Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದಲ್ಲಿ ಹಳಸುತ್ತಿರುವ...

ಜಮ್ಮು ಕಾಶ್ಮೀರದಲ್ಲಿ ಹಳಸುತ್ತಿರುವ ಬಿಜೆಪಿ-ಪಿಡಿಪಿ ಮೈತ್ರಿ

ವಾರ್ತಾಭಾರತಿವಾರ್ತಾಭಾರತಿ22 April 2017 7:18 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಮ್ಮು ಕಾಶ್ಮೀರದಲ್ಲಿ ಹಳಸುತ್ತಿರುವ ಬಿಜೆಪಿ-ಪಿಡಿಪಿ ಮೈತ್ರಿ

ಶ್ರೀನಗರ, ಎ.22: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರಕಾರ ರಚನೆಯಾಗಿ ಎರಡು ವರ್ಷವಾಗುವಷ್ಟರಲ್ಲಿ ಎರಡೂ ಪಕ್ಷಗಳು ಖಾಸಗಿಯಾಗಿ ಹಾಗೂ ಬಹಿರಂಗವಾಗಿ ವಾಕ್ಸಮರದಲ್ಲಿ ಮುಳುಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂಸೆ, ತೀವ್ರಗಾಮಿ ಚಟುವಟಿಕೆಗಳು ಹಾಗೂ ಇತ್ತೀಚೆಗೆ ನಡೆದ ಲೋಕಸಭಾ ಉಪಚುನಾವಣೆಗಳಲ್ಲಿ ದಾಖಲಾದ ಕನಿಷ್ಠ ಮತದಾನದ ವಿಚಾರವಾಗಿ ಎರಡೂ ಪಕ್ಷಗಳು ಪರಸ್ಪರ ದೋಷಾರೋಪಣೆಯಲ್ಲಿ ತೊಡಗಿಕೊಂಡಿವೆ.

ಹಿಂಸಾಚಾರ ನಡೆಸುವವರ ಮತ್ತು ಕಲ್ಲು ತೂರಾಟಗಾರರ ಮೇಲೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಎರಡೂ ಪಕ್ಷಗಳು ವಿಭಿನ್ನ ನಿಲುವು ತಳೆದಿದ್ದು, ಬಿಜೆಪಿಯ ಧೋರಣೆಯನ್ನು ಸಂಘರ್ಷಾತ್ಮಕ ರಾಜಕೀಯವೆಂದು ಪಿಡಿಪಿ ಬಣ್ಣಿಸಿದರೆ, ಪಿಡಿಪಿ ಓಲೈಕೆ ರಾಜಕೀಯದಲ್ಲಿ ತೊಡಗಿದೆ ಎಂಬುದು ಬಿಜೆಪಿಯ ವಾದವಾಗಿದೆ.

ಕಲ್ಲು ತೂರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಒತ್ತಡಗಳಿಗೆ ಮಣಿಯದಂತೆ ಬಿಜೆಪಿಯು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರನ್ನು ಆಗ್ರಹಿಸುತ್ತಾ ಬಂದಿದೆ. ತರುವಾಯ ಪೊಲೀಸ್ ಇಲಾಖೆ ಮತ್ತು ಸುರಕ್ಷ ಪಡೆಗಳೂ ಗೊಂದಲದಲ್ಲಿವೆ ಎನ್ನಲಾಗಿದೆ. ‘‘ನಾವು ಕಲ್ಲು ತೂರಾಟಗಾರರನ್ನು ಬಂಧಿಸಿದಾಗ ಅವರನ್ನು ಬಿಡುಗಡೆಗೊಳಿಸುವಂತೆ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳಿಂದ ಒತ್ತಡ ಎದುರಿಸುತ್ತೇವೆ. ಎರಡೂ ಪಕ್ಷಗಳು ತಮ್ಮ ಪ್ರಭಾವ ಬೀರಲು ಯತ್ನಿಸುತ್ತವೆ ಎಂದು ತಮ್ಮ ಹೆಸರು ಬಹಿರಂಗಪಡಿಸಲಿಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಜ್ಯದಲ್ಲಿ ಹಿಂಸಾಚಾರ ಪ್ರಕರಣಗಳು 2016ರಲ್ಲಿ ಹಿಂದಿನ ವರ್ಷಗಳಿಗಿಂತ ಹೆಚ್ಚಾಗಿದೆ. 2015ರಲ್ಲಿ 1,157 ಹಿಂಸಾಚಾರ ಪ್ರಕರಣಗಳು ವರದಿಯಾಗಿದ್ದರೆ, 2016ರಲ್ಲಿ 3,404 ಪ್ರಕರಣಗಳು ವರದಿಯಾಗಿವೆ.

ಆದರೆ ಕಳೆದ ವರ್ಷದ ಹಿಂಸಾಚಾರದಲ್ಲಿ 80 ನಾಗರಿಕರು ಸಾವಿಗೀಡಾದಂದಿನಿಂದ ಮುಫ್ತಿ ಕೇವಲ ನೆಪ ಮಾತ್ರಕ್ಕೆ ಮುಖ್ಯಮಂತ್ರಿಯಾಗಿದ್ದು, ಅವರ ಮೂಗಿನ ನೇರಕ್ಕೇ ಹಕ್ಕುಗಳ ಉಲ್ಲಂಘನೆಯಾಗುತ್ತಿವೆಯೆನ್ನಲಾಗಿದೆ.

''ಭಾರತವನ್ನು ಹಿಂದೂ ರಾಷ್ಟ್ರವಾಗಿಸಬೇಕೆಂಬ ಗುರಿ ಹೊಂದಿರುವ ಆರೆಸ್ಸೆಸ್ಸಿನ ರಾಜಕೀಯ ಸಂಘಟನೆ ಬಿಜೆಪಿ ಆಗಿರುವಾಗ ಎರಡೂ ಪಕ್ಷಗಳ ನಡುವಣ ಈ ಮೈತ್ರಿ ಸರಿ ಬಾರದು'' ಎಂದು ಪಿಡಿಪಿ ನಾಯಕರೊಬ್ಬರು ವಿವರಿಸುತ್ತಾರೆ. ''ಬಿಜೆಪಿಯೊಡನೆ ನಮ್ಮ ಮೈತ್ರಿಯನ್ನು ಸಮರ್ಥಿಸಲು ನಮಗೆ ಕಷ್ಟವಾಗುತ್ತಿದೆ'' ಎಂದು ಇನ್ನೊಬ್ಬರು ನಾಯಕರು ಹೇಳುತ್ತಾರೆ.

ರಾಜ್ಯದಲ್ಲಿ ಈಗಲೂ ಇರುವ ಅಶಾಂತಿಯ ವಾತಾವರಣಕ್ಕೆ ಬಿಜೆಪಿ ಪ್ರತ್ಯೇಕತಾವಾದಿಗಳು ಹಾಗೂ ಪಾಕಿಸ್ತಾನದೊಂದಿಗೆ ಮಾತುಕುತೆ ಮುಂದುವರಿಸದೇ ಇರಲು ನಿರ್ಧರಿಸಿದ್ದೇ ಕಾರಣವೆಂದು ಪಿಡಿಪಿ ನಂಬಿದೆ. ಎರಡೂ ಪಕ್ಷಗಳ ನಡುವಿನ ನಂಟು ಅದೆಷ್ಟು ಹಳಸಿದೆಯೆಂದರೆ ಕಾಶ್ಮೀರದ ಕಲ್ಲು ತೂರಾಟಗಾರರನ್ನು ಗುಂಡಿನ ಮೂಲಕ ಹತೋಟಿಗೆ ತರಬೇಕೆಂದು ಬಿಜೆಪಿ ಸಚಿವ ಚಂದ್ರ ಪ್ರಕಾಶ್ ಗಂಗ ಹೇಳಿದ್ದರು. ಅವರು ಮತ್ತೆ ತಮ್ಮ ಹೇಳಿಕೆಯನ್ನು ಹಿಂದೆಗೆದುಕೊಂಡಿದ್ದರೂ ಅದು ಅದಾಗಲೇ ಸಾಕಷ್ಟು ಹಾನಿಯುಂಟು ಮಾಡಿತ್ತು.

ಇತ್ತೀಚಿಗಿನ ಬೆಳವಣಿಗೆಯಲ್ಲಿ ಜಮ್ಮು ಸರಕಾರದ ಹಣಕಾಸು ಸಚಿವ ಹಸೀಬ್ ದ್ರಬು ಶುಕ್ರವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿ ಎರಡೂ ಪಕ್ಷಗಳ ನಡುವಣ ಭಿನ್ನಾಭಿಪ್ರಾಯ ಬಗೆಹರಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X