Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಣಾ, ಬಟ್ಲರ್ ಸಾಹಸ, ಮುಂಬೈಗೆ ಭರ್ಜರಿ...

ರಾಣಾ, ಬಟ್ಲರ್ ಸಾಹಸ, ಮುಂಬೈಗೆ ಭರ್ಜರಿ ಜಯ

ಅಮ್ಲ ಆಕರ್ಷಕ ಶತಕ ವ್ಯರ್ಥ

ವಾರ್ತಾಭಾರತಿವಾರ್ತಾಭಾರತಿ20 April 2017 11:46 PM IST
share
ರಾಣಾ, ಬಟ್ಲರ್ ಸಾಹಸ, ಮುಂಬೈಗೆ ಭರ್ಜರಿ ಜಯ

  ಇಂದೋರ್, ಎ.20: ನಿತೀಶ್ ರಾಣಾ (ಅಜೇಯ 62 ರನ್) ಹಾಗೂ ಜೋಸ್ ಬಟ್ಲರ್(77) ಅರ್ಧಶತಕದ ಬೆಂಬಲದಿಂದ ಮುಂಬೈ ಇಂಡಿಯನ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧದ 22ನೆ ಐಪಿಎಲ್ ಪಂದ್ಯವನ್ನು 8 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಇಲ್ಲಿನ ಹೋಳ್ಕರ್ ಸ್ಟೇಡಿಯಂನಲ್ಲಿ ಗುರುವಾರ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಂಜಾಬ್ ತಂಡ ಆರಂಭಿಕ ಆಟಗಾರ ಹಾಶಿಮ್ ಅಮ್ಲ(ಅಜೇಯ 104, 60 ಎಸೆತ, 8 ಬೌಂಡರಿ, 6 ಸಿಕ್ಸರ್ ) ಚುಟುಕು ಪಂದ್ಯದಲ್ಲಿ ಬಾರಿಸಿದ ಚೊಚ್ಚಲ ಶತಕದ ಸಾಹಸದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 198 ರನ್ ಕಲೆ ಹಾಕಿತು.

 ಗೆಲ್ಲಲು ಕಠಿಣ ಸವಾಲು ಪಡೆದ ಮುಂಬೈ ಇನ್ನೂ 27 ಎಸೆತಗಳು ಬಾಕಿ ಇರುವಾಗಲೇ 2 ವಿಕೆಟ್‌ಗಳ ನಷ್ಟದಲ್ಲಿ 199 ರನ್ ಗಳಿಸಿತು. 3ನೆ ಕ್ರಮಾಂಕದಲ್ಲಿ ಸತತ 4ನೆ ಬಾರಿ ಅರ್ಧಶತಕ ಸಿಡಿಸಿದ ನಿತೀಶ್ ರಾಣಾ(ಅಜೇಯ 62, 34 ಎಸೆತ, 7 ಸಿಕ್ಸರ್) ತಂಡದ ಗೆಲುವಿನಲ್ಲಿ ಮತ್ತೊಮ್ಮೆ ಮಹತ್ವದ ಕೊಡುಗೆ ನೀಡಿದರು.

ಮೊದಲ ವಿಕೆಟ್‌ಗೆ 81 ರನ್ ಜೊತೆಯಾಟ ನಡೆಸಿದ ನಾಯಕ ಪಾರ್ಥಿವ್ ಪಟೇಲ್(37) ಹಾಗೂ ಜೋಸ್ ಬಟ್ಲರ್(77, 37 ಎಸೆತ, 7 ಬೌಂಡರಿ, 5 ಸಿಕ್ಸರ್) ಮುಂಬೈಗೆ ಭದ್ರ ಬುನಾದಿ ಹಾಕಿಕೊಟ್ಟರು. ಪವರ್‌ಪ್ಲೇ ವೇಳೆ ಮುಂಬೈ ತಂಡ 82 ರನ್ ಕಲೆ ಹಾಕಿತು.

ಪಟೇಲ್ ಔಟಾದ ಬಳಿಕ ಕ್ರೀಸ್‌ಗಿಳಿದ ರಾಣಾ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ಮುಂದುವರಿಸಿದರು. ಬಟ್ಲರ್‌ರೊಂದಿಗೆ 2ನೆ ವಿಕೆಟ್‌ಗೆ 85 ರನ್ ಸೇರಿಸಿ ತಂಡದ ಚೇಸಿಂಗ್‌ಗೆ ಬಲ ನೀಡಿದರು.

ಬಟ್ಲರ್, ಮೋಹಿತ್ ಶರ್ಮಗೆ ವಿಕೆಟ್ ಒಪ್ಪಿಸಿದ ಬಳಿಕ ಹಾರ್ದಿಕ್ ಪಾಂಡ್ಯರೊಂದಿಗೆ(ಅಜೇಯ 15)ಕೈ ಜೋಡಿಸಿದ ರಾಣಾ 3ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 33 ರನ್ ಸೇರಿಸಿ ಮುಂಬೈ ತಂಡ ಗರಿಷ್ಠ ಮೊತ್ರವನ್ನು ಯಶಸ್ವಿಯಾಗಿ ಚೇಸಿಂಗ್ ಮಾಡಲು ನೆರವಾದರು.

 ಪಂಜಾಬ್ ಸತತ 4ನೆ ಪಂದ್ಯದಲ್ಲಿ ಸೋಲು ಕಂಡಿತು. 6ನೆ ಪಂದ್ಯದಲ್ಲಿ 5ನೆ ಗೆಲುವು ಸಾಧಿಸಿ 10 ಅಂಕವನ್ನು ಗಳಿಸಿದ ಮುಂಬೈ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಇದಕ್ಕೆ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಂಜಾಬ್‌ಗೆ ಅಮ್ಲ ಹಾಗೂ ಶಾನ್ ಮಾರ್ಷ್(26) ಮೊದಲ ವಿಕೆಟ್‌ಗೆ 46 ರನ್ ಸೇರಿಸಿ ಸಾಧಾರಣ ಆರಂಭವನ್ನು ನೀಡಿದ್ದರು. ಸಹಾ 11 ರನ್‌ಗೆ ಔಟಾದಾಗ 3ನೆ ವಿಕೆಟ್‌ಗೆ 83 ರನ್ ಜೊತೆಯಾಟ ನಡೆಸಿದ ಅಮ್ಲ-ಮ್ಯಾಕ್ಸ್‌ವೆಲ್ ಜೋಡಿ ತಂಡದ ಮೊತ್ತವನ್ನು 163ಕ್ಕೆ ತಲುಪಿಸಿದರು.
18 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್‌ಗಳಿರುವ 40 ರನ್ ಗಳಿಸಿದ್ದ ಮ್ಯಾಕ್ಸ್‌ವೆಲ್‌ರನ್ನು ಬುಮ್ರಾ ಕ್ಲೀನ್ ಬೌಲ್ಡ್ ಮಾಡಿದರು.
5ನೆ ವಿಕೆಟ್‌ಗೆ ಅಕ್ಷರ್ ಪಟೇಲ್‌ರೊಂದಿಗೆ ಮುರಿಯದ ಜೊತೆಯಾಟದಲ್ಲಿ 32 ರನ್ ಸೇರಿಸಿದ ಅಮ್ಲ ತಂಡದ ಮೊತ್ತವನ್ನು 200ರ ಗಡಿ ತಲುಪಿಸಿದರು.
ಸಂಕ್ಷಿಪ್ತ ಸ್ಕೋರ್
ಕಿಂಗ್ಸ್ ಇಲೆವೆನ್ ಪಂಜಾಬ್: 20 ಓವರ್‌ಗಳಲ್ಲಿ 198/4

(ಹಾಶಿಮ್ ಅಮ್ಲ ಅಜೇಯ 104, ಮ್ಯಾಕ್ಸ್‌ವೆಲ್ 40, ಮೆಕ್ಲಿನಘನ್ 2-46)
ಮುಂಬೈ ಇಂಡಿಯನ್ಸ್: 15.3 ಓವರ್‌ಗಳಲ್ಲಿ 199/2
(ಜೋಸ್ ಬಟ್ಲರ್ 77, ರಾಣಾ ಅಜೇಯ 62, ಪಟೇಲ್ 37, ಸ್ಟಾನಿಸ್ 1-28)
ಪಂದ್ಯಶ್ರೇಷ್ಠ: ಜೋಸ್ ಬಟ್ಲರ್.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X