Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಜಿಎಸ್‌ಟಿ’ ಜಾರಿಯಿಂದ ರಾಜ್ಯಗಳಿಗೆ ಆಗುವ...

‘ಜಿಎಸ್‌ಟಿ’ ಜಾರಿಯಿಂದ ರಾಜ್ಯಗಳಿಗೆ ಆಗುವ ಆದಾಯ ನಷ್ಟಕ್ಕೆ ಕೇಂದ್ರ ಪರಿಹಾರ ನೀಡಲಿ: ಸಿದ್ದರಾಮಯ್ಯ ಮನವಿ

ವಾರ್ತಾಭಾರತಿವಾರ್ತಾಭಾರತಿ23 April 2017 8:21 PM IST
share
‘ಜಿಎಸ್‌ಟಿ’ ಜಾರಿಯಿಂದ ರಾಜ್ಯಗಳಿಗೆ ಆಗುವ ಆದಾಯ ನಷ್ಟಕ್ಕೆ ಕೇಂದ್ರ ಪರಿಹಾರ ನೀಡಲಿ: ಸಿದ್ದರಾಮಯ್ಯ ಮನವಿ

ಹೊಸದಿಲ್ಲಿ, ಎ. 23: ಕೇಂದ್ರ ಸರಕಾರ ಜಾರಿಗೊಳಿಸಲಿರುವ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟಿ)ಕಾಯ್ದೆ ಅಳವಡಿಕೆಯಿಂದ ರಾಜ್ಯಗಳಿಗೆ ಆಗುವ ಆದಾಯ ನಷ್ಟಕ್ಕೆ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ರವಿವಾರ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಜಿಎಸ್ಟಿಯ ಯಶಸ್ವಿ ಮತ್ತು ಸುಸ್ಥಿತಿ ಅನುಷ್ಠಾನಕ್ಕಾಗಿ ಈ ಪರಿಹಾರವನ್ನು ಕಾಲಮಿತಿಯೊಳಗೆ ಬಿಡುಗಡೆ ಮಾಡುವುದು ಅತ್ಯಂತ ಮುಖ್ಯ. ಆ ನಿಟ್ಟಿನಲ್ಲಿ ಕ್ಷಿಪ್ರ ಕ್ರಮ ಕೈಗೊಳ್ಳುವುದರಿಂದ ಕೇಂದ್ರ ಮತ್ತು ರಾಜ್ಯಗಳ ನಡುವೆ ಪರಸ್ಪರ ನಂಬಿಕೆ ಮತ್ತು ಸೌಹಾರ್ದಯುತ ಬಾಂಧವ್ಯ ವೃದ್ಧಿಯಾಗುತ್ತದೆ. ಕೇಂದ್ರ ಸರಕಾರದ ಜಿಎಸ್ಟಿ ಯಶಸ್ವಿಯಾಗಿ ಕಾರ್ಯಗತಗೊಳ್ಳಲು ರಾಜ್ಯಗಳ ಸಹಕಾರವೂ ಮುಖ್ಯ. ಈ ನಿಟ್ಟಿನಲ್ಲಿ ನಷ್ಟ ಭರಿಸಲು ಕೇಂದ್ರ ಸರಕಾರ ಮುಂದಾಗಬೇಕು ಎಂದರು.

ಪರಿಹಾರದ ಮೊತ್ತ ಕಡಿಮೆ: ಆರು ವರ್ಷಗಳಿಂದ ಸತತವಾಗಿ ರಾಜ್ಯದ ರೈತರು ಭೀಕರ ಬರಗಾಲದಿಂದ ಸಂಕಷ್ಟಕ್ಕೀಡಾಗಿದ್ದಾರೆ. ಈ ವರ್ಷವೂ ಮುಂಗಾರು ಹಂಗಾಮಿನಲ್ಲಿ 135 ತಾಲೂಕುಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ 160 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮಗೆ ಕೊಟ್ಟಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದ ಸಿದ್ದರಾಮಯ್ಯ, ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯವನ್ನು ಅಂಕಿ-ಅಂಶ ಸಮೇತ ಪ್ರಧಾನಿಯವರಿಗೆ ವಿವರಿಸಿದರು. ವಿವಿಧ ಯೋಜನೆಗಳಲ್ಲಿ ರಾಜ್ಯಕ್ಕೆ ನೀಡುತ್ತಿರುವ ಕೇಂದ್ರದ ಪಾಲಿನ ಅನುದಾನವೂ ಕಡಿಮೆಯಾಗಿರುವ ಸಂಗತಿಯನ್ನು ಅವರು ಗಮನಕ್ಕೆ ತಂದರು.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸೇರಿದಂತೆ ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳ ಅನುದಾನ ಮೊತ್ತದಲ್ಲಿ ಗಣನೀಯವಾಗಿ ಕಡಿಮೆ ಮಾಡಲಾಗಿದೆ. ಇದರಿಂದ ರಾಜ್ಯಕ್ಕೆ ತೊಂದರೆಯಾಗಿದೆ. ಈ ಕಾರಣದಿಂದ ಆಗಿರುವ ಕೊರತೆ ನೀಗಿಸಲು ಪರಿಹಾರವಾಗಿ 118.62 ಕೋಟಿ ರೂ.ಹೆಚ್ಚುವರಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಉಂಟಾಗಿರುವ ಹಿಂಗಾರು ಬೆಳೆ ನಷ್ಟಕ್ಕೆ 3,310 ಕೋ.ರೂ. ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ ಅವರು, ಇಷ್ಟೆಲ್ಲ ಸಮಸ್ಯೆಗಳಿದ್ದರೂ ರಾಜ್ಯದಲ್ಲಿ ಅನ್ವೇಷಣಾತ್ಮಕ ರೀತಿಯಲ್ಲಿ ಬರ ಪರಿಹಾರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನಮ್ಮ ಸರಕಾರ ಕಾರ್ಯೋನ್ಮುಖವಾಗಿದೆ. ಇದಕ್ಕೆ ಸೂಕ್ತ ನಿದರ್ಶನ ಎಂದರೆ ಪರಿಹಾರ ತಂತ್ರಾಂಶ ಬಳಸಿ 16 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಇನ್‌ಪುಟ್ ಸಬ್ಸಿಡಿ ವಿತರಿಸಲಾಗಿದೆ. ಈ ಮೂಲಕ ಬೆಳೆ ನಷ್ಟ ಪರಿಹಾರ ಸರಿದೂಗಿಸಲು ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.

ಕುಶಲ ನೀತಿ ಜಾರಿ: ರಾಜ್ಯವು ಕರ್ನಾಟಕ ಕುಶಲ ನೀತಿ-2017 ಜಾರಿಗೊಳಿಸಲು ಅಂತಿಮ ಸಿದ್ಧತೆಯಲ್ಲಿದೆ. ಇದಕ್ಕಾಗಿ ಪ್ರತ್ಯೇಕ ವಿಭಾಗ ರಚಿಸಲಾಗಿದ್ದು, ಕುಶಲ ಕರ್ಮಿಗಳಿಗೆ ಅನುಕೂಲ ಕಲ್ಪಿಸಲು ಕೈಗಾರಿಕೆ ತರಬೇತಿಗೆ ಭದ್ರ ಬುನಾದಿ ಹಾಕಲಾಗಿದೆ. ಮೂರು ವರ್ಷಗಳಲ್ಲಿ 2.21 ಲಕ್ಷ ವಿದ್ಯಾರ್ಥಿಗಳು ಸೇರಿದಂತೆ 3.7ಲಕ್ಷ ವ್ಯಕ್ತಿಗಳಿಗೆ ತರಬೇತಿ ನೀಡಲಾಗಿದೆ. ಅಲ್ಲದೆ, ನೂರು ಹೊಸ ಕೈಗಾರಿಕೆ ತರಬೇತಿ ಸಂಸ್ಥೆಗಳನ್ನು ಸಹ ಸ್ಥಾಪಿಸಲಾಗಿದೆ ಎಂದು ಸಿದ್ದರಾಮಯ್ಯ ಸಭೆಗೆ ವಿವರಿಸಿದರು

ಸ್ವಚ್ಛ ಭಾರತ ಅಭಿಯಾನದ ಉದ್ದೇಶಗಳನ್ನು ಈಡೇರಿಸಲು ಕರ್ನಾಟಕ ಸೂಕ್ತ ಗಮನ ಹರಿಸಿದೆ. ರಾಜ್ಯವನ್ನು ಬಹಿರ್ದೆಸೆ ಮುಕ್ತವಾಗಿಸಲು ಕ್ರಮ ಕೈಗೊಂಡಿದ್ದು, ನಾಲ್ಕು ವರ್ಷಗಳಲ್ಲಿ 30 ಲಕ್ಷ ಕುಟುಂಬ ಘಟಕಗಳಿಗೆ (ಮನೆಗಳು) ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X