Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಿಎಂಗಳಿಗೆ ಮೋದಿಯ ಐದು ಗಂಟೆಗಳ...

ಬಿಜೆಪಿ ಸಿಎಂಗಳಿಗೆ ಮೋದಿಯ ಐದು ಗಂಟೆಗಳ ಪರೀಕ್ಷೆ!

ವಾರ್ತಾಭಾರತಿವಾರ್ತಾಭಾರತಿ24 April 2017 11:34 PM IST
share

ಹೊಸದಿಲ್ಲಿ, ಎ.24: ರವಿವಾರ ರಾಜಧಾನಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಆಡಳಿತವಿರುವ 13 ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ 12 ಅಂಶಗಳ ಐದು ಗಂಟೆಗಳ ಅವಧಿಯ ಪರೀಕ್ಷೆಯನ್ನು ಮುಖ್ಯಮಂತ್ರಿಗಳಿಗೆ ನೀಡಿದರು. ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನೂ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹಾಗೂ ಪಕ್ಷ ಹಾಗೂ ಸರಕಾರಗಳ ನಡುವೆ ಇನ್ನೂ ಉತ್ತಮ ಹೊಂದಾಣಿಕೆ ಮೂಡಿಸುವುದೇ ಪ್ರಧಾನಿಯ ಉದ್ದೇಶವಾಗಿತ್ತು.

ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಮುಖ್ಯಮಂತ್ರಿಗಳು ತಲಾ 15 ನಿಮಿಷ ಅವಧಿಯ ಪ್ರೆಸೆಂಟೇಶನ್ ಮಾಡಿದರಲ್ಲದೆ ಪ್ರಧಾನಿ ಎತ್ತಿದ ಎಲ್ಲಾ 12 ಪ್ರಶ್ನೆಗಳಿಗೂ ತಂತಮ್ಮ ಉತ್ತರ ನೀಡಿದರು.
ಮೂರು ರಾಜ್ಯಗಳ ಉಪಮುಖ್ಯಮಂತ್ರಿಗಳೂ ಭಾಗವಹಿಸಿದ್ದ ಈ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ವೆಂಕಯ್ಯ ನಾಯ್ಡು ಹಾಗೂ ನಿತಿನ್ ಗಡ್ಕರಿ ಕೂಡ ಹಾಜರಿದ್ದರು.
ತಮ್ಮ ರಾಜ್ಯಗಳಲ್ಲಿ ನಡೆಸಲಾದ ಅಭಿವೃದ್ಧಿ ಕಾರ್ಯಗಳು, ಪಕ್ಷ ಮತ್ತು ಸರಕಾರದೊಡನೆ ಸಹಕಾರಕ್ಕೆ ಕೈಗೊಳ್ಳಲಾದ ಕ್ರಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯತೆ, ಡಿಜಿಟಲ್ ಕಾರ್ಯಕ್ರಮಗಳಿಗೆ ಉತ್ತೇಜನ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿತ್ತು.
ಇಂತಹುದೇ ಒಂದು ಕಾರ್ಯಕ್ರಮವನ್ನು ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆಸಲಾಗಿದ್ದಾಗ ಮುಖ್ಯಮಂತ್ರಿಗಳಿಗೆ ಕೆಲವೊಂದು ಗುರಿಗಳನ್ನು ನಿಗದಿಪಡಿಸಲಾಗಿತ್ತು. ಈ ಗುರಿಗಳನ್ನು ತಲುಪಲಾಗಿದೆಯೇ ಎಂಬುದನ್ನು ರವಿವಾರದ ಸಭೆಯಲ್ಲಿ ಪರಾಮರ್ಶಿಸಲಾಯಿತು.
ಈ ಭೋಜನ ಸಭೆಯು ರಾತ್ರಿ ಏಳು ಗಂಟೆಗೆ ಆರಂಭವಾದರೆ ಸುಮಾರು ಐದು ಗಂಟೆಗಳ ಕಾಲ ನಡೆಯಿತು. ಮೋದಿ ಸರಕಾರ ಮೂರನೆ ವಾರ್ಷಿಕೋತ್ಸವವನ್ನು ಆಚರಿಸುವ ಒಂದು ತಿಂಗಳ ಮೊದಲು ಆಯೋಜಿಸಲಾದ ಈ ಸಭೆಯು 2019ರಲ್ಲಿ ಜರಗುವ ಲೋಕಸಭಾ ಚುನಾವಣೆಗೆ ಒಂದು ಪೂರ್ವತಯಾರಿಯೆಂದೇ ತಿಳಿಯಲಾಗಿದೆ.
ರಾಜ್ಯ ಸರಕಾರಗಳು ಸಚಿವರಿಗೆ ಅವರ ಇಲಾಖೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಲಾಗಿದೆಯೇ ಎಂದು ಮೋದಿ ಸಭೆಯಲ್ಲಿ ಪ್ರಶ್ನಿಸಿದ್ದರೆನ್ನಲಾಗಿದೆ.
ಪಕ್ಷ ಸಂಘಟನೆಯ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕೆ ಲೋಕ್ ದರ್ಬಾರ್‌ಗಳನ್ನು ನಡೆಸಿರುವ ಬಗ್ಗೆಯೂ ಮುಖ್ಯಮಂತ್ರಿಗಳು ಪ್ರಧಾನಿಗೆ ಮಾಹಿತಿ ನೀಡಿದರು.
ಬಾಕಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ಮೋದಿ ಸರಕಾರದ ಯೋಜನೆಯಾದ ಪ್ರಗತಿ ಹಾಗೂ ಸರಕಾರದ ಬಡವರ ಪರ ಕಾರ್ಯಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X