Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಜೈಲುಗಳಲ್ಲಿ ಫೆಲೆಸ್ತೀನ್...

ಇಸ್ರೇಲ್ ಜೈಲುಗಳಲ್ಲಿ ಫೆಲೆಸ್ತೀನ್ ಕೈದಿಗಳ ಉಪವಾಸ ಸತ್ಯಾಗ್ರಹ ; ನಾಯಕನ ಸ್ಥಿತಿ ಗಂಭೀರ: ಎನ್‌ಜಿಒ

ವಾರ್ತಾಭಾರತಿವಾರ್ತಾಭಾರತಿ25 April 2017 8:11 PM IST
share
ಇಸ್ರೇಲ್ ಜೈಲುಗಳಲ್ಲಿ ಫೆಲೆಸ್ತೀನ್ ಕೈದಿಗಳ ಉಪವಾಸ ಸತ್ಯಾಗ್ರಹ ; ನಾಯಕನ ಸ್ಥಿತಿ ಗಂಭೀರ: ಎನ್‌ಜಿಒ

ರಮಲ್ಲಾ (ಫೆಲೆಸ್ತೀನ್), ಎ. 25: ಇಸ್ರೇಲ್‌ನ ಜೈಲುಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಫೆಲೆಸ್ತೀನ್ ಕೈದಿಗಳ ನೇತೃತ್ವ ವಹಿಸಿರುವ ಮರ್ವನ್ ಬರ್ಘೌಟಿಯ ಆರೋಗ್ಯ ಕಳೆದ ವಾರದಿಂದ ಹದಗೆಟ್ಟಿದೆ ಎಂದು ‘ಫೆಲೆಸ್ತೀನ್ ಕೈದಿಗಳ ಕ್ಲಬ್’ ಎಂಬ ಹೆಸರಿನ ಎನ್‌ಜಿಒ ಸೋಮವಾರ ಹೇಳಿದೆ.

57 ವರ್ಷದ ಬರ್ಘೌಟಿ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸುತ್ತಿದ್ದಾರೆ ಎಂದು ಅದು ತಿಳಿಸಿದೆ.ಎರಡನೆ ಫೆಲೆಸ್ತೀನ್ ಸಂಘರ್ಷದಲ್ಲಿ ವಹಿಸಿರುವ ಪಾತ್ರಕ್ಕಾಗಿ ಅವರು ಐದು ಜೀವಾವಧಿ ಶಿಕ್ಷೆಗಳನ್ನು ಅನುಭವಿಸುತ್ತಿದ್ದಾರೆ.ಉಪವಾಸ ಸತ್ಯಾಗ್ರಹದಿಂದ ನಾಯಕನ ಆರೋಗ್ಯವು ಗಂಭೀರವಾಗಿ ಕ್ಷೀಣಿಸುತ್ತಿದೆ ಎಂದು ಎನ್‌ಜಿಒದ ಪದಾಧಿಕಾರಿ ಅಮನಿ ಸಾರಾನೆಹ್ ಹೇಳಿದರು.

ಉಪವಾಸವು ಎಪ್ರಿಲ್ 17ರಂದು ಆರಂಭಗೊಂಡಿದೆ. ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತಿರುವವರು ನೀರು ಮತ್ತು ಉಪ್ಪನ್ನು ಮಾತ್ರ ಸೇವಿಸುತ್ತಿದ್ದಾರೆ.
ಉತ್ತಮ ವೈದ್ಯಕೀಯ ಆರೈಕೆ ಹಾಗೂ ಕುಟುಂಬ ಸದಸ್ಯರೊಡನೆ ಮಾತನಾಡಲು ಫೋನ್ ಸಂಪರ್ಕ ಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿರಿಸಿ ಅವರು ಉಪವಾಸ ಮುಷ್ಕರ ನಡೆಸುತ್ತಿದ್ದಾರೆ.ಆದಾಗ್ಯೂ, ಬರ್ಘೌಟಿಯ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಕ್ಷೀಣತೆ ಗೋಚರಿಸಿಲ್ಲ ಎಂದು ಇಸ್ರೇಲ್ ಬಂದೀಖಾನೆ ಇಲಾಖೆಯ ವಕ್ತಾರರೋರ್ವರು ಹೇಳಿದರು.

 ‘‘ಬರ್ಘೌಟಿಗೆ ಸೌಖ್ಯವಿಲ್ಲ ಎಂದಾದರೆ, ಅವರು ತಿನ್ನಬೇಕು, ಅಷ್ಟೆ’’ ಎಂದು ಅವರು ಎಎಫ್‌ಪಿ ಸುದ್ದಿ ಸಂಸ್ಥೆಗೆ ಹೇಳಿದರು.ಸತ್ಯಾಗ್ರಹ ಆರಂಭಗೊಂಡ ಬಳಿಕ ಬರ್ಘೌಟಿಯನ್ನು ಜಲಮೆ ಜೈಲಿಗೆ ಸ್ಥಳಾಂತರಿಸಿ ಏಕಾಂಗಿಯಾಗಿ ಇರಿಸಲಾಗಿದೆ.ವೈದ್ಯಕೀಯ ಚಿಕಿತ್ಸೆ ಪಡೆಯುವಂತೆ ಜೈಲಿನ ಅಧಿಕಾರಿಗಳು ಬರ್ಘೌಟಿಯನ್ನು ಒತ್ತಾಯಿಸುತ್ತಿದ್ದಾರೆ ಹಾಗೂ ಅವರ ಮನವೊಲಿಸುವಂತೆ ಇತರ ಕೈದಿಗಳನ್ನೂ ಒತ್ತಾಯಿಸುತ್ತಿದ್ದಾರೆ ಎಂದು ಎನ್‌ಜಿಒ ತಿಳಿಸಿದೆ.

ಇಸ್ರೇಲ್‌ನ ಜೈಲುಗಳಲ್ಲಿ ಸುಮಾರು 6,500 ಫೆಲೆಸ್ತೀನೀಯರಿದ್ದಾರೆ. ಇಸ್ರೇಲ್‌ನ ಆಡಳಿತಾತ್ಮಕ ಬಂಧನ ವ್ಯವಸ್ಥೆಯಡಿ ಸುಮಾರು 500 ಮಂದಿಯನ್ನು ಬಂಧಿಸಲಾಗಿದೆ. ಈ ಕಾನೂನಿನ ಪ್ರಕಾರ ಬಂಧಿಸಿದರೆ, ಕೈದಿಗಳನ್ನು ಆರೋಪವಿಲ್ಲದೆ ಜೈಲಿನಲ್ಲಿಡಬಹುದಾಗಿದೆ.

2000ದಿಂದ 2005ರವರೆಗೆ ನಡೆದ ಎರಡನೆ ಫೆಲೆಸ್ತೀನ್ ಸಂಘರ್ಷದ ವೇಳೆ ಬರ್ಘೌಟಿ ಪ್ರಧಾನ ಪಾತ್ರ ವಹಿಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ಹಲವಾರು ಆತ್ಮಹತ್ಯಾ ದಾಳಿಗಳ ಉಸ್ತುವಾರಿಯನ್ನು ಬರ್ಘೌಟಿ ಹೊಂದಿದ್ದರು ಎಂಬುದಾಗಿ ಇಸ್ರೇಲ್ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X