Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐದರ ಹರೆಯದ ಬಾಲಕಿಯ ಅತ್ಯಾಚಾರಿಯನ್ನು...

ಐದರ ಹರೆಯದ ಬಾಲಕಿಯ ಅತ್ಯಾಚಾರಿಯನ್ನು ಥಳಿಸಿ ಕೊಂದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ22 April 2017 5:14 PM IST
share
ಐದರ ಹರೆಯದ ಬಾಲಕಿಯ ಅತ್ಯಾಚಾರಿಯನ್ನು ಥಳಿಸಿ ಕೊಂದ ಗ್ರಾಮಸ್ಥರು

ರಾಂಚಿ,ಎ.22: ಐದರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಕುತ್ತಿಗೆಯವರೆಗೆ ಮರಳಿನಲ್ಲಿ ಹೂತಿದ್ದ 25ರ ಹರೆಯದ ಯುವಕನೋರ್ವನನ್ನು ಥಳಿಸಿ ಕೊಲ್ಲುವ ಮೂಲಕ ಉದ್ರಿಕ್ತ ಗ್ರಾಮಸ್ಥರು ತಮ್ಮದೇ ಆದ ರೀತಿಯಲ್ಲಿ ‘ನ್ಯಾಯದಾನ ’ಮಾಡಿದ್ದಾರೆ.

ಇದು ಜಾರ್ಖಂಡ್‌ನಲ್ಲಿ ಈ ವರ್ಷ ‘ಗುಂಪು ನ್ಯಾಯ ’ದ ಮೊದಲ ಪ್ರಮುಖ ಘಟನೆಯಾಗಿರುವಂತಿದೆ. ಉದ್ರಿಕ್ತ ಜನರು ಶುಕ್ರವಾರ ಬೆಳಗಿನ ಜಾವ ಅತ್ಯಾಚಾರಿಯ ಗುಡಿಸಲಿಗೆ ನುಗ್ಗಿ ಆತನನ್ನು ಹೊರಗೆಳೆದು ತಂದು ಪ್ರಜ್ಞೆ ಕಳೆದುಕೊಳ್ಳುವವರೆಗೂ ದೊಣ್ಣೆ, ಬೆಲ್ಟ್, ಚಪ್ಪಲಿ ಮತ್ತು ಕಲ್ಲುಗಳಿಂದ ಥಳಿಸಿದ್ದಾರೆ. ಮಧ್ಯಾಹ್ನ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಆತ ಅಸು ನೀಗಿದ್ದಾನೆ.

ರಾಂಚಿಯಿಂದ ಸುಮಾರು 100 ಕಿ.ಮೀ.ಅಂತರದಲ್ಲಿರುವ ಚಾಂದಿಲ್ ಬ್ಲಾಕ್‌ನ ಸುಖಸಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮಸ್ಥರು ಹೇಳುವಂತೆ ಹತ ಜವಾಹರ್ ಲೋಹಾರ್ ಐದರ ಹರೆಯದ ಬಾಲಕಿಯನ್ನು ಅಪಹರಿಸಿ, ತನ್ನ ಗುಡಿಸಲಿನಲ್ಲಿ ಆಕೆಯ ಮೇಲೆ ಪದೇಪದೇ ಅತ್ಯಾಚಾರವೆಸಗಿದ್ದ. ಬಳಿಕ ಆಕೆ ಪರಾರಿಯಾಗದಂತಿರಲು ಮರಳಿನಲ್ಲಿ ಕುತ್ತಿಗೆಯವರೆಗೆ ಹೂತಿದ್ದ. ಬಾಲಕಿಯನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸ ಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದನ್ನು ದೃಢಪಡಿಸಿಕೊಳ್ಳಲು ವೈದ್ಯಕೀಯ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ನಸುಕಿನ ಮೂರು ಗಂಟೆಯ ಸುಮಾರಿಗೆ ಬಾಲಕಿಯನ್ನು ಲೋಹಾರ್‌ನ ಗುಡಿಸಲಿನಲ್ಲಿ ಪತ್ತೆ ಹಚ್ಚಿದ್ದ ಗ್ರಾಮಸ್ಥರು ಆಕ್ರೋಶಗೊಂಡು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ತಿಳಿಸಿದರು.

ಜಾರ್ಖಂಡ್‌ನ ಬುಡಕಟ್ಟು ಪ್ರಾಬಲ್ಯದ ಗ್ರಾಮೀಣ ಪ್ರದೇಶಗಳಲ್ಲಿ ‘ಗುಂಪು ನ್ಯಾಯ ’ಹೆಚ್ಚು ಪ್ರಚಲಿತದಲ್ಲಿದೆ. ಮೊಬೈಲ್ ಫೋನ್‌ಗಳ ಕಳ್ಳತನದಂತಹ ಸಣ್ಣಪುಟ್ಟ ಅಪರಾಧಗಳಿಗೂ ಹಲವಾರು ಪುಡಿ ಕ್ರಿಮಿನಲ್‌ಗಳನ್ನು ಗುಂಪುಗಳು ಥಳಿಸಿ ಕೊಂದಿವೆ. ಉದ್ರಿಕ್ತ ಗುಂಪುಗಳ ಕೈಗೆ ಸಿಕ್ಕಿ ಸಾವನ್ನಪ್ಪುವವರಲ್ಲಿ ಹೆಚ್ಚಿನವರು ಲೈಂಗಿಕ ದೌರ್ಜನ್ಯಗಳ ಆರೋಪಿಗಳೇ ಆಗಿದ್ದಾರೆ.

 2013,ಫೆ.16ರಂದು ಗುಮ್ಲಾ ಜಿಲ್ಲೆಯ ಸ್ವಾರಿಯಾ ಗ್ರಾಮದಲ್ಲಿ ಸ್ಥಳೀಯ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂವರು ಯುವಕರು ಗುಂಪಿನ ರೋಷಕ್ಕೆ ಬಲಿಯಾಗಿದ್ದರು. 2014,ಆಗಸ್ಟ್‌ನಲ್ಲಿ ಸರಾಯ್‌ಕೇಲಾ-ಖರ್ಸವಾನ ಜಿಲ್ಲೆಯಲ್ಲಿ 35ರ ಹರೆಯದ ಮಹಿಳೆಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದ ರಾಧಾಮೋಹನ್ ಮುಂಡಾ (50) ಎಂಬಾತನನ್ನು ಗುಂಪು ಥಳಿಸಿ ಕೊಂದುಹಾಕಿತ್ತು.

2012ರಿಂದೀಚಿಗೆ ರಾಜ್ಯದಲ್ಲಿ ಇಂತಹ ಕನಿಷ್ಠ ಐದು ಘಟನೆಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X