Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌ನಲ್ಲಿ ನಿತೀಶ್ ರಾಣಾ ‘ಪ್ರತಾಪ’

ಐಪಿಎಲ್‌ನಲ್ಲಿ ನಿತೀಶ್ ರಾಣಾ ‘ಪ್ರತಾಪ’

ವಾರ್ತಾಭಾರತಿವಾರ್ತಾಭಾರತಿ21 April 2017 11:33 PM IST
share
ಐಪಿಎಲ್‌ನಲ್ಲಿ ನಿತೀಶ್ ರಾಣಾ ‘ಪ್ರತಾಪ’

ಹೊಸದಿಲ್ಲಿ, ಎ.21: ಈವರ್ಷದ ಐಪಿಎಲ್ ಆರಂಭಕ್ಕೆ ಮೊದಲು ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಮೇಲೆ ಎಲ್ಲರ ಕಣ್ಣು ನೆಟ್ಟಿತ್ತು. ಈ ಇಬ್ಬರು ಆಟಗಾರರು ಐಪಿಎಲ್-9ರಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. ಗಾಯದ ಸಮಸ್ಯೆಯಿಂದಾಗಿ ಕೊಹ್ಲಿ ಹಾಗೂ ಡಿವಿಲಿಯರ್ಸ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆಡಿರಲಿಲ್ಲ. ಕೊಹ್ಲಿ-ಡಿವಿಲಿಯರ್ಸ್ ಈತನಕ ಯಾವುದೇ ಮ್ಯಾಜಿಕ್ ಮಾಡಿಲ್ಲದಿದ್ದರೂ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡುತ್ತಿರುವ ದಿಲ್ಲಿಯ ಯುವ ಬ್ಯಾಟ್ಸ್‌ಮನ್ ನಿತೀಶ್ ರಾಣಾ ಎಲ್ಲರ ಗಮನ ತನ್ನತ್ತ ಸೆಳೆಯುತ್ತಿದ್ದಾರೆ.

ರಾಣಾ ಈವರ್ಷದ ರಣಜಿ ಹಾಗೂ ವಿಜಯ್ ಹಝಾರೆ ಟ್ರೋಫಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕಾರಣ ಅವರ ಮೇಲೆ ಹೆಚ್ಚು ನಿರೀಕ್ಷೆಯಿರಲಿಲ್ಲ. ಐಪಿಎಲ್‌ನ ಮೊದಲೆರಡು ವಾರಗಳಲ್ಲಿ ರಾಣಾ ಬ್ಯಾಟಿಂಗ್‌ನ ಮೂಲಕ ಹೊಸ ಅಲೆ ಎಬ್ಬಿಸಿದ್ದಾರೆ. ಇದೇ ಅಲೆಯನ್ನು ಕಾಯ್ದುಕೊಂಡರೆ ಮುಂದಿನ ದಿನಗಳಲ್ಲಿ ಟೀಮ್ ಇಂಡಿಯಾಕ್ಕೆ ಪ್ರವೇಶ ಪಡೆಯಬಹುದು.

ಐಪಿಎಲ್-10ರ ಮೊದಲ ಪಂದ್ಯದಲ್ಲೇ 28 ಎಸೆತಗಳಲ್ಲಿ 34 ರನ್ ಗಳಿಸಿದ್ದರು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಣಾ ತನ್ನ ಪ್ರತಾಪ ತೋರಿಸಿದರು. ಕೆಕೆಆರ್ 7 ವಿಕೆಟ್‌ಗೆ 178 ರನ್ ಗಳಿಸಿತ್ತು. ಕಠಿಣ ಗುರಿ ಪಡೆದಿದ್ದ ಮುಂಬೈ ಆರಂಭಿಕ ಕುಸಿತಕ್ಕೆ ಒಳಗಾಗಿತ್ತು. ಗೆಲುವಿಗೆ 23 ಎಸೆತಗಳಲ್ಲಿ 60 ರನ್ ಅಗತ್ಯವಿತ್ತು. ಆಗ ತಂಡಕ್ಕೆ ಆಸರೆಯಾಗಿದ್ದ ರಾಣಾ ಕೇವಲ 29 ಎಸೆತಗಳಲ್ಲಿ 50 ರನ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ ಜೊತೆಗೂಡಿ ಕೆಕೆಆರ್ ದಾಳಿಯನ್ನು ಎದುರಿಸಿದ್ದ ರಾಣಾ ಮುಂಬೈಗೆ 4 ವಿಕೆಟ್‌ಗಳ ಗೆಲುವು ತಂದುಕೊಟ್ಟಿದ್ದರು.

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಣಾ 36 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳಿರುವ 45 ರನ್ ಗಳಿಸಿ ಮುಂಬೈ ರನ್ ಚೇಸಿಂಗ್‌ಗೆ ಬಲ ನೀಡಿದ್ದರು. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಕೇವಲ 11 ರನ್ ಗಳಿಸಿ ನಿರಾಸೆಗೊಳಿಸಿದ್ದರು. ಆದರೆ, ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 36 ಎಸೆತಗಳಲ್ಲಿ 53 ರನ್ ಗಳಿಸಿದ್ದ ರಾಣಾ ಮುಂಬೈ ತಂಡ 177 ರನ್ ಚೇಸಿಂಗ್‌ಗೆ ಉತ್ತಮ ಬುನಾದಿ ಹಾಕಿಕೊಟ್ಟಿದ್ದರು.

ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ತಂಡ ಹಾಶಿಮ್ ಅಮ್ಲ ಶತಕದ ಬೆಂಬಲದಿಂದ 4 ವಿಕೆಟ್‌ಗೆ 198 ರನ್ ಗಳಿಸಿತ್ತು. ಆಗ ಮತ್ತೊಮ್ಮೆ ಮುಂಬೈಗೆ ಆಸರೆಯಾಗಿದ್ದ ರಾಣಾ 34 ಎಸೆತಗಳಲ್ಲಿ 62 ರನ್ ಗಳಿಸಿದ್ದಲ್ಲದೆ ಇಂಗ್ಲೆಂಡ್‌ನ ಜೋಸ್ ಬಟ್ಲರ್ ಹಾಗೂ ಹಾರ್ದಿಕ್ ಪಾಂಡ್ಯರೊಂದಿಗೆ ನಿರ್ಣಾಯಕ ಜೊತೆಯಾಟ ನಡೆಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದರು.

ಟೂರ್ನಿಯಲ್ಲಿ ಒಟ್ಟು 255 ರನ್ ಗಳಿಸಿರುವ ರಾಣಾ ಪ್ರಸ್ತುತ ‘ಆರೆಂಜ್ ಕ್ಯಾಪ್’ನ್ನು ತನ್ನದಾಗಿಸಿಕೊಂಡಿದ್ದಾರೆ. ಒಟ್ಟು 16 ಸಿಕ್ಸರ್‌ಗಳನ್ನು ಸಿಡಿಸಿ ಸಿಕ್ಸರ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡುಲ್ಕರ್ ಹಾಗೂ ಮಹೇಲ ಜಯವರ್ಧನೆ ಮಾರ್ಗದರ್ಶನದಲ್ಲಿ ರಾಣಾ ಮುಂಬೈನ ಪ್ರಮುಖ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ. ರಾಣಾ ಇದೇ ರೀತಿ ಬ್ಯಾಟಿಂಗ್‌ನ್ನು ಮುಂದುವರಿಸಿದರೆ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡಕ್ಕೆ ಆಯ್ಕೆಯಾಗಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X