Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿಸ್ಮತಿಯ ನಂತರ- ಭಾರತೀಯ ಸಾಹಿತ್ಯ...

ವಿಸ್ಮತಿಯ ನಂತರ- ಭಾರತೀಯ ಸಾಹಿತ್ಯ ವಿಮರ್ಶೆಯ ಬಿಕ್ಕಟ್ಟುಗಳು

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ21 April 2017 11:07 PM IST
share
ವಿಸ್ಮತಿಯ ನಂತರ- ಭಾರತೀಯ ಸಾಹಿತ್ಯ ವಿಮರ್ಶೆಯ ಬಿಕ್ಕಟ್ಟುಗಳು

ಭಾರತೀಯ ಸಾಹಿತ್ಯ ವಿಮರ್ಶೆಯಲ್ಲಿ ಸಂಪ್ರದಾಯ ಮತ್ತು ಬದಲಾವಣೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಜಿ. ಎನ್. ದೇವಿ ಅವರು ಬರೆದಿರುವ ‘ಆಫ್ಟರ್ ಅಮ್ನೇಶಿಯಾ’ ಕೃತಿಯ ಅನುವಾದ ‘ವಿಸ್ಮತಿಯ ನಂತರ’. ಬಿ. ಎ. ಶಾರದಾ ಅವರು ಈ ಕೃತಿಯನ್ನು ಕನ್ನಡಕ್ಕಿಳಿಸಿದ್ದಾರೆ. ಸಾಂಸ್ಕೃತಿಕ ಮರೆವು ವರ್ತಮಾನದಲ್ಲೂ ಚರ್ಚೆಗೊಳಗಾಗುತ್ತಿರುವ ವಸ್ತು. ಅದರ ಕುರಿತ ವಾಗ್ವಾದಗಳು ಹಿಂದೆಯೂ ಇತ್ತು. ಇಂದಿಗೂ ಮುಂದುವರಿಯುತ್ತಿದೆ. ಡಾ. ರಜನಿ ಕೊಥಾರಿ, ಡಾ. ದೇವಿ, ಡಾ. ಡಿ. ಆರ್. ನಾಗರಾಜ್‌ರಂತಹ ಚಿಂತಕರು ಈ ಕುರಿತಂತೆ ಬರೆದಿದ್ದಾರೆ. ಈ ಪ್ರಬಂಧವು ವಿಮರ್ಶೆಯಲ್ಲಿ ಬಿಕ್ಕಟ್ಟನ್ನು ವಿವರಿಸುವುದರಿಂದ ಪ್ರಾರಂಭಿಸಿ ಭಾರತೀಯ ಸಾಹಿತ್ಯ ವಿಮರ್ಶೆಯ ತಾತ್ಕಾಲಿಕ ಇತಿಹಾಸದ ಬರವಣಿಗೆಯ ಬಗ್ಗೆ ಪ್ರಸ್ತಾಪಿಸುತ್ತದೆ.

ಈ ಕೃತಿಯಲ್ಲಿ ಪ್ರಮುಖ ಮೂರು ಅಧ್ಯಾಯಗಳಿವೆ. ಮೊದಲನೆ ಅಧ್ಯಾಯ ಸಂಪ್ರದಾಯ ಮತ್ತು ವಿಸ್ಮತಿಗೆ ಸೀಮಿತವಾಗಿದೆ. ಸಾಹಿತ್ಯ ವಿಮರ್ಶೆಯಲ್ಲಿ ಬಿಕ್ಕಟ್ಟು, ಪರಂಪರೆ, ಆಧುನಿಕ ಭಾರತೀಯ ಬುದ್ಧಿಜೀವಿಗಳು ಮತ್ತು ಪಾಶ್ಚಾತ್ಯ ಚಿಂತನೆ, ಆಧುನಿಕ ಭಾರತ ಮತ್ತು ಸಂಸ್ಕೃತ ಪರಂಪರೆ, ವಸಾಹತು ಪರಿಣಾಮ, ಭಾಷಾ ಸಾಹಿತ್ಯಗಳು ಮತ್ತು ಆಧುನಿಕ ನಿಲುವು, ಸಂಸ್ಕೃತಿ, ವಿಸ್ಮತಿ ಮೊದಲಾದವುಗಳು ಈ ಅಧ್ಯಾಯದಲ್ಲಿ ಚರ್ಚೆಗೊಳಗಾಗಿವೆ.

ಎರಡನೆ ಅಧ್ಯಾಯದ ಹೆಸರು ‘ಎಂದೂ ಮುಗಿಯದ ಸಂಕ್ರಮಣ’. ಇಲ್ಲಿ, ಸಾಂಸ್ಕೃತಿಕ ಪ್ರಾಕ್ತನ ಶಾಸ್ತ್ರ, ಮಾರ್ಗ ಮತ್ತು ದೇಶಿ, ಭಕ್ತಿವಂತಿಕೆ ಮತ್ತು ಸಂವಾದ, ವಸಾಹತಿನ ರಚನೆ-ನಗರ ಮತ್ತು ಸೇನಾವಸತಿ, ಕಾನೂನಿನ ದ್ವಿತ್ವ -ಉಭಯತ್ವದ ಕಿರು ಭಾಗಗಳಿವೆ.

 ವಿಸ್ಮತಿಯ ನಂತರ ಕೃತಿಯಲ್ಲಿ ತ್ರಿಪಕ್ಷೀಯ ಸಂಬಂಧ ಮತ್ತು ದೇಶೀವಾದದ ಚರ್ಚೆಗಳಿವೆ. ಉಪಸಂಹಾರದಲ್ಲಿ ವಿಮರ್ಶೆಯ ಕರ್ತವ್ಯವನ್ನು ಲೇಖಕರು ಬೊಟ್ಟು ಮಾಡುತ್ತಾರೆ. ಭಾರತೀಯ ಸಾಹಿತ್ಯದ ಕುರಿತಂತೆ ಗಂಭೀರವಾಗಿ ಅಧ್ಯಯನ ಮಾಡುವವರಿಗೆ, ಅಕಾಡಮಿಕ್ ರೀತಿಯಲ್ಲಿ ಇದೊಂದು ಮಹತ್ವದ ಕೃತಿ. ಕುವೆಂಪು ಭಾಷಾಭಾರತಿ ಪ್ರಾಧಿಕಾರ ಈ ಕೃತಿಯನ್ನು ಹೊರತಂದಿದೆ. 210 ಪುಟಗಳ ಈ ಕೃತಿಯ ಮುಖಬೆಲೆ 160 ರೂಪಾಯಿ.

share
ಕಾರುಣ್ಯಾ
ಕಾರುಣ್ಯಾ
Next Story
X