Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ನಗರದ ಆವರಣ ಗೋಡೆಗಳಲ್ಲಿ...

ಮಂಗಳೂರು ನಗರದ ಆವರಣ ಗೋಡೆಗಳಲ್ಲಿ ಕಲಾವಿದರ ರಂಗು

ಜಾಗೃತಿಯ ಜೊತೆಗೆ ಕಲೆಯ ಅನಾವರಣ

ವಾರ್ತಾಭಾರತಿವಾರ್ತಾಭಾರತಿ28 April 2017 4:00 PM IST
share
ಮಂಗಳೂರು ನಗರದ ಆವರಣ ಗೋಡೆಗಳಲ್ಲಿ ಕಲಾವಿದರ ರಂಗು

ಮಂಗಳೂರು, ಎ.28: ಆವರಣ ಗೋಡೆಗಳನ್ನು ವರ್ಣ ಚಿತ್ತಾರದ ಮೂಲಕ ಶೃಂಗರಿಸುವ ಯುವ ಚಿತ್ರ ಕಲಾ ವಿದ್ಯಾರ್ಥಿಗಳ ತಂಡವೊಂದು ನಗರದ ಸೌಂದರ್ಯಕ್ಕೆ ಮೆರುಗು ನೀಡುತ್ತಿದೆ. ಜೊತೆಗೆ ಈ ಚಿತ್ರಗಳ ಮೂಲಕ ನಾಗರಿಕ ಜಾಗೃತಿಯ ಸಂದೇಶವನ್ನು ನೀಡುತ್ತಿದೆ.

ನಗರದ ಮಹಾಲಸಾ ಕಲಾ ಶಾಲೆಯ ಯುವ ಚಿತ್ರಕಲಾ ಪದವಿಧರರ ತಂಡ ‘ಮಂಗಳೂರು ಕಂಟೆಂಪರರಿ ಪೈಂಟರ್ಸ್‌ ಗ್ರೂಪ್’ ನಗರದ ಪೊಲೀಸ್ ಗ್ರೌಂಡ್ ಬಳಿ, ಪಾಂಡೇಶ್ವರದ ಕಾರ್ಪೋರೇಶನ್ ಬ್ಯಾಂಕ್ ಬಳಿಯ ಆವರಣ ಗೋಡೆಯ ಮೇಲೆ ಸುಡುವ ಬಿಸಿಲಿನ ಬೇಗೆಯ ನಡುವೆಯೂ ವರ್ಣಚಿತ್ರಗಳನ್ನು ಅನಾವರಣ ಗೊಳಿಸಿ ನಗರದ ಸೌಂದರ್ಯ ಹೆಚ್ಚಿಸಿದ್ದಾರೆ. ಸರಳವಾಗಿ ಜನರಿಗೆ ಅರ್ಥವಾಗುವ ಈ ಚಿತ್ರಗಳು ತಕ್ಷಣ ನೋಡುಗರ ಗಮನ ಸೆಳೆಯುತ್ತವೆ. ಈ ಚಿತ್ರಗಳಲ್ಲಿ ಸಮಕಾಲೀನ ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಚಿತ್ರಗಳನ್ನು ಕುಂಚದಿಂದ ಚಿತ್ರಿಸುತ್ತಿದ್ದಾರೆ.

ಈ ತಂಡದ 10ರಿಂದ 12 ಯುವ ಕಲಾವಿದರು ಚಿತ್ರ ರಚನೆಯಲ್ಲಿ ತೊಡಗಿದ್ದಾರೆ. ಎಪ್ರಿಲ್ 21ರಿಂದ ನಗರದ ಆವರಣ ಗೊಡೆಗಳಲ್ಲಿ ಚಿತ್ರ ರಚನೆಯಲ್ಲಿ ತೊಡಗಿರುವ ಈ ತಂಡ ಇನ್ನೂ ಸುಮಾರು 10 ದಿನಗಳ ಕಾಲ ಚಿತ್ರ ರಚನೆಯಲ್ಲಿ ತೊಡಗುತ್ತೇವೆ ಎನ್ನುತ್ತಿದ್ದಾರೆ. ನಗರದಲ್ಲಿ ಪೋಸ್ಟರ್‌ಗಳಿಂದ ತುಂಬಿರುತ್ತಿದ್ದ ಗೋಡೆಗಳನ್ನು ಸ್ವಚ್ಛಗೊಳಿಸಿ ಅದರಲ್ಲಿ ರಸ್ತೆ ಸುರಕ್ಷತೆ, ಸರಗಳ್ಳರ ಬಗ್ಗೆ ಎಚ್ಚರಿಕೆಯ ಸಂದೇಶ, ಮಾದಕ ದ್ರವ್ಯ ವಿರುದ್ಧ ಜಾಗೃತಿ, ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಜಾಗೃತಿ, ನೀರು ಉಳಿಸುವ ಸಂದೇಶಗಳು ಇವರ ಗೋಡೆ ಚಿತ್ರಗಳಲ್ಲಿ ಅಡಗಿವೆ.

ಯುವ ಕಲಾವಿದ ಸುಬ್ರಹ್ಮಣ್ಯರ ಪ್ರಕಾರ ‘‘ನಾವು ಈಗಾಗಲೇ ದೃಶ್ಯಕಲಾ ವಿಭಾಗದಲ್ಲಿ ಪದವಿ ವ್ಯಾಸಂಗ ಮುಗಿಸಿ ತಂಡವೊಂದನ್ನು ರಚಿಸಿದ್ದೇವೆ. ಈ ತಂಡದ ಮೂಲಕ ಪ್ರಥಮ ಬಾರಿಗೆ ನಗರದ ಆವರಣಗೋಡೆಗಳಲ್ಲಿ ಚಿತ್ರ ರಚಿಸುವ ಕೆಲಸದಲ್ಲಿ ತೊಡಗಿದ್ದೇವೆ. ಕಾರ್ಪೊರೇಶನ್ ಪ್ರಾಯೋಜಕತ್ವದಲ್ಲಿ ನಗರದ ಪಾಂಡೇಶ್ವರ ಪ್ರದೇಶದಲ್ಲಿ ಚಿತ್ರ ರಚಿಸುತ್ತಿದ್ದೇವೆ. ಜೊತೆಗೆ ಕೆಲವು ಸಂದೇಶಗಳನ್ನು ಜನರಿಗೆ ಈ ಚಿತ್ರದ ಮೂಲಕ ನೀಡುತ್ತಿದ್ದೇವೆ. ನಮ್ಮ ತಂಡದಲ್ಲಿ ಅಶ್ವಿನ್, ವಿನೋದ್, ಉಮೇಶ್ .ಕೆ, ರಕ್ಷಿತ್, ಉಮೇಶ್ ವಿ.ಎಂ, ಪ್ರಜ್ವಲ್, ರಾಕೇಶ್, ಜಾನಕಿ, ಜಯಲಕ್ಷ್ಮೀ, ಸುಬ್ರಹ್ಮಣ್ಯ, ನಿತಿನ್, ರೂಪೇಶ್ ಮೊದಲಾದವರು ತಂಡದಲ್ಲಿದ್ದಾರೆ. ನಮಗಿದು ಹೊಸ ಅನುಭವ ’’ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X