Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚಾಂಪಿಯನ್ಸ್ ಟ್ರೋಫಿ: ನ್ಯೂಝಿಲೆಂಡ್,...

ಚಾಂಪಿಯನ್ಸ್ ಟ್ರೋಫಿ: ನ್ಯೂಝಿಲೆಂಡ್, ಶ್ರೀಲಂಕಾ ತಂಡ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ24 April 2017 11:04 PM IST
share
ಚಾಂಪಿಯನ್ಸ್ ಟ್ರೋಫಿ: ನ್ಯೂಝಿಲೆಂಡ್, ಶ್ರೀಲಂಕಾ ತಂಡ ಪ್ರಕಟ

ಹೊಸದಿಲ್ಲಿ, ಎ.24: ಇಂಗ್ಲೆಂಡ್‌ನಲ್ಲಿ ಜೂನ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ನ್ಯೂಝಿಲೆಂಡ್ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳನ್ನು ಸೋಮವಾರ ಪ್ರಕಟಿಸಲಾಗಿದೆ.

 ನ್ಯೂಝಿಲೆಂಡ್ ತಂಡಕ್ಕೆ ಆಡಮ್ ಮಿಲ್ನೆ ಹಾಗೂ ಮಿಚೆಲ್ ಮೆಕ್ಲಿನಘನ್ ವಾಪಸಾಗಿದ್ದಾರೆ. ಮೆಕ್ಲಿನಘನ್ ಇತ್ತೀಚೆಗೆ ಜನವರಿಯಲ್ಲಿ ನ್ಯೂಝಿಲೆಂಡ್ ಪರ ಆಡಿದ್ದರು. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದು, ಒಟ್ಟು 12 ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ 50 ವಿಕೆಟ್‌ಗಳನ್ನು ಪೂರೈಸಿದ್ದ ಮೆಕ್ಲಿನಘನ್ ಈತನಕ ಒಟ್ಟು 82 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

 ಕಳೆದ 7 ವರ್ಷಗಳಿಂದ ನ್ಯೂಝಿಲೆಂಡ್‌ನ ಪರ ಆಡುತ್ತಿರುವ 25ರ ಹರೆಯದ ಮಿಲ್ನೆ ಗಾಯದ ಸಮಸ್ಯೆಯಿಂದಾಗಿ ಕೇವಲ 51 ಪಂದ್ಯಗಳನ್ನು ಆಡಿದ್ದರು. ನ್ಯೂಝಿಲೆಂಡ್ ಜೂ.2 ರಂದು ಆಸ್ಟ್ರೇಲಿಯ ವಿರುದ್ಧ ಆಡುವ ಮೂಲಕ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಮ್ಯಾಥ್ಯೂಸ್, ಮಾಲಿಂಗ ವಾಪಸ್: ಫಿಟ್‌ನೆಸ್ ಪಡೆದಿರುವ ಆ್ಯಂಜೆಲೊ ಮ್ಯಾಥ್ಯೂಸ್ ಹಾಗೂ ಲಸಿತ ಮಾಲಿಂಗ ಚಾಂಪಿಯನ್ಸ್ ಟ್ರೋಫಿಗೆ ಶ್ರೀಲಂಕಾ ಘೋಷಿಸಿರುವ 15 ಸದಸ್ಯರ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಮ್ಯಾಥ್ಯೂಸ್ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕ, ಆಸ್ಟ್ರೇಲಿಯ ಹಾಗೂ ಬಾಂಗ್ಲಾದೇಶ ವಿರುದ್ಧ ವಿರುದ್ಧ ಏಕದಿನ ಸರಣಿಯಿಂದ ವಂಚಿತರಾಗಿದ್ದರು. ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ನಲ್ಲಿ ಡೆಲ್ಲಿ ಫ್ರಾಂಚೈಸಿ ಪರ ಆಡುತ್ತಿದ್ದಾರೆ.

ಮಂಡಿನೋವಿನಿಂದಾಗಿ ಕಳೆದ ವರ್ಷ ಭಾರತದಲ್ಲಿ ನಡೆದಿದ್ದ ವಿಶ್ವ ಟ್ವೆಂಟಿ-20 ಚಾಂಪಿಯನ್‌ಶಿಪ್‌ನಿಂದ ದೂರ ಉಳಿದಿದ್ದ ಮಾಲಿಂಗ ಇದೀಗ ಸ್ಪರ್ಧಾತ್ಮಕ ಟೂರ್ನಿಗೆ ಮರಳಿದ್ದಾರೆ. 2011ರಲ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಮಾಲಿಂಗ 2015ರಲ್ಲಿ ಏಕದಿನ ಪಂದ್ಯವನ್ನು ಆಡಿದ್ದರು. ಈ ವರ್ಷಾರಂಭದಲ್ಲಿ ಆಸ್ಟ್ರೇಲಿಯ ವಿರುದ್ಧ ಟ್ವೆಂಟಿ-20 ಪಂದ್ಯಗಳನ್ನು ಆಡುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸಾಗಿದ್ದರು.

ಶ್ರೀಲಂಕಾ ತಂಡ ದಿಲ್‌ರುವಾನ್ ಪೆರೇರ ಹಾಗೂ ಧನುಶ್ಕಾ ಗುಣತಿಲಕ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ನ್ಯೂಝಿಲೆಂಡ್ ತಂಡ: ಕೇನ್ ವಿಲಿಯಮ್ಸನ್(ನಾಯಕ), ಮಾರ್ಟಿನ್ ಗಪ್ಟಿಲ್, ಟಾಮ್ ಲಥಾಮ್, ಲೂಕ್ ರಾಂಚಿ, ರಾಸ್ ಟೇಲರ್, ನೀಲ್ ಬ್ರೂಮ್, ಜಿಮ್ಮಿ ನೀಶಾಮ್, ಕೋರಿ ಆ್ಯಂಡರ್ಸನ್, ಮಿಚೆಲ್ ಸ್ಯಾಂಟ್ನರ್, ಕಾಲಿನ್ ಡಿ ಗ್ರಾಂಡ್‌ಹೊಮ್, ಜೀತನ್ ಪಟೇಲ್, ಟಿಮ್ ಸೌಥಿ, ಆಡಮ್ ಮಿಲ್ನೆ, ಮಿಚೆಲ್ ಮೆಕ್ಲಿನಘನ್, ಟ್ರೆಂಟ್ ಬೌಲ್ಟ್.

ಶ್ರೀಲಂಕಾ ತಂಡ: ಆ್ಯಂಜೆಲೊ ಮ್ಯಾಥ್ಯೂಸ್(ನಾಯಕ), ಉಪುಲ್ ತರಂಗ, ನಿರೊಶನ್ ಡಿಕ್‌ವೆಲ್ಲಾ, ಕುಶಾಲ್ ಪೆರೇರ, ಕುಶಾಲ್ ಮೆಂಡಿಸ್, ಚಾಮರ ಕಪುಗಡೆರ, ಅಸೆಲಾ ಗುಣರತ್ನೆ, ದಿನೇಶ್ ಚಾಂಡಿಮಲ್, ಲಸಿತ್ ಮಾಲಿಂಗ, ಸುರಂಗ ಲಕ್ಮಲ್, ನುವಾನ್ ಪ್ರದೀಪ್, ನುವಾನ್ ಕುಲಶೇಖರ, ತಿಸಾರ ಪೆರೇರ, ಲಕ್ಷಣ್ ಸಡಕನ್, ಸೀಕುಗೆ ಪ್ರಸನ್ನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X