಾಗಿ ನಷ್ಟ ಉಂಟಾಗಿದೆ. ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇಂದ್ರ ಸರ್ಕಾರ 5 ಸಾವಿರ ಕೋಟಿ ಹಣಕ್ಕೆ ಬೇಡಿಕೆ ಮುಂದಿರಿಸಲಾಗಿತ್ತು ಎಂದು ಹೇಳಿದರು.

ಆದರೆ ಕೇಂದ್ರ ಸರ್ಕಾರ ಪ್ರಕೃತಿ ವಿಕೋಪದ ನಿರ್ವಹಣೆಯ ನಿಯಮದಂತೆ ನಷ್ಟದ ಮೊತ್ತಕ್ಕೆ ಅನುಗುಣವಾಗಿ 5 ಸಾವಿರ ಕೋಟಿ ಹಣ ಕೊಡಬೇಕಾಗಿದ್ದರೂ 1,750 ಕೋಟಿ ರೂ.ಗಳನ್ನು ಮಾತ್ರ ಮಂಜೂರು ಮಾಡಿತ್ತು. ಅದರಲ್ಲೂ ಪೂರ್ಣ ಹಣ ಬಿಡುಗಡೆ ಮಾಡದೆ ಎರಡು ಕಂತುಗಳಲ್ಲಿ 1,200 ಕೋಟಿ ರೂ.ಗಳನ್ನು ಮಾತ್ರ ಒದಗಿಸಿತ್ತು. ಆದರೆ ಸರ್ಕಾರ ರಾಜ್ಯದ ಬರನಿರ್ವಹಣೆಗೆ ಆದ್ಯತೆ ನೀಡಿ ಕೇಂದ್ರದ ಹಣಕ್ಕಾಗಿ ಕಾಯದೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೇಳಿದಷ್ಟು ಹಣವನ್ನು ಮಂಜೂರು ಮಾಡಿ ಒದಗಿಸಿತ್ತು ಎಂದು ತಿಳಿಸಿದರು.

ಅದರೊಂದಿಗೆ ಜಿಪಂ 4 ಹಂತದ ಕಾರ್ಯಪಡೆಗೆ 8.10 ಕೋಟಿ ಹಣ ಬಂದಿದೆ. ನಗರಾಭಿವೃದ್ಧಿ ಇಲಾಖೆಗೆ 2.52 ಕೊಟಿ ಹಣ ಒದಗಿಸಲಾಗಿದೆ. ಕಂದಾಯ ಇಲಾಖೆಗೆ 9.10 ಕೋಟಿ ಹೀಗೆ ಒಟ್ಟಾರೆ 21.79 ಕೋಟಿ ಒದಗಿಸಲಾಗಿದೆ. ಅದರಲ್ಲಿ 13.13 ಕೋಟಿ ಹಣ ವೆಚ್ಚವಾಗಿದೆ. ಅಂದರೆ ಬರ ಪರಿಗಾರಕ್ಕೆ ಹಣದ ಕೊರತೆ ಇಲ್ಲ ಎಂದು ವಿವರಿಸಿದರು.

ಕಡೂರು ಮತ್ತು ತರೀಕೆರೆ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬರ ನಿರ್ವಹಣೆಗೆ ಹೆಚ್ಚಿನ ಹಣದ ಬೇಡಿಕೆ ಬಂದರೆ ತಕ್ಷಣ ನೀಡಲಾಗುವುದು. ಇಡೀ ರಾಜ್ಯದಲ್ಲಿ ಬರ ನಿರ್ವಹಣೆಗಾಗಿ ಸಚಿವರ 4 ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಪ್ರವಾಸದ ಮೂಲಕ ಸ್ಥಿತಿಗತಿ ತಿಳಿದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅದರಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ನುಡಿದರು.

ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಜಿ.ಸತ್ಯವತಿ, ಅರಣ್ಯ ವಸತಿ ವಿಹಾರಧಾನದ ಅಧ್ಯಕ್ಷ ಎ.ಎನ್.ಮಹೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X