Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಸ್ಲಿಂ ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ...

ಮುಸ್ಲಿಂ ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಅಸ್ತ್ರ

ವಾರ್ತಾಭಾರತಿವಾರ್ತಾಭಾರತಿ24 April 2017 9:39 AM IST
share
ಮುಸ್ಲಿಂ ಮಹಿಳಾ ಸಬಲೀಕರಣಕ್ಕೆ ಶಿಕ್ಷಣವೇ ಅಸ್ತ್ರ

ಮುಂಬೈ, ಎ.24: ತಲಾಖ್, ಬುರ್ಖಾದಂಥ ವಿಷಯಗಳ ಬಗ್ಗೆ ಎಲ್ಲೆಡೆ ವಾದ ವಿವಾದಗಳು ಕೇಳಿಬರುತ್ತಿದ್ದರೆ, ಎಲ್ಲ ಸಾಮಾಜಿಕ ಅಡೆತಡೆಗಳನ್ನೂ ಮೀರಿ, ಮುಸ್ಲಿಂ ಮಹಿಳೆಯರು ಶಿಕ್ಷಣವನ್ನು ಅಸ್ತ್ರವಾಗಿ ಬಳಸಿಕೊಂಡು, ಸಾಮಾಜಿಕ ಸ್ಥಾನಮಾನ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಲವೆಡೆ ಕುಟುಂಬದ ಯಜಮಾನಿಯರಾಗಿಯೂ ಯಶಸ್ವಿಯಾಗಿ ಸಂಸಾರ ನಿರ್ವಹಿಸುವ ಮೂಲಕ ಮೌನಕ್ರಾಂತಿಗೆ ಕಾರಣರಾಗಿದ್ದಾರೆ.

ಮುಂಬೈನ ಅರೀಬಾ ಇಮ್ತಿಯಾಝ್ ಅವರ ಉದಾಹರಣೆ ನೋಡಿ. ಇಮ್ತಿಯಾಝ್ ಹಾಗೂ ಸಫಿಯಾ ಶೇಖ್ ಅವರ ಕಿರಿಯ ಮಗಳಾದ ಇವರು ಕಸಾಯಿಬಾಡಾ ಎಂಬ ಕಟುಕರ ಕಾಲನಿಯಲ್ಲಿ ಬೆಳೆದವರು. ಆದರೆ ಶಿಕ್ಷಣದ ಬಗೆಗಿನ ಅದಮ್ಯ ಆಸಕ್ತಿಯಿಂದಾಗಿ ಇಂದು ದಂತವೈದ್ಯೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಬಳಿಕ ಎದುರಾದ ಬೆದರಿಕೆಯಿಂದಾಗಿ ತಂದೆತಾಯಿ, ಕುರ್ಲಾದ ನೆಹರೂ ನಗರದಿಂದ ವಲಸೆ ಬರಬೇಕಾಯಿತು. ಎಲ್ಲ ಅಡೆತಡೆಗಳ ನಡುವೆಯೂ ಶಿಕ್ಷಣ ಪೂರೈಸಿ ವೃತ್ತಿ ಮಾಡುತ್ತಿರುವ ಅರೀಬಾ (24) ವಿವಾಹಕ್ಕೆ ಮುನ್ನ ನಾಗರಿಕ ಸೇವಾ ಪರೀಕ್ಷೆ ಉತ್ತೀಣರಾಗುವ ಕನಸು ಕಾಣುತ್ತಿದ್ದಾರೆ. ಹೀಗೆ ಶಿಕ್ಷಣವನ್ನು ಸಬಲೀಕರಣದ ಅಸ್ತ್ರವಾಗಿ ಮಾಡಿಕೊಂಡ ಲಕ್ಷಾಂತರ ಮುಸ್ಲಿಂ ಹೆಣ್ಣುಮಕ್ಕಳ ಪೈಕಿ ಇದೊಂದು ಉದಾಹರಣೆ ಮಾತ್ರ.

2011ರ ಜನಗಣತಿ ಅಂಕಿ ಅಂಶಗಳ ಪ್ರಕಾರ, ಕಳೆದ ಒಂದು ದಶಕದಲ್ಲಿ ಪದವೀಧರ ಮುಸ್ಲಿಂ ಹೆಣ್ಣುಮಕ್ಕಳ ಸಂಖ್ಯೆ ಶೇಕಡ 168ರಷ್ಟು ಹೆಚ್ಚಿದೆ. ಪದವೀಧರ ಹೆಣ್ಣುಮಕ್ಕಳ ಏರಿಕೆ ರಾಷ್ಟ್ರಮಟ್ಟದಲ್ಲಿ ಶೇಕಡ 115 ಇದ್ದು, ಅದನ್ನೂ ಮೀರಿಸುವ ಸಾಧನೆ ಮುಸ್ಲಿಂ ಹೆಣ್ಣುಮಕ್ಕಳಿಂದ ಆಗಿದೆ. 2001ರಲ್ಲಿ ದೇಶದಲ್ಲಿ 6.58 ಲಕ್ಷ ಪದವೀಧರ ಮುಸ್ಲಿಂ ಹೆಣ್ಣುಮಕ್ಕಳಿದ್ದರೆ, 2011ರಲ್ಲಿ ಇದು 17.42 ಲಕ್ಷಕ್ಕೆ ಹೆಚ್ಚಿದೆ.

ಮುಸ್ಲಿಂ ಸಮುದಾಯದಲ್ಲಿ ಹಲವು ಪ್ರಕರಣಗಳಲ್ಲಿ ಗಂಡುಮಕ್ಕಳು ಅರ್ಧದಲ್ಲಿ ಶಿಕ್ಷಣ ತೊರೆದು ಉದ್ಯೋಗ ಸೇರಿದರೆ, ಹೆಣ್ಣುಮಕ್ಕಳ ಶಿಕ್ಷಣ ಪೂರ್ಣಗೊಳಿಸಲು ಕುಟುಂಬಗಳು ಆದ್ಯತೆ ನೀಡುತ್ತಿವೆ ಎಂದು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ ಉಪನಿರ್ದೇಶಕ ಡಾ.ಅಬ್ದುಲ್ ಶಬಾನ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X