Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2017-18ರಲ್ಲಿ ದಾಖಲೆಯ 273 ಮಿ.ಟ....

2017-18ರಲ್ಲಿ ದಾಖಲೆಯ 273 ಮಿ.ಟ. ಆಹಾರಧಾನ್ಯ ಉತ್ಪಾದನೆ ಸರಕಾರದ ಗುರಿ

ವಾರ್ತಾಭಾರತಿವಾರ್ತಾಭಾರತಿ25 April 2017 5:59 PM IST
share
2017-18ರಲ್ಲಿ ದಾಖಲೆಯ 273 ಮಿ.ಟ. ಆಹಾರಧಾನ್ಯ ಉತ್ಪಾದನೆ ಸರಕಾರದ ಗುರಿ

ಹೊಸದಿಲ್ಲಿ,ಎ.25: ಉತ್ತಮ ಮುಂಗಾರಿನ ನಿರೀಕ್ಷೆಯಲ್ಲಿರುವ ದೇಶವು ಜುಲೈನಿಂದ ಆರಂಭಗೊಳ್ಳುವ 2017-18ನೇ ಬೆಳೆ ಸಾಲಿನಲ್ಲಿ ಸಾರ್ವಕಾಲಿಕ ದಾಖಲೆಯ 273 ಮಿಲಿಯನ್ ಟನ್ ಆಹಾರಧಾನ್ಯಗಳನ್ನು ಉತ್ಪಾದಿಸುವ ಮತ್ತು ಶೇ.4ರ ಕೃಷಿ ಬೆಳವಣಿಗೆ ದರವನ್ನು ಕಾಯ್ದುಕೊಳ್ಳುವ ಸಾಧ್ಯತೆಯಿದೆ. ಕೃಷಿ ಸಚಿವಾಲಯದ ಎರಡನೇ ಅಂದಾಜಿನಂತೆ ಎರಡು ವರ್ಷಗಳ ಬರದ ಬಳಿಕ ಉತ್ತಮ ಮಳೆಯಾಗುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ (ಜೂನ್-ಜುಲೈ) ದಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ದಾಖಲೆಯ 271.98 ಮಿ.ಟ.ಮುಟ್ಟಬಹುದು.

ಮುಂಬರುವ ಮುಂಗಾರು ಋತುವಿನಲ್ಲಿ ಬಿತ್ತನೆ ಕಾರ್ಯತಂತ್ರವನ್ನು ಚರ್ಚಿಸಲು ಏರ್ಪಡಿಸಲಾಗಿರುವ ಎರಡು ದಿನಗಳ ರಾಷ್ಟ್ರೀಯ ಸಮಾವೇಶದಲ್ಲಿ ಈ ವಿಷಯವನ್ನು ತಿಳಿಸಿದ ಕೃಷಿ ಸಚಿವ ರಾಧಾ ಮೋಹನ ಸಿಂಗ್ ಅವರು, ಈ ವರ್ಷದ ಮುಂಗಾರು ಮಳೆ ಸಾಮಾನ್ಯವಾಗಿರಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು ಇಚ್ಛಿತ ಗುರಿಯನ್ನು ಸಾಧಿಸಲು ನೆರವಾಗಲಿದೆ ಎಂದರು.

ಸಾಮಾನ್ಯವಾಗಿ ಸುಮಾರು 72 ಮಿ.ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಬೆಳೆಯ ಬಿತ್ತನೆ ನಡೆಯುತ್ತದೆ. ಭತ್ತ, ಬೇಳೆಕಾಳುಗಳು, ಎಣ್ಣೆಬೀಜಗಳು, ಹತ್ತಿ ಮತ್ತು ಕಬ್ಬು ಈ ಋತುವಿನಲ್ಲಿ ಬಿತ್ತನೆಗೊಳ್ಳುವ ಪ್ರಮುಖ ಬೆಳೆಗಳಾಗಿವೆ.

ಕೊಯ್ಲು ಪೂರ್ವ ಮತ್ತು ಕೊಯ್ಲೋತ್ತರ ಅವಧಿಗಳಲ್ಲಿ ರೈತರಿಗೆ ಸಕಾಲಿಕ ಬೆಂಬಲವನ್ನು ಒದಗಿಸುವುದಕ್ಕೆ ಸಹಾಯಕ ಕೃಷಿ ಸಚಿವರಾದ ಪುರುಷೋತ್ತಮ ರುಪಾಲಾ ಮತ್ತು ಸುದರ್ಶನ ಭಗತ್ ಅವರು ಒತ್ತು ನೀಡಿದರು.

ಗುರಿ ಸಾಧನೆಯ ವಿಶ್ವಾಸ ವ್ಯಕ್ತಪಡಿಸಿದ ಕೃಷಿ ಕಾರ್ಯದರ್ಶಿ ಶೋಭನ ಪಟ್ಟನಾಯಕ್ ಅವರು, 2017=18 ನೇ ಸಾಲಿನಲ್ಲಿ ಶೇ.4ರ ಕೃಷಿ ಬೆಳವಣಿಗೆ ದರವನ್ನು ಕಾಯ್ದುಕೊಳ್ಳುವ ನಿರೀಕ್ಷೆ ವ್ಯಕ್ತಪಡಿಸಿದರು.

ಮುಂಗಾರು ಬೆಳೆ ಇಳುವರಿಯು ನೈಋತ್ಯ ಮಾನ್ಸೂನ್‌ನ್ನೇ ಪ್ರಮುಖವಾಗಿ ಅವಲಂಬಿಸಿರುವುದರಿಂದ ಮಳೆ ವಿಳಂಬ, ಸುದೀರ್ಘ ಅವಧಿಗೆ ಮಳೆಯಾಗದಿರುವಿಕೆ ಮತ್ತು ಅನಾವೃಷ್ಟಿ ಹಾಗೂ ಅತಿವೃಷ್ಟಿಯಂತಹ ಎಲ್ಲ ಸಂಭಾವ್ಯ ಸನ್ನಿವೇಶಗಳನ್ನು ಎದುರಿಸಲು ರಾಜ್ಯಗಳು ಯೋಜನೆ ರೂಪಿಸಬೇಕು ಎಂದ ಅವರು, ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ಪಾಲಿಸಿಗಳನ್ನು ಖರೀದಿಸಲು ಹೆಚ್ಚೆಚ್ಚು ರೈತರನ್ನು ಉತ್ತೇಜಿಸುವಂತೆ ಮತ್ತು 2017-18ನೇ ಬೆಳೆಸಾಲಿನಲ್ಲಿ ಬಿತ್ತನೆಯಾದ ಪ್ರದೇಶದ ಶೇ.40 ರಷ್ಟು ಭಾಗ ವಿಮಾರಕ್ಷಣೆ ಹೊಂದಿರುವಂತೆ ಮಾಡಲು ರಾಜ್ಯಗಳನ್ನು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X