Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಡಿಒ, ಸೋಷಿಯಲ್ ಆಡಿಟರ್‌ಗಳನ್ನು...

ಪಿಡಿಒ, ಸೋಷಿಯಲ್ ಆಡಿಟರ್‌ಗಳನ್ನು ಕೊಠಡಿಯಲ್ಲಿ ಕೂಡಿಹಾಕಿದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ25 April 2017 6:42 PM IST
share
ಪಿಡಿಒ, ಸೋಷಿಯಲ್ ಆಡಿಟರ್‌ಗಳನ್ನು ಕೊಠಡಿಯಲ್ಲಿ ಕೂಡಿಹಾಕಿದ ಗ್ರಾಮಸ್ಥರು

ಮೂಡಿಗೆರೆ, ಎ.25: ಎನ್‌ಆರ್‌ಐಜಿ ಕಾಮಗಾರಿಗಳ ಬಗ್ಗೆ ಸೋಷಿಯಲ್ ಆಡಿಟರ್‌ಗಳು ಸಮರ್ಪಕವಾಗಿ ಪರಿಶೀಲಿಸದೇ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಹೆಸಗಲ್ ಗ್ರಾಪಂ ಸಭಾಂಗಣದಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನೆಯ ಗ್ರಾಮಸಭೆಯನ್ನು ಬಹಿಷ್ಕರಿಸಿದ ಹೆಸಗಲ್ ಗ್ರಾಮಸ್ಥರು ಮತ್ತು ಗ್ರಾಪಂ ಸದಸ್ಯರು, ಪಿಡಿಒ ಸೇರಿದಂತೆ 5 ಮಂದಿ ಸೋಷಿಯಲ್ ಆಡಿಟರ್‌ಗಳನ್ನು ಕೊಠಡಿಯೊಳಗೆ ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಹೆಸಗಲ್ ಗ್ರಾಪಂ ಸದಸ್ಯ ಹೆಸಗಲ್ ಗಿರೀಶ್ ಮಾತನಾಡಿ, ಕಳೆದ ಬಾರಿ ಎನ್‌ಆರ್‌ಐಜಿ ಯೋಜನೆಯಲ್ಲಿ ಬಾಕ್ಸ್ ಚರಂಡಿ, ತಡೆಗೋಡೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಮಾಡಲಾಗಿದೆ. ಜನರಿಗೆ ಕೂಲಿ ನೀಡಲಾಗಿದೆ. ಮೆಟಿರಿಯಲ್ ಬಿಲ್ ಇನ್ನೂ ಬಂದಿಲ್ಲ. ಇಂತಹದಕ್ಕೆಲ್ಲಾ ಎನ್‌ಜಿಒದಿಂದ ನೇಮಕವಾದ ಸೋಶಿಯಲ್ ಆಡಿಟರ್‌ಗಳು ಆಕ್ಷೇಪಣೆ ಮತ್ತು ಮರುಪಾವತಿಗೆ ಬರೆದಿದ್ದಾರೆ. ಈ ಬಾರಿಯ ಎನ್‌ಆರ್‌ಐಜಿಯಲ್ಲಿ ಮೀನಾಕ್ಷಿ ಬಾಲಕೃಷ್ಣ ಎಂಬವರು ದನದ ಕೊಟ್ಟಿಗೆ ನಿರ್ಮಿಸಿದ್ದಾರೆ. ಕೊಟ್ಟಿಗೆಯಲ್ಲಿ ದನವಿಲ್ಲದ ಒಂದೇ ಕಾರಣಕ್ಕೆ ಕಾಮಗಾರಿಯ ಹಣವನ್ನು ಪಿಡಿೊ ಮತ್ತು ಅಧ್ಯಕ್ಷರು ಸರಕಾರಕ್ಕೆ ಮರುಪಾವತಿ ಮಾಡಲು ಬರೆದಿದ್ದಾರೆ ಎಂದು ದೂರಿದರು.

6 ತಿಂಗಳಿನಿಂದ ಪಂಚಾಯತ್ ವ್ಯಾಪ್ತಿಯಲ್ಲಿ ಅನೇಕ ಚರಂಡಿಗಳನ್ನು ನಿರ್ಮಾಣ ಮಾಡಲಾಗಿದೆ. ಬಿಲ್ ಆಗುವ ಸಮಯದಲ್ಲಿ ಅದಕ್ಕೆ ಬೋರ್ಡ್ ಹಾಕಿ. ಕಡತಗಳಲ್ಲಿ ದಾಖಲಿಸಲಾಗಿದೆ. ಅಂತಹ ಕಾಮಗಾರಿಗಳಿಗೂ ಆಕ್ಷೇಪಣೆ ಮತ್ತು ಹಣ ಮರುಪಾವತಿಗೆ ಬರೆದಿದ್ದಾರೆ. ಹಳೆಮೂಡಿಗೆರೆ, ಜಾವಳಿ ಸೇರಿದಂತೆ ಅನೇಕ ಗ್ರಾಪಂಗಳಲ್ಲಿ ಈ ರೀತಿ ಮಾಡಿದ್ದಾರೆಂದು ತಿಳಿದುಬಂದಿದೆ. ಕಾಮಗಾರಿಗಳ ಬಗ್ಗೆ ಜನರೇ ಒಪ್ಪಿಕೊಂಡರೂ ಇವರು ಒಪ್ಪಿಕೊಳ್ಳುವುದಿಲ್ಲ. ಇದನ್ನೆಲ್ಲಾ ಗಮನಿಸಿದರೆ ಹಣ ಮಾಡುವ ತಂತ್ರವಿರಬಹುದೆಂದು ಅವರು ಆರೋಪಿಸಿದರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಕರರ ಮನ ವೊಲಿಸಲು ಪ್ರಯತ್ನಿಸಿದರು. ಆದರೆ ಸಂಬಂಧಿಸಿದ ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದರು. ಕೂಡಲೇ ನೋಡಲ್ ಅಧಿಕಾರಿ ಭಾರತಿ ಸ್ಥಳಕ್ಕೆ ಆಗಮಿಸಿ ಸಭೆ ನಡೆಸಲು ಅನುವು ಮಾಡಿಕೊಡಲು ಮನವಿ ಮಾಡಿದರು. ಬಳಿಕ ಸಭೆ ಮುಂದುವರೆಯಿತು.

ಈ ಸಂದರ್ಭ ಹೆಸಗಲ್ ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರಾದ ಪ್ರಶಾಂತ್, ಪೂರ್ಣಿಮಾ, ಕಾಮಾಕ್ಷಿ, ಅನಿತಾ, ಆದರ್ಶ, ಮಹಿದ್ದೀನ್ ಸೇಟ್, ಗ್ರಾಮಾಸ್ಥರಾದ, ವಿಂತೇಶ್, ಶರೀಪ್, ಆಸಿಫ್, ತಾರನಾಥ್, ಉಮೇಶ್, ಆನಂದ ಮತ್ತಿತರರಿದ್ದರು.

ನಾವು ನಿಯಮ ಮೀರಿ ಕೆಲಸ ಮಾಡಿಲ್ಲ. ಅಕ್ರಮಗಳು ನಡೆಯದಂತೆ ಎಲ್ಲಾ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುತ್ತಿದ್ದೇವೆ. ಇದನ್ನು ಸಹಿಸಲು ಸಾಧ್ಯವಾಗದೇ, ನಾವು ಹಣಕ್ಕಾಗಿ ಈ ರೀತಿ ಕೆಲಸ ಮಾಡುತ್ತಿದ್ದೇವೆಂದು ಆರೋಪ ಮಾಡುತ್ತಿರುವುದು ಸರಿಯಲ್ಲ.

-ಹೆಸರು ಹೇಳಲಿಚ್ಛಿಸದ ಆಡಿಟರ್‌ಗಳು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X