Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಸಭೆಯಲ್ಲಿ ಬಿಸಿಸಿಐಗೆ ತೀವ್ರ...

ಐಸಿಸಿ ಸಭೆಯಲ್ಲಿ ಬಿಸಿಸಿಐಗೆ ತೀವ್ರ ಮುಖಭಂಗ

ಆಡಳಿತ ರಚನೆಯಲ್ಲಿ ಬದಲಾವಣೆ ಹಾಗೂ ಆದಾಯ ಹಂಚಿಕೆ ಮಾದರಿಯ ಪುನರ್ರಚನೆ ಮತದಾನ

ವಾರ್ತಾಭಾರತಿವಾರ್ತಾಭಾರತಿ26 April 2017 11:00 PM IST
share
ಐಸಿಸಿ ಸಭೆಯಲ್ಲಿ ಬಿಸಿಸಿಐಗೆ ತೀವ್ರ ಮುಖಭಂಗ

ಹೊಸದಿಲ್ಲಿ, ಎ.26: ದುಬೈನಲ್ಲಿ ಬುಧವಾರ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್‌ನ(ಐಸಿಸಿ)ಮಂಡಳಿ ಸಭೆಯಲ್ಲಿ ಆದಾಯ ಹಂಚಿಕೆ ಹಾಗೂ ಆಡಳಿತದಲ್ಲಿ ಬದಲಾವಣೆಗಾಗಿ ನಡೆದ ಮತದಾನದಲ್ಲಿ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ತೀವ್ರ ಮುಖಭಂಗ ಅನುಭವಿಸಿದೆ.

ಐಸಿಸಿ ಮಂಡಳಿ ಸಭೆಯ ಮೊದಲ ದಿನವಾದ ಬುಧವಾರ ಐಸಿಸಿ ಆಡಳಿತ ಮಂಡಳಿ ರಚನೆಯಲ್ಲಿ ಬದಲಾವಣೆ ಹಾಗೂ ಆದಾಯ ಹಂಚಿಕೆ ಮಾದರಿಯ ಪುನರ್ರಚನೆಗೆ ಸಂಬಂಧಿಸಿ ಐಸಿಸಿ ಸದಸ್ಯ ರಾಷ್ಟ್ರಗಳ ಬಹುಮತದ ಪರೀಕ್ಷೆ ನಡೆಸಲಾಗಿದೆ.

ಐಸಿಸಿ ಆಡಳಿತ ಹಾಗೂ ಸಂವಿಧಾನದಲ್ಲಿನ ಬದಲಾವಣೆಗಾಗಿ ನಡೆದ ಮತದಾನದಲ್ಲಿ ಬಿಸಿಸಿಐ 1-9 ಅಂತರದಿಂದ ಸೋತಿದೆ. ಆದಾಯ ಹಂಚಿಕೆ ಮಾದರಿಯ ಬದಲಾವಣೆಗೆ ಸಂಬಂಧಿಸಿ ನಡೆದ ಮತದಾನದಲ್ಲಿ ಬಿಸಿಸಿಐಗೆ 2-8 ಅಂತರದ ಸೋಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿ ಬಿಸಿಸಿಐ ಹಾಗೂ ಶ್ರೀಲಂಕಾದ ಪ್ರತಿನಿಧಿಗಳು ಮಾತ್ರ ವಿರುದ್ಧವಾಗಿ ಮತ ಚಲಾಯಿಸಿದ್ದರು. ಬಿಸಿಸಿಐ ಆದಾಯ ಹಂಚಿಕೆ ಮಾದರಿಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ.

ಐಸಿಸಿ ಆದಾಯದಲ್ಲಿ ತನಗೆ ಸಿಂಹಪಾಲು ಬೇಕು ಎಂದು ಬಿಸಿಸಿಐ ವಾದವಾಗಿದೆ. ಬಿಸಿಸಿಐನ ಮಾಜಿ ಅಧ್ಯಕ್ಷ, ಇದೀಗ ಐಸಿಸಿಯ ಮೊದಲ ಸ್ವತಂತ್ರ ಮುಖ್ಯಸ್ಥರಾಗಿರುವ ಶಶಾಂಕ್ ಮನೋಹರ್ ಬಿಸಿಸಿಐ ವಿರುದ್ಧ ಬೌನ್ಸರ್ ಎಸೆದಿದ್ದಾರೆ.

‘‘ಹೌದು, ಮತದಾನ ಪ್ರಕ್ರಿಯೆಗಳೆಲ್ಲ ಮುಗಿದಿವೆ. ಆದಾಯ ಹಂಚಿಕೆ ಮಾದರಿಯ ಬದಲಾವಣೆಯ ಪರವಾಗಿ 8-2 ಮತಗಳು ಹಾಗೂ ಐಸಿಸಿ ಸಂವಿಧಾನದ ಬದಲಾವಣೆ ಪರವಾಗಿ 9-1 ಮತ ಚಲಾವಣೆಯಾಗಿದೆ. ಬಿಸಿಸಿಐ ಈ ಎರಡರ ವಿರುದ್ಧ ಮತ ಚಲಾಯಿಸಿದೆ. ಈ ಎಲ್ಲ ಬದಲಾವಣೆಯು ಸ್ವೀಕಾರಾರ್ಹವಲ್ಲ. ಭಾರತ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದು ಸೇರಿದಂತೆ ಎಲ್ಲ ಆಯ್ಕೆಯು ಮುಕ್ತವಾಗಿದೆ. ಜಂಟಿ ಕಾರ್ಯದರ್ಶಿ ವಿಶೇಷ ಸಾಮಾನ್ಯ ಸಭೆ ಕರೆದು ಬೆಳವಣಿಗೆಯ ಬಗ್ಗೆ ಸದಸ್ಯರಲ್ಲಿ ವಿವರಿಸಲಿದ್ದು, ಅಲ್ಲಿಯೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ’’ ಎಂದು ದುಬೈನಲ್ಲಿ ನಡೆದಿದ್ದ ಐಸಿಸಿ ಸಭೆಯಲ್ಲಿ ಹಾಜರಿದ್ದ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಸಿಸಿಯೊಂದಿಗೆ ಆದಾಯ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿ ಸಂಘರ್ಷದಲ್ಲಿ ತೊಡಗಿರುವ ಬಿಸಿಸಿಐ ಈತನಕ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಿಲ್ಲ. ಉಳಿದ 7 ದೇಶಗಳು ತಂಡವನ್ನು ಪ್ರಕಟಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X