Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗುಜರಾತ್ ‘ಲಯನ್ಸ್’ ಗರ್ಜನೆಗೆ ಆರ್‌ಸಿಬಿ...

ಗುಜರಾತ್ ‘ಲಯನ್ಸ್’ ಗರ್ಜನೆಗೆ ಆರ್‌ಸಿಬಿ ತತ್ತರ

ವಾರ್ತಾಭಾರತಿವಾರ್ತಾಭಾರತಿ27 April 2017 11:55 PM IST
share
ಗುಜರಾತ್ ‘ಲಯನ್ಸ್’ ಗರ್ಜನೆಗೆ ಆರ್‌ಸಿಬಿ ತತ್ತರ

ಬೆಂಗಳೂರು, ಎ.27: ಫಿಂಚ್(72 ರನ್) ಹಾಗೂ ನಾಯಕ ಸುರೇಶ್ ರೈನಾ(ಅಜೇಯ 34)ಮೂರನೆ ವಿಕೆಟ್‌ಗೆ ಸೇರಿಸಿದ 92 ರನ್ ಜೊತೆಯಾಟದ ನೆರವಿನಿಂದ ಗುಜರಾತ್ ಲಯನ್ಸ್ ತಂಡ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ವಿರುದ್ಧದ ಐಪಿಎಲ್ ಪಂದ್ಯವನ್ನು 7 ವಿಕೆಟ್‌ಗಳ ಅಂತರದಿಂದ ಗೆದ್ದುಕೊಂಡಿದೆ.

ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ನ 31ನೆ ಪಂದ್ಯದ ಗೆಲುವಿಗೆ 135 ರನ್ ಸುಲಭ ಗುರಿ ಪಡೆದಿದ್ದ ಗುಜರಾತ್ ತಂಡ 13.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 135 ರನ್ ಗಳಿಸಿ ಜಯಭೇರಿ ಬಾರಿಸಿತು. ಫಿಂಚ್(72ರನ್, 34 ಎಸೆತ, 5 ಬೌಂಡರಿ, 6 ಸಿಕ್ಸರ್) ಹಾಗೂ ರೈನಾ(ಅಜೇಯ 34, 30 ಎಸೆತ, 4 ಬೌಂಡರಿ, 1 ಸಿಕ್ಸರ್)ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಆಸರೆಯಾದರು.

ಫಿಂಚ್ ಔಟಾದ ಬಳಿಕ ರವೀಂದ್ರ ಜಡೇಜರೊಂದಿಗೆ 4ನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 22ರನ್ ಸೇರಿಸಿದ ರೈನಾ ಇನ್ನೂ 37 ಎಸೆತಗಳು ಬಾಕಿ ಇರುವಾಗಲೇ ತಂಡಕ್ಕೆ ಗೆಲುವು ತಂದರು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿಯನ್ನು ಕೇವಲ 134 ರನ್‌ಗೆ ಕಟ್ಟಿಹಾಕಲು ನೆರವಾದ ಆ್ಯಂಡ್ರೂ ಟೈ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಆರ್‌ಸಿಬಿ 134 ರನ್‌ಗೆ ಆಲೌಟ್: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆರ್‌ಸಿಬಿ ತಂಡ ಲಯನ್ಸ್‌ನ ವೇಗದ ಬೌಲರ್ ಆ್ಯಂಡ್ರೂ ಟೈ (3-12)ಹಾಗೂ ಸ್ಪಿನ್ನರ್ ರವೀಂದ್ರ ಜಡೇಜ(2-28) ಸಂಘಟಿಸಿದ್ದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ 20 ಓವರ್‌ಗಳಲ್ಲಿ 134 ರನ್ ಗಳಿಸಿ ಆಲೌಟಾಯಿತು.

 ಕ್ರಿಸ್ ಗೇಲ್‌ರೊಂದಿಗೆ ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ಔಟಾದ ಬೆನ್ನಿಗೆ ಗೇಲ್ (8)ವಿಕೆಟ್ ಒಪ್ಪಿಸಿದರು. ಹೆಡ್(0) ಖಾತೆ ತೆರೆಯದೇ ಪೆವಿಲಿಯನ್ ಸೇರಿದರು. ಎಬಿಡಿ ವಿಲಿಯರ್ಸ್ ಕೇವಲ 5 ರನ್ ಗಳಿಸಿ ರನೌಟಾದರು. 31 ರನ್ ಗಳಿಸಿ ತಂಡಕ್ಕೆ ಆಸರೆಯಾಗುವ ಭರವಸೆ ಮೂಡಿಸಿದ್ದ ಕೇದಾರ್ ಜಾಧವ್‌ಗೆ ಜಡೇಜ ಪೆವಿಲಿಯನ್ ಹಾದಿ ತೋರಿಸಿದರು. ಆಗ ಆರ್‌ಸಿಬಿ 60 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

ನೇಗಿ ಹಾಗೂ ಮನ್‌ದೀಪ್ 6ನೆ ವಿಕೆಟ್‌ಗೆ 40 ರನ್ ಸೇರಿಸಿ ಇನಿಂಗ್ಸ್ ರಿಪೇರಿಗೆ ಯತ್ನಿಸಿದರು. ಮನ್‌ದೀಪ್(8) ವಿಕೆಟ್ ಕಬಳಿಸಿದ ಟೈ ಈ ಜೋಡಿಯನ್ನು ಬೇರ್ಪಡಿಸಿದರು.

ಆರ್‌ಸಿಬಿ ಪರ ಪವನ್ ನೇಗಿ(32) ಅಗ್ರ ಸ್ಕೋರರ್ ಎನಿಸಿಕೊಂಡರು. ಲಯನ್ಸ್ ಪರವಾಗಿ ಥಾಂಪಿ(1-34), ಸೋನಿ(1-28), ಹಾಗೂ ಫಾಕ್ನರ್(1-15) ತಲಾ ಒಂದು ವಿಕೆಟ್ ಪಡೆದರು.

ಸಂಕ್ಷಿಪ್ತ ಸ್ಕೋರ್

ರಾಯಲ್ ಚಾಲೆಂಜರ್ಸ್‌ ಬೆಂಗಳೂರು: 20 ಓವರ್‌ಗಳಲ್ಲಿ 134 ರನ್‌ಗೆ ಆಲೌಟ್

(ನೇಗಿ 32, ಜಾಧವ್ 31, ಆ್ಯಂಡ್ರೂ ಟೈ 3-12, ಜಡೇಜ 2-28)

ಗುಜರಾತ್ ಲಯನ್ಸ್: 13.5 ಓವರ್‌ಗಳಲ್ಲಿ 135/3

(ಫಿಂಚ್ 72, ರೈನಾ ಅಜೇಯ 34, ಬದ್ರೀ 2-29)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X