Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ, ಗುಜರಾತ್ ಸರ್ಕಾರಗಳ ವೆಬ್ ಸೈಟ್...

ಕೇಂದ್ರ, ಗುಜರಾತ್ ಸರ್ಕಾರಗಳ ವೆಬ್ ಸೈಟ್ ನಿಂದ ಆಧಾರ್ ಮಾಹಿತಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ26 April 2017 6:51 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇಂದ್ರ, ಗುಜರಾತ್ ಸರ್ಕಾರಗಳ ವೆಬ್ ಸೈಟ್ ನಿಂದ ಆಧಾರ್ ಮಾಹಿತಿ ಬಹಿರಂಗ

ಹೊಸದಿಲ್ಲಿ, ಎ.26: ಸರಕಾರದ ಕನಿಷ್ಠ ಮೂರು ಯೋಜನೆಗಳ ಫಲಾನುಭವಿಗಳ ಆಧಾರ್ ಸಂಖ್ಯೆಯ ಮಾಹಿತಿ ಸಂಬಂಧಿತ ಇಲಾಖೆಗಳ ವೆಬ್ ಸೈಟ್ ಗಳಲ್ಲಿ ಸೋರಿಕೆಯಾದ ಬೆನ್ನಲ್ಲೇ ಮಂಗಳವಾರ ಇಂತಹ ಇನ್ನೂ ಎರಡು ಘಟನೆಗಳು ನಡೆದಿವೆ.

ಮೊದಲ ಪ್ರಕರಣದಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಆಧಾರ್ ಸಂಖ್ಯೆಗಳು ಕೇಂದ್ರ ಗೃಹ ಮತ್ತು ನಗರ ಬಡತನ ನಿರ್ಮೂಲನಾ ಸಚಿವಾಲಯದ ವೆಬ್ ಸೈಟ್ ನಲ್ಲಿ ಲಭ್ಯವಿವೆ. ಎರಡನೇ ಪ್ರಕರಣದಲ್ಲಿ ಗುಜರಾತ್ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವೆಬ್ ಸೈಟ್ ನಲ್ಲಿ ನೂರಾರು ವಿದ್ಯಾರ್ಥಿಗಳ ಆಧಾರ್ ಸಂಖ್ಯೆಗಳು ಮತ್ತು ವಿಳಾಸಗಳು ಬಹಿರಂಗಗೊಂಡಿವೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ವೆಬ್ ಸೈಟ್ ನ ಸರ್ಚ್ ಆಯ್ಕೆಯಲ್ಲಿ ‘ಬೈ ಆಧಾರ್ ಐಡಿ’ ಅಡಿಯಲ್ಲಿ ಯಾವುದೇ ಸಂಖ್ಯೆ ಒತ್ತಿದರೂ ಹಲವಾರು ಫಲಾನುಭವಿಗಳ ಹೆಸರು, ತಂದೆಯ ಹೆಸರು, ನಗರದ ಹೆಸರು, ವಯಸ್ಸು, ಜಾತಿ ಮತ್ತು ಆಧಾರ್ ಸಂಖ್ಯೆಗಳು ಕಾಣಸಿಗುತ್ತವೆ. ಕೆಲವೊಂದು ಫಲಾನುಭವಿಗಳ ಫೋಟೋಗಳು ಕೂಡ ಕಾಣುತ್ತವೆ.

ಗುಜರಾತ್ ನಲ್ಲಿ 2013-14 ಅವಧಿಯಲ್ಲಿ ಒಟ್ಟು 32,979 ವಿದ್ಯಾರ್ಥಿಗಳು ಅಲ್ಪಸಂಖ್ಯಾತರಿಗಾಗಿನ ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿ ವೇತನ ಪಡೆದಿದ್ದು, ಇವರಲ್ಲಿ ಮೆರಿಟ್ ಸ್ಕಾಲರ್ ಶಿಪ್ ಪಡೆದ 2,607 ವಿದ್ಯಾರ್ಥಿಗಳ ಹೆಸರುಗಳು ಸಾಮಾಜಿಕ ನ್ಯಾಯ ಇಲಾಖೆಯ ವೆಬ್ ಸೈಟ್ ನಲ್ಲಿ ಕಾಣಬಹುದಾಗಿದೆ. ಅವರ ಎಲ್ಲಾ ಇತರ ಮಾಹಿತಿಗಳು, ಕಲಿಯುತ್ತಿರುವ ಸಂಸ್ಥೆ, ಬ್ಯಾಂಕ್ ಖಾತೆ ವಿವರಗಳನ್ನೂ ಕಾಣಬಹುದಾಗಿದೆ.

ಕಳೆದ ಕೆಲ ದಿನಗಳಲ್ಲಿ ಚಂಡೀಗಢದ ಪಿಡಿಎಸ್ ಫಲಾನುಭವಿಗಳ ಆಧಾರ್ ಸಂಖ್ಯೆ, ಸ್ವಚ್ಛ್ ಭಾರತ್ ಮಿಷನ್ನಿನ ಪ್ರಾವಿಡೆಂಟ್ ಫಂಡ್ ಫಲಾನುಭವಿಗಳು ಹಾಗೂ ಜಾರ್ಖಂಡ್ ಸರಕಾರದಿಂದ ಪಿಂಚಣಿ ಪಡೆಯುತ್ತಿರುವ ಲಕ್ಷಗಟ್ಟಲೆ ಜನರ ಮಾಹಿತಿಗಳು ಸೋರಿಕೆಯಾಗಿವೆ.

ಎಪ್ರಿಲ್ ತಿಂಗಳೊಂದರಲ್ಲಿಯೇ ಈ ರೀತಿಯಾಗಿ ಆಧಾರ್ ಮಾಹಿತಿ ಸೋರಿಕೆಯಾದ ಒಂಬತ್ತು ಪ್ರಕರಣಗಳು ವರದಿಯಾಗಿವೆ. ಪಂಜಾಬ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬಿಹಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಾತ್ಮ ಜ್ಯೋತಿಬಾ ಫುಲೆ ತೆಲಂಗಾಣ ಹಿಂದುಳಿದ ವರ್ಗಗಳ ಶಿಕ್ಷಣ ಸಂಸ್ಥೆಗಳ ಸೊಸೈಟಿ, ಕೇರಳ ವಿದ್ಯಾರ್ಥಿ ವೇತನ, ಖಾದಿ ಮತ್ತು ಗ್ರಾಮೋದ್ಯೋಗ ಮತ್ತು ಕೇರಳ ಸೇವ ಪಿಂಚಣಿ ಇವುಗಳ ವೆಬ್ ಸೈಟ್ ಗಳಲ್ಲಿ ಆಧಾರ್ ಮಾಹಿತಿ ಸೋರಿಕೆಯಾಗಿವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X