Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದೊಂದು ವಿಶೇಷ ವಿವಾಹ!: ಕುತೂಹಲ ತಣಿಯಲು...

ಇದೊಂದು ವಿಶೇಷ ವಿವಾಹ!: ಕುತೂಹಲ ತಣಿಯಲು ಕ್ಲಿಕ್ ಮಾಡಿ

ವಾರ್ತಾಭಾರತಿವಾರ್ತಾಭಾರತಿ27 April 2017 9:27 AM IST
share
ಇದೊಂದು ವಿಶೇಷ ವಿವಾಹ!: ಕುತೂಹಲ ತಣಿಯಲು ಕ್ಲಿಕ್ ಮಾಡಿ

ಜಲಂಧರ್, ಎ.27: ಇದೊಂದು ಅಪರೂಪದ ವಿವಾಹ. ವಿವಾಹಕ್ಕೆ ಮುನ್ನವೇ ಈ ಜೋಡಿಯ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಏನೇನೋ ಕಮೆಂಟ್ ಬಂದವು. ಇದರಿಂದಾಗಿ ರಹಸ್ಯ ವಿವಾಹ ಬಂಧನಕ್ಕೆ ಒಳಗಾಗಲು ನಿರ್ಧರಿಸಿದ್ದ ಜೋಡಿ ಕೊನೆಗೆ ಮುಕ್ತವಾಗಿ ನೂರಾರು ಮಂದಿಯ ಸಮ್ಮುಖದಲ್ಲೇ ವಿವಾಹವಾದರು. ಇದರಲ್ಲೇನು ವಿಶೇಷ ಎಂದು ಹುಬ್ಬೇರಿಸಬೇಡಿ!

ಇದು ದೇಶದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಮೊಟ್ಟಮೊದಲ ಸಲಿಂಗಿ ವಿವಾಹ. ಕಪುರ್ತಲದಲ್ಲಿ ಕರ್ತವ್ಯದಲ್ಲಿರುವ ಮಂಜೀತ್ ಸಂಧು (43) ಎಂಬ ಮಹಿಳಾ ಪೊಲೀಸ್, ಬಟಿಂಡಾ ಪ್ರದೇಶದ ಕ್ರಿಶ್ಚಿಯನ್ ಮಹಿಳೆಯೊಬ್ಬರನ್ನು ಹಿಂದೂ ಶಾಸ್ತ್ರದ ಪ್ರಕಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಇತ್ತೀಚೆಗೆ ಇಲ್ಲಿನ ಜನತಾ ಮಂದಿರದಲ್ಲಿ ವಿವಾಹವಾದರು.

ಇಬ್ಬರಿಗೂ ಈ ಮೊದಲು ವಿವಾಹವಾಗಿದ್ದು, ಇಬ್ಬರ ಗಂಡಂದಿರೂ ಮೃತಪಟ್ಟಿದ್ದರು. ಹೊಸ ಸಂಗಾತಿಯ ಮೂರು ವರ್ಷದ ಮಗಳನ್ನು ವಿಧ್ಯುಕ್ತವಾಗಿ ದತ್ತುಪಡೆಯಲು ಕೂಡಾ ಸಂಧು ನಿರ್ಧರಿಸಿದ್ದಾರೆ. ಉಭಯ ಕುಟುಂಬಗಳ ಸದಸ್ಯರು, ಸ್ನೇಹಿತರು ಹಾಗೂ ಪೊಲೀಸ್ ಸಹೋದ್ಯೋಗಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. "ಜನ ಹಿಂದಿನಿಂದ ಏನು ಹೇಳಿಕೊಳ್ಳುತ್ತಾರೋ ಗೊತ್ತಿಲ್ಲ. ಆದರೆ ಸಹೋದ್ಯೋಗಿಗಳು, ನೆರೆಹೊರೆಯವರು ಮತ್ತು ಸ್ನೇಹಿತರ ಬೆಂಬಲ ನಮಗಿದೆ" ಎಂದು ಹೊಸ ಜೋಡಿ ಹೇಳಿಕೊಂಡಿದೆ.

ಅಲಂಕೃತ ಕುದುರೆಗಾಡಿಯಲ್ಲಿ ವಿವಾಹ ಸ್ಥಳಕ್ಕೆ ಆಗಮಿಸಿದ ಸಂಧು, ಕೆಂಪು ರುಮಾಲನ್ನು ತಲೆಗೆ ಸುತ್ತಿಕೊಂಡು ವರನ ಅಲಂಕಾರ ಮಾಡಿಕೊಂಡಿದ್ದರು. ನೋಟಿನ ಮಾಲೆ ಧರಿಸಿದ್ದರು. ವಧುವಿನ ಹಣೆಗೆ ತಿಲಕವಿಟ್ಟು, ಅದೇ ಅಲಂಕೃತ ರಥದಲ್ಲಿ ಸಂಗಾತಿಯನ್ನು ಮನೆಗೆ ಕರೆದೊಯ್ದರು. ವಧು ಕೆಂಪು ಲೆಹಂಗಾ ಮತ್ತು ಬಳೆಗಳಿಂದ ಶೋಭಿಸುತ್ತಿದ್ದಳು. ಇಬ್ಬರ ಕೈಯಲ್ಲೂ ಮೆಹಂದಿ ರಾರಾಜಿಸುತ್ತಿತ್ತು.

ಕೂದಲು ಕತ್ತರಿಸಿ, ಪ್ಯಾಂಟ್, ಷರ್ಟ್ ಇಷ್ಟಪಡುವ ಸಂಧು ಪ್ರತಿ ದಿನ ಜಿಮ್‌ಗೆ ತೆರಳುತ್ತಾರೆ ಹಾಗೂ ಬೈಕ್ ಸವಾರಿ ಮಾಡುತ್ತಾರೆ. ನಾನು ಸದಾ ಪುರುಷರಂತೇ ಇರುತ್ತಿದ್ದೆ. ಆದರೆ ಎಂದೂ ಲಿಂಗ ಬದಲಾವಣೆ ಯೋಚನೆ ಮಾಡಲಿಲ್ಲ ಎಂದು ಸಂಧು ವಿವರಿಸಿದರು. ಸಂಧು ಅವರ ಪತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದು, ಬಟಿಂಡಾದಲ್ಲಿ ಕರ್ತವ್ಯದಲ್ಲಿದ್ದಾಗ ಈಕೆಯ ಪರಿಚಯವಾಯಿತು. ನಿಯತವಾಗಿ ನಾವಿಬ್ಬರೂ ಸಂಧಿಸುತ್ತಿದ್ದೆವು ಎಂದು ಹೇಳಿದ್ದಾರೆ. "ನಾನು ಮತ್ತೊಬ್ಬ ಪುರುಷನನ್ನು ವಿವಾಹವಾಗಲು ಇಷ್ಟವಿರಲಿಲ್ಲ. ನನ್ನ ಆದ್ಯತೆ ಮಹಿಳೆಯಾಗಿದ್ದರು" ಎಂದು ಸಂಧು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X