Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ...

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ ಚೀನಾದ ತಿಕ್ಕಲು ನಡೆ : ಸ್ಥಳೀಯ ಮುಖಂಡರ ಖಂಡನೆ

ವಾರ್ತಾಭಾರತಿವಾರ್ತಾಭಾರತಿ23 April 2017 10:20 PM IST
share
ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ ಚೀನಾದ ತಿಕ್ಕಲು ನಡೆ : ಸ್ಥಳೀಯ ಮುಖಂಡರ ಖಂಡನೆ

ಹೊಸದಿಲ್ಲಿ, ಎ.23: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಿಗೆ ಚೀನಾವು ಮರುನಾಮಕರಣ ಮಾಡಿರುವುದನ್ನು ಅರುಣಾಚಲ ಪ್ರದೇಶದ ಮುಖಂಡರು ಹಾಗೂ ಸ್ಥಳೀಯರು ವ್ಯಾಪಕವಾಗಿ ಖಂಡಿಸಿದ್ದಾರೆ. ಇದು ಚೀನಾದ ತಿಕ್ಕಲು ನಡೆಗೆ ಒಂದು ದೃಷ್ಟಾಂತ ಎಂದು ಅರುಣಾಚಲ ಪ್ರದೇಶದ ಮುಖಂಡರು ಪಕ್ಷಬೇಧ ಮರೆತು ಟೀಕಿಸಿದ್ದಾರೆ.

ಬೀಜಿಂಗನ್ನು ಮುಂಬೈ ಎಂದು ನಾಮಕರಣ ಮಾಡಿದರೆ ಅದು ಭಾರತದ ಪ್ರದೇಶವಾಗುತ್ತದೆಯೇ ಎಂದು ಅರುಣಾಚಲ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಅಧ್ಯಕ್ಷ ಟೆಚಿ ಲಲ ಪ್ರಶ್ನಿಸಿದ್ದಾರೆ.

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಸಾಧಿಸುವ ಚೀನಾದ ಪ್ರಯತ್ನ ಆಧಾರರಹಿತವಾಗಿದೆ ಎಂದು ಅರುಣಾಚಲ ಪ್ರದೇಶ ಬಿಜೆಪಿ ಅಧ್ಯಕ್ಷ ತಾಪಿರ್ ಗವೊ ತಿಳಿಸಿದ್ದಾರೆ. ಚೀನಾವು 1959ರಲ್ಲಿ ಬಲಾತ್ಕಾರವಾಗಿ ಟಿಬೆಟನ್ನು ಆಕ್ರಮಿಸಿಕೊಂಡಿದ್ದು ಈಗ ಅರುಣಾಚಲ ಪ್ರದೇಶವನ್ನು ಆಕ್ರಮಿಸಿಕೊಳ್ಳಲು ಬಯಸಿದೆ . ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಟಿಬೆಟ್‌ನ ಧಾರ್ಮಿಕ ಗುರು ದಲಾಯಿ ಲಾಮಾ ಈಗಾಗಲೇ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿದ್ದಾರೆ .ಚೀನಾವು ಇತಿಹಾಸದಿಂದ ಪಾಠ ಕಲಿಯಲಿ ಮತ್ತು ತಾನು ಟಿಬೆಟನ್ನು ಬಲಾತ್ಕಾರವಾಗಿ ಆಕ್ರಮಿಸಿಕೊಂಡಿದ್ದೇನೆ ಎಂಬುದನ್ನು ಅರಿತುಕೊಳ್ಳಬೇಕು ಎಂದವರು ಹೇಳಿದ್ದಾರೆ.

ಭಾರತವು ಚೀನಾದೊಂದಿಗೆ ಯಾವುದೇ ಗಡಿ ವ್ಯಾಪ್ತಿ ಹೊಂದಿಲ್ಲ. ಆದರೆ ಟಿಬೆಟ್‌ನೊಂದಿಗೆ ಹೊಂದಿದೆ. ಗಡಿ ವ್ಯಾಪ್ತಿಗೆ ಸಂಬಂಧಿಸಿ 1914ರಲ್ಲಿ ಮೆಕ್‌ಮೋಹನ್ ಶಿಮ್ಲಾದಲ್ಲಿ ಚೀನಾದ ಪ್ರತಿನಿಧಿಯೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದರು ಎಂದು ತಾಪಿರ್ ಹೇಳಿದರು.

ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅರುಣಾಚಲ ಪ್ರದೇಶದ ಪ್ರಧಾನ ಕಾರ್ಯದರ್ಶಿ ಶಕುಂತಳಾ ದೋಲೆ ಗಾಮ್ಲಿನ್ ನಿರಾಕರಿಸಿದ್ದಾರೆ. ಈ ವಿಷಯವನ್ನು ವಿದೇಶ ವ್ಯವಹಾರ ಇಲಾಖೆ ನಿಭಾಯಿಸುತ್ತಿದ್ದು ನಮಗೇನೂ ಹೇಳಲಿಕ್ಕಿಲ್ಲ ಎಂದವರು ತಿಳಿಸಿದ್ದಾರೆ.

ಚೀನಾದ ನಡೆಯನ್ನು ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ನಬಾಮ್ ಟುಕಿ ಖಂಡಿಸಿದ್ದಾರೆ. ಇದೊಂದು ವಿವೇಚನಾರಹಿತ ನಡೆ. ಅರುಣಾಚಲ ಪ್ರದೇಶವು ಭಾರತದ ಅಖಂಡ ಭಾಗ ಎಂಬುದು ಎಲ್ಲರಿಗೂ ತಿಳಿದಿದೆ. ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದವರು ಹೇಳಿದ್ದಾರೆ.

ಚೀನಾದ ಕ್ರಮಕ್ಕೆ ಪ್ರತಿರೋಧ ಸೂಚಿಸಿರುವ ಭಾರತ, ನೆರೆಯ ರಾಷ್ಟ್ರದ ನಗರಗಳಿಗೆ ಹೊಸ ಹೆಸರುಗಳನ್ನು ಅನ್ವೇಷಿಸಿ ನಾಮಕರಣ ಮಾಡಿದಾಕ್ಷಣ ಆ ಪಟ್ಟಣಗಳು ತನಗೆ ಸೇರಬೇಕೆಂಬ ಅಕ್ರಮ ಹೇಳಿಕೆ ಸಕ್ರಮಗೊಳ್ಳುತ್ತವೆ ಎಂದು ಭಾವಿಸಬಾರದು ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X