Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಪಶುಗಳ ಚರ್ಮ ಸಾಗಣೆಗೆ ಅಡ್ಡಿ:...

ದೇಶದಲ್ಲಿ ಪಶುಗಳ ಚರ್ಮ ಸಾಗಣೆಗೆ ಅಡ್ಡಿ: ಚರ್ಮ ರಫ್ತು ಮಾಡುವ ಸಂಸ್ಥೆಗಳು ಸಂಕಷ್ಟದಲ್ಲಿ

ವಾರ್ತಾಭಾರತಿವಾರ್ತಾಭಾರತಿ21 April 2017 8:13 PM IST
share
ದೇಶದಲ್ಲಿ ಪಶುಗಳ ಚರ್ಮ ಸಾಗಣೆಗೆ ಅಡ್ಡಿ: ಚರ್ಮ ರಫ್ತು ಮಾಡುವ ಸಂಸ್ಥೆಗಳು ಸಂಕಷ್ಟದಲ್ಲಿ

ಕೋಲ್ಕತಾ, ಎ.21: ಗೋವುಗಳ ವಧೆಗೆ ಕೆಲವು ರಾಜ್ಯಗಳಲ್ಲಿ ನಿಷೇಧ ಹೇರಿದ ಪರಿಣಾಮ ದೇಶದ ಕೆಲವು ಬೃಹತ್ ಚರ್ಮ ಉತ್ಪನ್ನಗಳ ರಫ್ತು ಮಾಡುವ ಕಾರ್ಖಾನೆಗಳು ಸಮಸ್ಯೆಯ ಸುಳಿಯಲ್ಲಿ ಸಿಲುಕಿವೆ.

ಪಶುಗಳ ಚರ್ಮವನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಿಸಲು ಅಡ್ಡಿ ಇರುವ ಕಾರಣ ಚರ್ಮ ಉತ್ಪನ್ನಗಳನ್ನು ರಫ್ತು ಮಾಡುತ್ತಿರುವ ದೇಶದ ಕೆಲವು ಬೃಹತ್ ಕಾರ್ಖಾನೆಗಳು ಈಗ ಹಸುಗಳ ಕಚ್ಚಾ ಚರ್ಮವನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿಯಿದೆ.

ಉತ್ತಮ ಗುಣಮಟ್ಟದ ಕಚ್ಚಾ ಚರ್ಮವನ್ನು ಸ್ಥಳೀಯವಾಗಿ ಪಡೆಯುವುದು ಈಗ ಸಮಸ್ಯೆಯಾಗಿದೆ. ಆದ್ದರಿಂದ ಬೃಹತ್ ರಫ್ತು ಸಂಸ್ಥೆಗಳು ಆಪ್ರಿಕಾ, ಬ್ರೆಝಿಲ್, ಮೆಕ್ಸಿಕೊ, ನ್ಯೂಝಿಲ್ಯಾಂಡ್ ಮತ್ತು ಆಸ್ಟ್ರೇಲಿಯಾದಿಂದ ಕಚ್ಚಾ ಚರ್ಮ ಆಮದು ಮಾಡಿಕೊಳ್ಳುತ್ತಿವೆ ಎಂದು ಪೂರ್ವ ರಾಜ್ಯಗಳ ಚರ್ಮ ರಫ್ತುದಾರರ ಸಮಿತಿಯ ಅಧ್ಯಕ್ಷ ರಮೇಶ್ ಜುನೇಜಾ ತಿಳಿಸಿದ್ದಾರೆ.

  ಪ್ರಾಣಿಗಳ ವಧೆಗೆ ನಿಷೇಧ ಇಲ್ಲದ ಉ.ಪ್ರ. ಮತ್ತು ಪಂಜಾಬಿನಲ್ಲಿ ಕೋಣಗಳ ಚರ್ಮ ದೊರೆಯುತ್ತದೆ. ಆದರೆ ಇದನ್ನು ಸಾಗಿಸುವುದೇ ಸಮಸ್ಯೆಯಾಗಿದೆ. ಕೆಲವು ಸಂಘಟನೆಗಳು ಅನವಶ್ಯಕ ತೊಂದರೆ ಸೃಷ್ಟಿಸುತ್ತವೆ . ಮುದಿ ಹಸುಗಳು ಅಥವಾ ನೈಸರ್ಗಿಕವಾಗಿ ಸತ್ತ ಹಸುಗಳ ಚರ್ಮವನ್ನೂ ಸಾಗಿಸಲು ಬಿಡುತ್ತಿಲ್ಲ ಎಂದು ಅವರು ಹೇಳುತ್ತಾರೆ.

     ಪ.ಬಂಗಾಲ ಮತ್ತು ಕೇರಳದಲ್ಲಿ ಮುದಿ ಅಥವಾ ಹಾಲು ಕೊಡದ ದನಗಳ ವಧೆಗೆ ನಿಷೇಧ ಹೇರಲಾಗಿಲ್ಲ. ಆದ್ದರಿಂದ ದನದ ಚರ್ಮವನ್ನು ಆಮದು ಮಾಡಿಕೊಳ್ಳುವುದೇ ಈಗ ಇರುವ ಏಕೈಕ ಆಯ್ಕೆಯಾಗಿದೆ ಎಂದು ಜುನೇಜಾ ಹೇಳಿದ್ದಾರೆ. ಚರ್ಮದ ರಫ್ತಿನಿಂದ ದೇಶಕ್ಕೆ ವಾರ್ಷಿಕ 13 ಬಿಲಿಯನ್ ಡಾಲರ್‌ಗಳಷ್ಟು ಆದಾಯವಿದೆ. ಈ ಆರ್ಥಿಕ ವರ್ಷದ ಪ್ರಥಮ ತ್ರೈಮಾಸಿಕ ಅವಧಿಯಲ್ಲಿ ಚರ್ಮ ರಫ್ತಿನಲ್ಲಿ ಶೇ.20ರಷ್ಟು ಇಳಿಕೆ ದಾಖಲಾಗಿದೆ. ಹೀಗೆಯೇ ಮುಂದುವರಿದರೆ ಮುಂದಿನ ಐದು ವರ್ಷಗಳಲ್ಲಿ 27 ಬಿಲಿಯನ್ ಡಾಲರ್ ಮೊತ್ತದ ಚರ್ಮದ ರಫ್ತು ಸಾಧಿಸುವ ಗುರಿ ತಲುಪಲು ಸಾಧ್ಯವಾಗದು ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X