Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನಕನಕಿಂಡಿ ಅಸಮಾನತೆಯ ಪ್ರತೀಕ:...

ಕನಕನಕಿಂಡಿ ಅಸಮಾನತೆಯ ಪ್ರತೀಕ: ಡಾ.ಮಹಾಬಲೇಶ್ವರ ರಾವ್

ವಾರ್ತಾಭಾರತಿವಾರ್ತಾಭಾರತಿ24 April 2017 6:49 PM IST
share
ಕನಕನಕಿಂಡಿ ಅಸಮಾನತೆಯ ಪ್ರತೀಕ: ಡಾ.ಮಹಾಬಲೇಶ್ವರ ರಾವ್

ಉಡುಪಿ, ಎ.24: ಕನಕದಾಸರ ಭಕ್ತಿಗೆ ಮೆಚ್ಚಿ ಶ್ರೀಕೃಷ್ಣನ ತಿರುಗಿ ದರ್ಶನ ನೀಡಿದ ಕನಕನ ಕಿಂಡಿಯನ್ನು ಅಸಮಾನತೆಯ ಕ್ರೌರ್ಯ ಹಾಗೂ ಪ್ರತೀಕವಾಗಿ ಕಾಣಬಹುದು. ಈಗಲೂ ಕೂಡ ಅಸ್ಪೃಶ್ಯರು ಹಾಗೂ ಕೆಳ ಜಾತಿಯವರಿಗೆ ದೇವಸ್ಥಾನಗಳಿಗೆ ಪ್ರವೇಶ ನೀಡುತ್ತಿಲ್ಲ ಎಂದು ಉಡುಪಿ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಮಹಾಬಲೇಶ್ವರ ರಾವ್ ಹೇಳಿದ್ದಾರೆ.

ಉಡುಪಿ ಕನಕ ಅಧ್ಯಯನ ಪೀಠ, ಮಣಿಪಾಲ ವಿಶ್ವವಿದ್ಯಾಲಯ ಮತ್ತು ಪರ್ಕಳ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಧ್ವನ್ಯಾಲೋಕ ಸಭಾಂಗಣ ದಲ್ಲಿ ಆಯೋಜಿಸಲಾದ ಏಳು ದಿನಗಳ ಕನಕದಾಸ ಕೀರ್ತನ ಮತ್ತು ಸಂಗೀತ ರಸಗ್ರಹಣ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕನಕದಾಸರ ಭಕ್ತಿಗೆ ಒಲಿದ ಶ್ರೀಕೃಷ್ಣ ತಿರುಗಿ ದರ್ಶನ ನೀಡಿದ ಹಾಗೂ ಕನಕನ ಕಿಂಡಿ ಸೃಷ್ಠಿಯಾಯಿತು ಎಂಬ ಹಲವು ಐತಿಹ್ಯಗಳಿವೆ. ಅದೇ ರೀತಿ ಮಧ್ವಾ ಚಾರ್ಯರು ಕೃಷ್ಣನ ಮೂರ್ತಿಯನ್ನು ಪೂರ್ವಾಭಿಮುಖದ ಬದಲು ಪಶ್ಚಿಮಾಭಿ ಮುಖವಾಗಿಯೇ ಸ್ಥಾಪಿಸಿದ್ದರು ಎಂಬ ಚರ್ಚೆಗಳು ಕೂಡ ನಡೆದಿವೆ. ಆದರೆ ಕನಕನ ಕಿಂಡಿ ಹೇಗೆ ಸೃಷ್ಟಿಯಾಯಿತು ಎಂಬುದಕ್ಕೆ ಕೃಷ್ಣ ಮಠದ ಇತಿಹಾಸ, ಶಾಸನ ಅಥವಾ ಕನಕದಾಸರ ಕೃತಿಗಳಲ್ಲಿ ಉಲ್ಲೇಖವಿಲ್ಲ. ಆದುದರಿಂದ ಇದು ಹೆಚ್ಚು ಹೆಚ್ಚು ಜನರ ಬರುವಂತೆ ಮಾಡಿರುವ ಕಟ್ಟುಕಥೆಯೂ ಆಗಿರಬಹುದು ಎಂದರು.

ನಮ್ಮಲ್ಲಿರುವ 250 ದಾಸರ ಪೈಕಿ ಕನಕದಾಸರು ಒಬ್ಬರೇ ಶೂದ್ರ ದಾಸರು. ಅವರು 315 ಕೀರ್ತನೆಗಳನ್ನು ರಚಿಸಿದ್ದಾರೆ. ಅವರು ದಾಸರು ಮಾತ್ರವಲ್ಲ ಕನ್ನಡದ ಶ್ರೇಷ್ಠ ಕವಿಯಾಗಿದ್ದರು. ಅವರ ಕಾವ್ಯವನ್ನು ನಾವು ಸರಿಯಾಗಿ ತಿಳಿದು ಕೊಳ್ಳಬೇಕಾಗಿದೆ. ಇಂದಿನ ಕಾಲಘಟ್ಟದಲ್ಲಿ ಸಂಶೋಧನೆಗಳನ್ನು ಹೊಸ ದೃಷ್ಠಿಯಿಂದ ನೋಡಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಿರಿಯ ಕಲಾ ವಿಮರ್ಶಕ ಎ.ಈಶ್ವರಯ್ಯ ಮಾತನಾಡಿ, ದೇವರ ನಾಮಗಳ ದಾಖಲೀಕರಣ ಮತ್ತು ರಾಗ ಸಂಯೋಜನೆ ನೀಡುವ ಕೆಲಸ ಆಗಬೇಕಾಗಿದೆ. ಈ ಮೂಲಕ ನಮ್ಮ ಪರಂಪರೆಯ ಸಂಪತ್ತನ್ನು ಉಳಿಸಲು ಸಾಧ್ಯವಾಗುತ್ತದೆ. ಸಂಗೀತ ಮತ್ತು ಸಾಹಿತ್ಯವು ಭಿನ್ನವಾದುದು. ಒಂದಕ್ಕೊಂದು ಸಂಬಂಧವೇ ಇಲ್ಲ. ಕೇವಲ ನಾದದಿಂದಲೇ ಅಸ್ತಿತ್ವ ಸ್ಥಾಪಿಸುವ ಶಕ್ತಿ ಸಂಗೀತಕ್ಕೆ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ವೃಂದಾ ಆಚಾರ್ಯ ಬೆಂಗಳೂರು ಹಾಗೂ ಅರವಿಂದ ಹೆಬ್ಬಾರ್, ಕನಕ ಅಧ್ಯಯನ ಪೀಠದ ಸಹ ಸಂಯೋಜನಾಧಿ ಕಾರಿ ಡಾ.ಅಶೋಕ್ ಅಳ್ವ ಉಪಸ್ಥಿತರಿದ್ದರು.

ಪೀಠದ ಸಂಯೋಜನಾಧಿಕಾರಿ ಡಾ.ವರದೇಶ ಹಿರೇಗಂಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರಿಗಮ ಭಾರತಿಯ ನಿರ್ದೇಶಕ ಡಾ.ಉದಯ ಶಂಕರ್ ಸ್ವಾಗತಿಸಿದರು. ನಿರ್ದೇಶಕಿ ಉಮಾಶಂಕರಿ ವಂದಿಸಿದರು. ಉಪನ್ಯಾಸಕಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X