Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಧೀಶರ ನೇಮಕ: ಕೇಂದ್ರ- ಸುಪ್ರೀಂ...

ನ್ಯಾಯಾಧೀಶರ ನೇಮಕ: ಕೇಂದ್ರ- ಸುಪ್ರೀಂ ಹಗ್ಗಜಗ್ಗಾಟ

ವಾರ್ತಾಭಾರತಿವಾರ್ತಾಭಾರತಿ25 April 2017 9:24 AM IST
share
ನ್ಯಾಯಾಧೀಶರ ನೇಮಕ: ಕೇಂದ್ರ- ಸುಪ್ರೀಂ ಹಗ್ಗಜಗ್ಗಾಟ

ಹೊಸದಿಲ್ಲಿ, ಎ.25: ನ್ಯಾಯಾಧೀಶರ ನೇಮಕಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಲಾಜಿಯಂ ಮತ್ತು ಕೇಂದ್ರ ಸರಕಾರದ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಕೊಲಾಜಿಯಂ ಶಿಫಾರಸ್ಸು ಮಾಡಿದ್ದ 19 ಮಂದಿಯ ಹೆಸರನ್ನು ಕೇಂದ್ರ ಸರಕಾರ ಎರಡು ಬಾರಿ ತಿರಸ್ಕರಿಸಿದರೂ ಮತ್ತೆ ಅದೇ ಪಟ್ಟಿಯನ್ನು ಕೊಲಾಜಿಯಂ ಕೇಂದ್ರಕ್ಕೆ ನೀಡಿರುವುದು ಇತಿಹಾಸದಲ್ಲೇ ಪ್ರಥಮ.

ಕೆಲ ದಿನಗಳ ಹಿಂದೆ ಈ ಸಂಬಂಧ ಕೊಲಾಜಿಯಂ ನಿರ್ಧಾರವನ್ನು ಕೇಂದ್ರಕ್ಕೆ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ. ಇದೀಗ ಚೆಂಡು ಕೇಂದ್ರದ ಅಂಗಳದಲ್ಲಿದ್ದು, ಕೇಂದ್ರದ ನಡೆ ಕುತೂಹಲಕ್ಕೆ ಕಾರಣವಾಗಿದೆ. 

ಅಲಹಾಬಾದ್ ಹೈಕೋರ್ಟ್‌ಗೆ ಕೊಲಾಜಿಯಂ ಶಿಫಾರಸ್ಸು ಮಾಡಿದ್ದ 30 ಮಂದಿಯ ಹೆಸರಿನ ಪೈಕಿ ಇದೂ ಸೇರಿದೆ. ಸುಪ್ರೀಂಕೋರ್ಟ್‌ನ ಕ್ಲಿಯರೆನ್ಸ್ ಪಡೆದು 11 ಮಂದಿಯ ಹೆಸರನ್ನು ಅಂತಿಮಪಡಿಸಿದ ಕೇಂದ್ರ ಸರಕಾರ 19 ಹೆಸರುಗಳನ್ನು ವಾಪಸ್ ಕಳುಹಿಸಿತ್ತು. ಆದರೆ ಭಾರತದ ಮುಖ್ಯನ್ಯಾಯಮೂರ್ತಿ ತೀರ್ಥಸಿಂಗ್ ಠಾಕೂರ್ ನೇತೃತ್ವದ ಕೊಲಾಜಿಯಂ ತನ್ನ ನಿಲುವಿಗೆ ಬದ್ಧವಾಗಿತ್ತು. ಆದರೆ ಮೋದಿ ಸರಕಾರ ಪಟ್ಟು ಬಿಡದೇ ಎಲ್ಲ ಹೆಸರುಗಳನ್ನು ಮತ್ತೆ ಕೊಲಾಜಿಯಂಗೆ ವಾಪಸ್ ಕಳುಹಿಸಿತ್ತು. ಕೇಂದ್ರದ ಉದ್ಧಟತನ ವಿರುದ್ಧ ಸುಪ್ರೀಂಕೋರ್ಟ್ ಕೆಂಡ ಕಾರುವ ಮೂಲಕ ಸಂಘರ್ಷ ತಾರಕಕ್ಕೇರಿತ್ತು.

ಪ್ರಸ್ತುತ ಇರುವ ವಿಧಿವಿಧಾನಗಳ ಒಡಂಬಡಿಕೆ ಅನ್ವಯ, ಕೊಲಾಜಿಯಂ ತಾನು ಮಾಡಿರುವ ಶಿಫಾರಸ್ಸಿಗೆ ಬದ್ಧವಾಗಿದ್ದರೆ, ಅದನ್ನು ಅಂತಿಮಪಡಿಸುವುದು ಕೇಂದ್ರ ಸರಕಾರದ ಜವಾಬ್ದಾರಿಯಾಗಿದೆ. ಆದರೆ ಕೇಂದ್ರ ಸರಕಾರ 19 ಮಂದಿಯ ನೇಮಕಾತಿಗೆ ನಿರಾಕರಿಸಿತ್ತು. ಕೊಲಾಜಿಯಂ ಹಾಗೂ ಸಲಹಾ ನ್ಯಾಯಾಧೀಶರ ಅಭಿಪ್ರಾಯಗಳು ಪರಸ್ಪರ ವೈರುಧ್ಯದಿಂದ ಕೂಡಿದೆ ಎಂಬ ಕಾರಣಕ್ಕೆ ಕೇಂದ್ರ ಸರಕಾರ ಈ ನೇಮಕಾತಿಯನ್ನು ತಡೆದಿತ್ತು. ಹಲವು ಪ್ರಕರಣಗಳಲ್ಲಿ ಸಲಹಾ ನ್ಯಾಯಾಧೀಶರ ಅಭಿಪ್ರಾಯವನ್ನು ಕಡೆಗಣಿಸಿ, ಕೊಲಾಜಿಯಂ ನಿರ್ಧಾರ ಕೈಗೊಂಡಿರುವ ನಿದರ್ಶನಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X