Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಂಬಾರಿಗೆ ಬಿದ್ದ ಸತ್ತ ಇಲಿ ಸಣ್ಣದು ಎಂದ...

ಸಾಂಬಾರಿಗೆ ಬಿದ್ದ ಸತ್ತ ಇಲಿ ಸಣ್ಣದು ಎಂದ ಬೆಂಗಳೂರಿನ ಮೇಯರ್

ವಾರ್ತಾಭಾರತಿವಾರ್ತಾಭಾರತಿ27 April 2017 4:46 PM IST
share
ಸಾಂಬಾರಿಗೆ ಬಿದ್ದ ಸತ್ತ ಇಲಿ ಸಣ್ಣದು ಎಂದ ಬೆಂಗಳೂರಿನ ಮೇಯರ್

ಬೆಂಗಳೂರು,ಎ.27 : ಮಂಗಳವಾರ ನಗರದ ಶ್ರೀ ರಾಮ ಮಂದಿರ ವಾರ್ಡಿನ ತ್ಯಾಜ್ಯಗಳನ್ನು ಸಂಗ್ರಹಿಸಿ ರಸ್ತೆಗಳನ್ನು ಸ್ವಚ್ಛವಾಗಿರಿಸಿ ಬಸವಳಿದ ಪೌರ ಕಾರ್ಮಿಕರು ಹಸಿದ ಹೊಟ್ಟೆಯಲ್ಲಿ ಅಪರಾಹ್ನ ಊಟಕ್ಕೆ ಕುಳಿತಾಗ ಅಸಹ್ಯಕರವಾದ ಘಟನೆಯೊಂದು ನಡೆದಿತ್ತು. ಅವರಿಗೆಂದು ನೀಡಲಾಗಿದ್ದ ಸಾಂಬಾರಿನ ಪಾತ್ರೆಯಲ್ಲಿ ಸತ್ತ ಇಲಿಯೊಂದು ತೇಲುತ್ತಿತ್ತು. ಆದರೆ ಈ ಆಘಾತಕ್ಕಿಂತ ದೊಡ್ಡ ಆಘಾತ ಆ ಬಡ ಕಾರ್ಮಿಕರಿಗೆ ಕಾದಿತ್ತು. ಸಾಂಬಾರಿನಲ್ಲಿದ್ದ ಇಲಿ ಬಹಳ ಚಿಕ್ಕದಾಗಿತ್ತು ಎಂದು ನಗರದ ಮೇಯರ್ ಹೇಳಿ ಈ ಘಟನೆಯನ್ನ ಗೌಣವಾಗಿಸಲೆತ್ನಿಸಿದಾಗ ಅವರಿಗೆ ಏನು ಹೇಳಬೇಕೆಂದೇ ತೋಚಿರಲಿಲ್ಲ.

ಘಟನೆ ಬುಧವಾರ ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲೂ ಪ್ರತಿಧ್ವನಿಸಿತ್ತು. ಕಾರ್ಮಿಕರು ಅದಾಗಲೇ ಸಾಂಬಾರಿನಲ್ಲಿ ಇಲಿ ಪ್ರಕರಣದ ಬಗ್ಗೆ ಸ್ಥಳೀಯ ಕಾರ್ಪೊರೇಟರ್ ದೀಪಾ ನಾಗೇಶ್ ಅವರ ಗಮನ ಸೆಳೆದಿದ್ದರು. ದೀಪಾ ಅವರು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಅವರ್ಯಾರೂ ಸ್ಥಳಕ್ಕೆ ಭೇಟಿ ನೀಡುವ ಗೋಜಿಗೇ ಹೋಗಿರಲಿಲ್ಲ.

ಆಹಾರವನ್ನು ಸಿದ್ಧಪಡಿಸಿದ ಸ್ಥಳದಿಂದ ಪೂರೈಕೆ ಮಾಡುವ ಸ್ಥಳಕ್ಕೆ ಸಾಗಾಟ ಮಾಡುವಾಗ ಇಲಿ ಅದರಲ್ಲಿ ಬಿದ್ದಿರಬಹುದು ಎಂದು ಮೇಯರ್ ಜಿ ಪದ್ಮಾವತಿ ಹೇಳಿದ್ದಾರೆ.

ಪೌರ ಕಾರ್ಮಿಕರಿಗಾಗಿರುವ ಆಹಾರವನ್ನು ಶ್ರೀ ರಾಮ ಮಂದಿರ ವಾರ್ಡಿನ ವಾಟಾಳ್ ನಾಗರಾಜ್ ರಸ್ತೆಯಲ್ಲಿರುವ ವಾರ್ಡ್ ಕಚೇರಿಯ ಪಕ್ಕದ ಸಣ್ಣ ಕೊಠಡಿಯಲ್ಲಿಡಲಾಗುತ್ತದೆ. ಪೌರ ಕಾರ್ಮಿಕರ ಆಹಾರದಲ್ಲಿ ಇಲಿಯೊಂದು ಕಂಡು ಬಂದಿರುವುದು ಇದು ಎರಡನೇ ಬಾರಿ, ಕಳೆದ ತಿಂಗಳು ಬಿಸಿ ಬೇಳೆ ಬಾತ್ ಇಡಲಾಗಿದ್ದ ಪಾತ್ರೆಯಲ್ಲಿ ಕೂಡ ಇಲಿ ಕಂಡು ಬಂದಿತ್ತು. ಆದರೆ ಅಷ್ಟೊತ್ತಿಗಾಗಲೇ ಕಾರ್ಮಿಕರು ಆಹಾರ ಸೇವಿಸಿಯಾಗಿತ್ತು. ಮಂಗಳವಾರದ ಘಟನೆಯ ನಂತರ ಕಾರ್ಮಿಕರು ತಾವೇ ಹಣ ತೆತ್ತು ಹತ್ತಿರದ ಹೊಟೇಲಿನಿಂದ ಸಾಂಬಾರ್ ತರಿಸಿದ್ದರು. ಬುಧವಾರ ಅವರಿಗೆ ಸಿದ್ಧಪಡಿಸಲಾಗಿದ್ದ ಪಲಾವ್ ತಿನ್ನಲು ಅವರು ನಿರಾಕರಿಸಿದ್ದರೆನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X