Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲಯನ್ಸ್ ಮೇಲೆ ಸವಾರಿಗೆ ಕೋಲ್ಕತಾ ಸಜ್ಜು

ಲಯನ್ಸ್ ಮೇಲೆ ಸವಾರಿಗೆ ಕೋಲ್ಕತಾ ಸಜ್ಜು

ವಾರ್ತಾಭಾರತಿವಾರ್ತಾಭಾರತಿ20 April 2017 11:09 PM IST
share
ಲಯನ್ಸ್ ಮೇಲೆ ಸವಾರಿಗೆ ಕೋಲ್ಕತಾ ಸಜ್ಜು

ಕೋಲ್ಕತಾ, ಎ.20: ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಸತತ ಸೋಲಿನಿಂದ ಕಂಗೆಟ್ಟಿರುವ ಗುಜರಾತ್ ಲಯನ್ಸ್ ತಂಡವನ್ನು ಶುಕ್ರವಾರ ಇಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಕೆಕೆಆರ್ ತಂಡ ಹ್ಯಾಟ್ರಿಕ್ ಗೆಲುವು ಸೇರಿದಂತೆ 5 ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿದೆ. ಒಟ್ಟು 8 ಅಂಕ ಗಳಿಸಿ ಅಗ್ರ ಸ್ಥಾನದಲ್ಲಿದೆ. ಕಳೆದ ವರ್ಷ ತನ್ನ ಚೊಚ್ಚಲ ಐಪಿಎಲ್‌ನಲ್ಲಿ ಪ್ಲೇ-ಆಫ್‌ಗೆ ತೇರ್ಗಡೆಯಾಗಿದ್ದ ಗುಜರಾತ್ ಲಯನ್ಸ್ ತಂಡ ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಗುಜರಾತ್ ಇನ್ನೊಂದು ಪಂದ್ಯದಲ್ಲಿ ಸೋತರೆ ಪ್ಲೇ-ಆಫ್ ಸ್ಪರ್ಧೆಯಿಂದ ಹೊರಗುಳಿಯುವ ಭೀತಿ ಎದುರಿಸಲಿದೆ.

ಕೆಕೆಆರ್ ತಂಡ ರಾಜ್‌ಕೋಟ್‌ನಲ್ಲಿ ಗುಜರಾತ್ ವಿರುದ್ಧವೇ 10 ವಿಕೆಟ್‌ಗಳ ಜಯಭೇರಿಯೊಂದಿಗೆ ಈವರ್ಷದ ಐಪಿಎಲ್ ಅಭಿಯಾನ ಆರಂಭಿಸಿತ್ತು. 4.75ರ ಎಕಾನಮಿ ರೇಟ್‌ನಲ್ಲಿ ಬೌಲಿಂಗ್ ಮಾಡಿರುವ ಸುನೀಲ್ ನರೇನ್ ಕೆಕೆಆರ್‌ನ ಹ್ಯಾಟ್ರಿಕ್ ಗೆಲುವಿಗೆ ನೆರವಾಗಿದ್ದರು. ರಾಬಿನ್ ಉತ್ತಪ್ಪ, ಯೂಸುಫ್ ಪಠಾಣ್ ಹಾಗೂ ಮನೀಷ್ ಪಾಂಡೆ ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ ನೆರವಾಗಿದ್ದಾರೆ. ನಾಯಕ ಗೌತಮ್ ಗಂಭೀರ್ ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ.

ಮತ್ತೊಂದೆಡೆ, ಗುಜರಾತ್ ತಂಡ ಪಂದ್ಯ ಗೆಲ್ಲಬಲ್ಲ ಅಂತಿಮ 11ರ ಬಳಗವನ್ನು ಆಯ್ಕೆ ಮಾಡಲು ಪರದಾಟ ನಡೆಸುತ್ತಿದೆ. ಗುಜರಾತ್ ತಂಡ ನಾಲ್ವರು ವಿದೇಶಿ ಆಟಗಾರರ ಪ್ರದರ್ಶನವನ್ನೇ ನೆಚ್ಚಿಕೊಂಡಿದೆ. ಬೌಲರ್ ಮುನಾಫ್ ಪಟೇಲ್, ಪ್ರವೀಣ್‌ಕುಮಾರ್‌ಗೆ ಅವಕಾಶ ನೀಡಿದರೂ ಫಲಕಾರಿಯಾಗಲಿಲ್ಲ. ಗುಜರಾತ್ ತಂಡ ರವೀಂದ್ರ ಜಡೇಜರ ಮೇಲೆ ವಿಶ್ವಾಸವಿರಿಸಿದೆ. ಆದರೆ, ಅವರು ಈತನಕ 131 ರನ್ ನೀಡಿ 1 ವಿಕೆಟ್ ಪಡೆದಿದ್ದಾರೆ. ಗುಜರಾತ್ ಸ್ಪಿನ್ನರ್‌ಗಳ ಪ್ರದರ್ಶನವೂ ನಿರಾಶಾದಾಯಕವಾಗಿದೆ.

ವಾತಾವರಣ: ಮೋಡಿ ಕವಿದ ವಾತಾವರಣದಿದ್ದು, 20 ಸೆಲ್ಸಿಯಸ್ ಉಷ್ಣಾಂಶವಿದೆ.

ಟೀಮ್ ನ್ಯೂಸ್: ಕೆಕೆಆರ್: ಕೆಕೆಆರ್‌ನ 5ನೆ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಕೌಲ್ಟರ್-ನೀಲ್ ಅವರು ಟ್ರೆಂಟ್ ಬೌಲ್ಟ್‌ಗೆ ಕದ ಮುಚ್ಚಿದ್ದಾರೆ. ಕ್ರಿಸ್ ಲಿನ್ ಭುಜನೋವಿಗೆ ತುತ್ತಾದ ಬಳಿಕ ನರೇನ್ 2 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದರು. ಮತ್ತೊಂದು ಪಂದ್ಯದಲ್ಲಿ ಗ್ರಾಂಡ್‌ಹೊಮ್ ಇನಿಂಗ್ಸ್ ಆರಂಭಿಸಿದ್ದರು. ಕೆಕೆಆರ್ ಮುಂದಿನ ಪಂದ್ಯದಲ್ಲಿ ಗಂಭೀರ್‌ರೊಂದಿಗೆ ಉತ್ತಪ್ಪರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಗ್ರಾಂಡ್‌ಹೊಮ್ ಬದಲಿಗೆ ಶಾಕಿಬ್ ಅಲ್ ಹಸನ್‌ಗೆ ಅವಕಾಶ ಸಿಗಬಹುದು. ಸೂರ್ಯಕುಮಾರ್ ಬದಲಿಗೆ ಇಶಾಂಕ್ ಜಗ್ಗಿ ಅವಕಾಶ ಗಿಟ್ಟಿಸಿಕೊಳ್ಳಬಹುದು.

ಗುಜರಾತ್ ಲಯನ್ಸ್: ಡ್ವೇಯ್ನ್ ಬ್ರಾವೊ ಅತಿ ಶೀಘ್ರವೇ ತಂಡಕ್ಕೆ ವಾಪಸಾಗಲಿದ್ದಾರೆ. ಫಾಕ್ನರ್ 11ರ ಬಳಗದಲ್ಲಿ ಸ್ಥಾನ ಪಡೆಯುವುದು ನಿಶ್ಚಿತ. ಡರೆನ್ ಸ್ಮಿತ್ ಕಳೆದೆರಡು ಪಂದ್ಯಗಳಲ್ಲಿ ವಿಫಲವಾಗಿರುವ ಕಾರಣ ಆ್ಯರೊನ್ ಫಿಂಚ್ ಅಥವಾ ಜೇಸನ್ ರಾಯ್ ಭಡ್ತಿ ಪಡೆಯಬಹುದು.

ಅಂಕಿ-ಅಂಶ:

*ಟೂರ್ನಿಯಲ್ಲಿ ಈವರ್ಷ ಗುಜರಾತ್ ತಂಡ ಕಳಪೆ ಪ್ರದರ್ಶನ ನೀಡಿದ್ದರೂ ಬ್ರೆಂಡನ್ ಮೆಕಲಮ್ ಟೂರ್ನಿಯಲ್ಲಿ ಎರಡನೆ ಗರಿಷ್ಠ ಮೊತ್ತ(225) ಗಳಿಸಿದ್ದಾರೆ.

*ಒಟ್ಟು 221 ರನ್ ಗಳಿಸಿರುವ ಮನೀಷ್ ಪಾಂಡೆ ಮೂರನೆ ಸ್ಥಾನದಲ್ಲಿದ್ದಾರೆ.

*ಐದು ಪಂದ್ಯಗಳ ಬಳಿಕ ಸುನೀಲ್ ನರೇನ್ ಎಕಾನಮಿ ರೇಟ್ 5.60. ಇದು ಈವರ್ಷದ ಐಪಿಎಲ್‌ನಲ್ಲಿ ಬೌಲರ್‌ನ ಶ್ರೇಷ್ಠ ಪ್ರದರ್ಶನವಾಗಿದೆ.

ಪಂದ್ಯದ ಸಮಯ: ರಾತ್ರಿ: 8:00

ಇಂದಿನ ಪಂದ್ಯ

ಕೋಲ್ಕತಾ ನೈಟ್ ರೈಡರ್ಸ್-ಗುಜರಾತ್ ಲಯನ್ಸ್

ಸ್ಥಳ: ಈಡನ್‌ಗಾರ್ಡನ್ಸ್, ಕೋಲ್ಕತಾ

ಸಮಯ: ರಾತ್ರಿ 8:00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X