Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಗೋರಕ್ಷಕರ ದಾಳಿ: 'ಮೇನಕಾ ಗಾಂಧಿ...

ದಿಲ್ಲಿ ಗೋರಕ್ಷಕರ ದಾಳಿ: 'ಮೇನಕಾ ಗಾಂಧಿ ಸೂಚನೆಯಂತೆ ನಾನೇ ತರಬೇತಿ ಕೊಟ್ಟಿದ್ದೆ' ಎಂದ ಸಂಘಟನೆಯ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ25 April 2017 11:37 AM IST
share
ದಿಲ್ಲಿ ಗೋರಕ್ಷಕರ ದಾಳಿ: ಮೇನಕಾ ಗಾಂಧಿ ಸೂಚನೆಯಂತೆ ನಾನೇ ತರಬೇತಿ ಕೊಟ್ಟಿದ್ದೆ ಎಂದ ಸಂಘಟನೆಯ ಮುಖ್ಯಸ್ಥ

ಹೊಸದಿಲ್ಲಿ, ಎ.25: ದಿಲ್ಲಿಯಲ್ಲಿ ಎಮ್ಮೆಗಳನ್ನು ಸಾಗಾಟ ಮಾಡುತ್ತಿದ್ದ ಮೂವರ ಮೇಲೆ ದಾಳಿ ನಡೆಸಿದ ಇಬ್ಬರಿಗೆ ತಾನು ತರಬೇತಿ ನೀಡಿದ್ದಾಗಿ ಹಾಗೂ ಇಂತಹ ತರಬೇತಿಗಳನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿಯವರ ನಿರ್ದೇಶನದಂತೆ 2005ರಿಂದ ನೀಡುತ್ತಿದ್ದುದಾಗಿ ಹರ್ಯಾಣಧ ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯ ಅಧ್ಯಕ್ಷ ನರೇಶ್ ಕದ್ಯನ್ ಹೇಳಿದ್ದಾರೆ.

‘‘ಆಗ ತರಬೇತಿ ನೀಡಲು ನನಗೆ ಮೇನಕಾ ಗಾಂಧಿ ಹೇಳಿದ್ದರು. ಈ ಸಂದರ್ಭ ನಾವು ಮುಂಗುಸಿಯ ಕೂದಲಿನಿಂದ ತಯಾರಿಸಲಾದ ಬ್ರಶ್ ಗಳನ್ನು ಸಾಗಾಟ ಮಾಡುತ್ತಿದ್ದ ಒಂದು ವಾಹನವನ್ನು ತಡೆದಿದ್ದೆವು. ಇಂತಹ ಸಂದರ್ಭಗಳಲ್ಲಿ ಮೊದಲು ಪೊಲಿಸರಿಗೆ ಕರೆ ಮಾಡಿ ಅವರು ತಮ್ಮ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ನಾನು ಕಾರ್ಯಕರ್ತರಲ್ಲಿ ಹೇಳಿದ್ದೆ,’’ ಎಂದು ನರೇಶ್ ಹೇಳಿದ್ದಾರೆ.

‘‘ಶನಿವಾರದ ದಾಳಿಯ ಆರೋಪಿಗಳಾಗಿರುವ ಸಹೋದರರಾದ ಗೌರವ್ ಗುಪ್ತಾ ಮತ್ತು ಸೌರಭ್ ಗುಪ್ತಾ ಅವರಿಗೂ ತರಬೇತಿ ನೀಡಲಾಗಿತ್ತು. ಆದರೆ ಈಗ ಈ ಜನರು ಪೀಪಲ್ ಫಾರ್ ಅನಿಮಲ್ಸ್ ಸಂಘಟನೆಯಲ್ಲಿ ಯಾವ ರೀತಿಯ ಕೆಲಸ ನಿರ್ವಹಿಸುತ್ತಿದ್ದಾರೆಂದು ತಿಳಿಯದು. ಈ ರೀತಿಯ ತರಬೇತಿಯನ್ನು ನಾನು ಅವರಿಗೆ ನೀಡಿಲ್ಲ,’’ ಎಂದು ಅವರು ಹೇಳಿದ್ದಾರೆ.

ಸಂಘಟನೆಯ ಫೇಸ್ ಬುಕ್ ಪುಟದ ಪ್ರಕಾರ ಅದರ ವೆಬ್ ಸೈಟ್ ಪೀಪಲ್‌ ಫಾರ್‌ ಅನಿಮಲ್ಸ್‌ ಇಂಡಿಯಾ ಡಾಟ್ ಆರ್ಗ್ ಶನಿವಾರದಿಂದ ಮುಚ್ಚಲಾಗಿದೆ ಹಾಗೂ ಪಿಎಫ್‌ಎ ದೇಶದ ಅತ್ಯಂತ ದೊಡ್ಡ ಪ್ರಾಣಿ ಕಲ್ಯಾಣ ಸಂಘಟನೆಯಾಗಿದ್ದು 26 ಆಸ್ಪತ್ರೆಗಳು, 165 ಘಟಕಗಳು ಹಾಗೂ 2.5 ಲಕ್ಷ ಸದಸ್ಯರನ್ನು ಹೊಂದಿದೆಯೆಂದು ಹೇಳಲಾಗಿದೆ.

ಸಂಘಟನೆಯ ಹಲವಾರು ಘಟಕಗಳ ವೆಬ್ ಸೈಟ್ ಗಳ ಪ್ರಕಾರ ಅವುಗಳನ್ನು "ಶ್ರೀಮತಿ ಮೇನಕಾ ಗಾಂಧಿಯವರ ಸಲಹೆಯಂತೆ’’ ಸ್ಥಾಪಿಸಲಾಗಿತ್ತು.
ಶನಿವಾರದ ಘಟನೆಯ ಸಂಬಂಧ ದಾಖಲಿಸಲಾಗಿರುವ ಎರಡು ಎಫ್ ಐಆರ್ ಪ್ರಕಾರ ಹಾಗೂ ಪಿಎಫ್‌ಎ ವೆಬ್ ಸೈಟ್ ಪ್ರಕಾರ ಸಂಘಟನೆಯ ವಿಳಾಸ 14, ಅಶೋಕ ರೋಡ್, ನವದೆಹಲಿ 11001 ಎಂದಾಗಿದ್ದು, ಇದು ಮೇನಕಾ ಗಾಂಧಿಯವರ ಅಧಿಕೃತ ನಿವಾಸವಾಗಿದೆ.

2013ರಲ್ಲಿ ಪಿಎಫ್‌ಎ ತನ್ನ ಫೇಸ್ ಬುಕ್ ಪುಟದಲ್ಲಿ ‘‘ಯು ಆಸ್ಕ್ ಶಿ ಆನ್ಸರ್ಸ್‌" ಎಂಬ ಸರಣಿ ನಡೆಸಿದ್ದು ಎಲ್ಲಾ ಉತ್ತರಗಳನ್ನು ಮೇನಕಾ ಗಾಂಧಿ ನೀಡಿದ್ದರು.
ಆದರೆ ಪಿಎಫ್‌ಎ ಸಂಘಟನೆಯಲ್ಲಿ ತಮ್ಮ ಪಾತ್ರದ ಬಗ್ಗೆ ಪ್ರತಿಕ್ರಿಯಿಸಲು ಮೇನಕಾ ಗಾಂಧಿ ನಿರಾಕರಿಸಿದ್ದಾರೆ.

ಸಂಘಟನೆಯ ಫೇಸ್ ಬುಕ್ ಪುಟಕ್ಕೆ 1,11,068 ಲೈಕ್ ಗಳು ಇದ್ದು, ಸಂಘಟನೆ ಅಸೌಖ್ಯದಿಂದಿರುವ ಹಾಗೂ ಸಂಕಷ್ಟದಲ್ಲಿರುವ ಪ್ರಾಣಿಗಳನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸುತ್ತದೆ ಎಂದು ಹೇಳಲಾಗಿದೆಯಾದರೂ ದಾಳಿ ನಡೆಸುವುದು ಕೂಡ ಸಂಘಟನೆಯ ಕಾರ್ಯಚಟುವಟಿಕೆಗಳಲ್ಲಿ ಒಂದಾಗಿದೆ ಎಂದು ಅದರ ಹಲವು ಸದಸ್ಯರು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X