Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಡೋಪಿಂಗ್ ಟೆಸ್ಟ್: ಭಾರತದ ಗೋಲ್‌ಕೀಪರ್...

ಡೋಪಿಂಗ್ ಟೆಸ್ಟ್: ಭಾರತದ ಗೋಲ್‌ಕೀಪರ್ ಸುಬ್ರತಾ ಪಾಲ್ ವಿಫಲ

ವಾರ್ತಾಭಾರತಿವಾರ್ತಾಭಾರತಿ25 April 2017 5:22 PM IST
share
ಡೋಪಿಂಗ್ ಟೆಸ್ಟ್: ಭಾರತದ ಗೋಲ್‌ಕೀಪರ್ ಸುಬ್ರತಾ ಪಾಲ್ ವಿಫಲ

ಹೊಸದಿಲ್ಲಿ, ಎ,.25: ಭಾರತದ ಉದಯೋನ್ಮುಖ ಗೋಲ್‌ಕೀಪರ್ ಸುಬ್ರತಾ ಪಾಲ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ಎಂದು ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ಮಂಗಳವಾರ ತಿಳಿಸಿದೆ.

 ‘‘ಅರ್ಜುನ ಪ್ರಶಸ್ತಿ ವಿಜೇತ ಫುಟ್ಬಾಲ್ ಆಟಗಾರ ಸುಬ್ರತಾ ಪಾಲ್ ಕಳೆದ ತಿಂಗಳು ನಡೆದ ಡೋಪಿಂಗ್‌ನ ‘ಎ’ ಮಾದರಿಯ ಪರೀಕ್ಷೆ ಪಾಸಿಟಿವ್ ಆಗಿದೆ. ಅವರು ನಿಷೇಧಿತ ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ಫೇಲಾಗಿದ್ದಾರೆ. ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ’’ ಎಂದು ಎಐಎಫ್‌ಎಫ್ ಕಾರ್ಯದರ್ಶಿ ಕುಶಾಲ್ ದಾಸ್ ತಿಳಿಸಿದ್ದಾರೆ.

ಉಸಿರಾಟದ ಸಮಸ್ಯೆಯಿರುವವರು ತೆಗೆದುಕೊಳ್ಳುವ ದ್ರವ್ಯ ಟರ್ಬುಟಲಿನ್ ಪಾಲ್ ಸೇವಿಸಿದ್ದಾರೆ. ವಾಡಾ ಪ್ರಕಾರ ಈ ದ್ರವ್ಯ ನಿಷೇಧಿತ ಪಟ್ಟಿಯಲ್ಲಿದೆ. ಎಐಎಫ್‌ಎಫ್‌ಗೆ ನಾಡಾ ಕಳುಹಿಸಿರುವ ಪತ್ರದಲ್ಲಿ ಸುಬ್ರತಾರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ದಾಸ್ ಪಿಟಿಐಗೆ ತಿಳಿಸಿದ್ದಾರೆ.

  ನಾಡಾ ಅಧಿಕಾರಿಗಳು ಮಾರ್ಚ್‌ನಲ್ಲಿ ಭಾರತದ ಮಾಜಿ ನಾಯಕ ಪಾಲ್‌ರನ್ನು ಪರೀಕ್ಷೆಗೆ ಒಳಪಡಿಸಿದ್ದರು ಎಂದು ರಾಷ್ಟ್ರೀಯ ಉದ್ದೀಪನಾ ತಡೆ ಘಟಕದ ಮುಖ್ಯಸ್ಥ ನವೀನ್ ಅಗರವಾಲ್ ದೃಢಪಡಿಸಿದ್ದಾರೆ.

  ‘‘ಬಿ ಸ್ಯಾಂಪಲ್ ಪರೀಕ್ಷೆಗೆ ಒಳಗಾಗಬೇಕೇ ಎಂಬ ಕುರಿತು ಪಾಲ್ ಹಾಗೂ ನಾಡಾ ಅಧಿಕಾರಿಗಳು ನಿರ್ಧರಿಸಬೇಕಾಗಿದೆ. ಪಾಲ್‌ಗೆ ಅಗತ್ಯವಿದ್ದರೆ ಮಾರ್ಗದರ್ಶನ ನೀಡಲು ನಾವು ಸದಾ ಸಿದ್ಧ’’ ಎಂದು ದಾಸ್ ಹೇಳಿದ್ದಾರೆ.

   ಪಶ್ಚಿಮ ಬಂಗಾಳದ ಪಾಲ್ ಭಾರತದ ಶ್ರೇಷ್ಠ ಗೋಲ್‌ಕೀಪರ್ ಪೈಕಿ ಒಬ್ಬರಾಗಿದ್ದು, ಬಾಬ್ ಹಾಟನ್ ಹಾಗೂ ಬೈಚುಂಗ್ ಭುಟಿಯಾ ಭಾರತದ ಕೋಚ್ ಆಗಿದ್ದ ಅವಧಿಯಲ್ಲಿ ಪಾಲ್ ನಂ.1 ಗೋಲ್‌ಕೀಪರ್ ಆಗಿದ್ದರು. 2007 ಹಾಗೂ 2009ರಲ್ಲಿ ಭಾರತ ತಂಡ ನೆಹರೂ ಕಪ್ ಇಂಟರ್‌ನ್ಯಾಶನಲ್ ಟೂರ್ನಮೆಂಟ್ ಗೆಲ್ಲುವಲ್ಲಿ ಹಾಗೂ 2008ರಲ್ಲಿ ಹೈದರಾಬಾದ್‌ನಲ್ಲಿ ನಡೆದಿದ್ದ ಎಎಫ್‌ಸಿ ಚಾಲೆಂಜ್ ಕಪ್‌ನಲ್ಲಿ ಭಾರತ ಗೆಲುವು ಸಾಧಿಸಲು ಪಾಲ್ ಮುಖ್ಯ ಪಾತ್ರವಹಿಸಿದ್ದರು. ಕಳೆದ ಕೆಲವು ವರ್ಷಗಳಿಂದ ಪಾಲ್ ನಂ.1 ಗೋಲ್‌ಕೀಪರ್ ಆಗಿ ಉಳಿದಿಲ್ಲ. ಅವರ ಸ್ಥಾನದಲ್ಲೀಗ ಗುರುಪ್ರೀತ್ ಸಿಂಗ್ ಸಂಧು ಅವರಿದ್ದಾರೆ.

‘‘ಡೋಪಿಂಗ್ ಟೆಸ್ಟ್‌ನಲ್ಲಿ ವಿಫಲವಾಗಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ನಾಡಾ ಅಥವಾ ಎಐಎಫ್‌ಎಫ್‌ನಿಂದ ಅಧಿಕೃತವಾಗಿ ಮಾಹಿತಿ ಪಡೆದಿಲ್ಲ. ಮಾಧ್ಯಮದ ಮೂಲಕವೇ ಈ ವಿಷಯ ನನಗೆ ಗೊತ್ತಾಗಿದೆ. ಕಳೆದ 10 ವರ್ಷಗಳಿಂದ ಪ್ರಾಮಾಣಿಕತೆಯಿಂದ ಆಡಿದ್ದು, ಮುಗ್ದ ಎಂದು ಸಾಬೀತುಪಡಿಸುವೆ. ನಾನು ‘ಬಿ’ ಸ್ಯಾಂಪಲ್ ಪರೀಕ್ಷೆಗೆ ಅರ್ಜಿ ಸಲ್ಲಿಸಲಿದ್ದು, ಡೋಪಿಂಗ್ ಪರೀಕ್ಷೆಯಲ್ಲಿ ಫೇಲಾಗುವಂತಹ ಯಾವುದೇ ಕೆಲಸ ಮಾಡಿಲ್ಲ. ಮುಂಬೈ ನ್ಯಾಶನಲ್ ಕ್ಯಾಂಪ್‌ನಲ್ಲಿ ಎಲ್ಲ ಆಟಗಾರರ ಡೋಪಿಂಗ್ ಪರೀಕ್ಷೆ ನಡೆದಿತ್ತು. ಅದರಲ್ಲಿ ಫೇಲಾದ ವಿಷಯ ಕೇಳಿ ಅಚ್ಚರಿಯಾಗಿದೆ’’

ಸುಬ್ರತಾ ಪಾಲ್, ಭಾರತದ ಗೋಲ್‌ಕೀಪರ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X