Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಾಖಲೆ ಸರಿಯಿದ್ದಲ್ಲಿ 1 ವಾರದಲ್ಲಿ ಮನೆ...

ದಾಖಲೆ ಸರಿಯಿದ್ದಲ್ಲಿ 1 ವಾರದಲ್ಲಿ ಮನೆ ನಿರ್ಮಾಣ ಪರವಾನಿಗೆ: ಮೇಯರ್ ಕವಿತಾ ಸನಿಲ್

ತಪ್ಪಿದ್ದಲ್ಲಿ ಅಧಿಕಾರಿಯೇ ಜವಾಬ್ದಾರಿ: ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 April 2017 4:09 PM IST
share
ದಾಖಲೆ ಸರಿಯಿದ್ದಲ್ಲಿ 1 ವಾರದಲ್ಲಿ ಮನೆ ನಿರ್ಮಾಣ ಪರವಾನಿಗೆ: ಮೇಯರ್ ಕವಿತಾ ಸನಿಲ್

ಮಂಗಳೂರು, ಎ.28: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿ ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಒಂದು ವಾರದೊಳಗೆ ಅವರಿಗೆ ಪರವಾನಿಗೆ ಒದಗಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿಸಲಾಗುವುದು ಎಂದು ಮೇಯರ್ ಕವಿತಾ ಸನಿಲ್ ಎಚ್ಚರಿಕೆ ನೀಡಿದ್ದಾರೆ.

ಮಹಾನಗರ ಪಾಲಿಕೆ ಕಚೇರಿಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಾಲಿಕೆ ಕಚೇರಿಯಲ್ಲಿ ಜನನ- ಮರಣ ಪ್ರಮಾಣ ಪತ್ರ, ನಗರ ಅಭಿವೃದ್ಧಿ ಹಾಗೂ ರೋಜ್‌ಗಾರ್ ವಿಭಾಗಗಳಲ್ಲಿ ಬ್ರೋಕರ್‌ಗಳ ಹಾವಳಿಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಯಾವುದೇ ಅರ್ಜಿ, ಪರವಾನಿಗೆಯನ್ನು ಸಂಬಂಧಪಟ್ಟವರ ಕೈಗೆ ಮಾತ್ರವೇ ನೀಡಬೇಕು. ಯಾವುದೇ ಕಾರಣಕ್ಕೂ ಬ್ರೋಕರ್‌ಗಳಿಗೆ ಅವಕಾಶ ನೀಡಬಾರದು ಎಂಬುದಾಗಿ ಪರಿಷತ್ತಿನಲ್ಲಿ ನಿರ್ಣಯಿಸಲಾಗುತ್ತಿದೆ ಎಂದು ಮೇಯರ್ ಆದೇಶಿಸಿದರು.

ನಗರ ಯೋಜನೆ ವಿಭಾಗದಲ್ಲಿ ಪರವಾನಿಗೆ ಹಾಗೂ ಮನೆ ನಿರ್ಮಾಣ ಪೂರ್ಣಗೊಳಿಸಿದ ಬಗ್ಗೆ ಪ್ರಮಾಣ ಪತ್ರ ಪಡೆಯಬೇಕಾದ್ದಲ್ಲಿ ಜನಸಾಮಾನ್ಯರು ಅಲೆದಾಡುವಂತಹ ಪರಿಸ್ಥಿತಿ ಇದೆ. ದಲ್ಲಾಳಿಗಳ ಮೂಲಕ ಕಾರ್ಯ ಸುಗಮವಾಗಿ ನಡೆಯುತ್ತದೆ ಎಂದು ವಿಪಕ್ಷ ಸದಸ್ಯ ಪ್ರೇಮಾನಂದ ಶೆಟ್ಟಿ ಸಭೆಯಲ್ಲಿ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಮೇಯರ್‌ ಈ ಎಚ್ಚರಿಕೆ ನೀಡಿದರು.

ಎಎಂಆರ್‌ನಲ್ಲಿರುವುದು 3.75 ಮೀಟರ್ ನೀರು!

ಕಳೆದ ಒಂದೂವರೆ ತಿಂಗಳಿನಲ್ಲಿ ಮೇಯರ್‌ ಏಕಪಕ್ಷೀಯವಾಗಿ ನೀರಿನ ರೇಶನಿಂಗ್ ವ್ಯವಸ್ಥೆ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉದ್ಭವವಾಗಿತ್ತು. ಇದೀಗ ಮೇಯರ್‌ ಮತ್ತೆ ಇಂದಿನಿಂದ ಪ್ರತಿದಿನ ನೀರು ಬಿಡುವುದಾಗಿ ಹೇಳಿಕೆ ನೀಡಿದ್ದಾರೆ. ಹಾಗಿದ್ದಲ್ಲಿ ಕಳೆದ ಒಂದೂವರೆ ತಿಂಗಳು ರೇಶನಿಂಗ್ ಮಾಡುವ ಉದ್ದೇಶ ಏನಿತ್ತು. ಮನಪಾದ ತುಂಬೆ ಅಣೆಕಟ್ಟಿನಲ್ಲಿರುವ ನೀರಿನ ಸಂಗ್ರಹಣೆ ಕುರಿತಂತೆಯೂ ನಗರ ಪಾಲಿಕೆಯಲ್ಲಿ ಸ್ಪಷ್ಟವಾದ ಮಾಹಿತಿ ಇಲ್ಲ. ಮಾತ್ರವಲ್ಲದೆ ಕಳೆದ ವರ್ಷ ನೀರಿನ ಸಮಸ್ಯೆಯ ಹಿನ್ನೆಲೆಯಲ್ಲಿ 1.43 ಕೋಟಿ ರೂ. ಹಣ ಪೋಲಾಗಿದೆ ಎಂದು ಮೇಯರ್‌ ಹೇಳಿಕೆ ನೀಡಿದ್ದಾರೆ ಎಂದು ವಿಪಕ್ಷ ಸದಸ್ಯರಾದ ಸುಧೀರ್ ಶೆಟ್ಟಿ ಆರೋಪಿಸಿದರು.

ಇದನ್ನು ಬೆಂಬಲಿಸಿ ದಯಾನಂದ ಶೆಟ್ಟಿ, ಪ್ರೇಮಾನಂದ ಶೆಟ್ಟಿ ಮೊದಲಾದವರು ಆಕ್ಷೇಪ ವ್ಯಕ್ತಪಡಿಸಿದರು. ಈ ನಡುವೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಕೆಲ ನಿಮಿಷಗಳ ಕಾಲ ಮಾತಿನ ಚಕಮಕಿ ನಡೆಯಿತು.

ಈ ಸಂದರ್ಭ ಪ್ರತಿಕ್ರಿಯಿಸಿದ ಮೇಯರ್ ಕವಿತಾ ಸನಿಲ್, ಕಳೆದ ಬಾರಿ ನೀರಿನ ಸಮಸ್ಯೆಯಿಂದಾಗಿ ಅಷ್ಟೊಂದು ಹಣ ವಿವಿಧ ರೀತಿಯಲ್ಲಿ ಖರ್ಚು ಮಾಡಲಾಗಿದೆ ಎಂದು ಹೇಳಿದ್ದೇನೆ. ಈ ಬಾರಿ ಎಪ್ರಿಲ್ ಮೇ ತಿಂಗಳಲ್ಲಿ ನೀರಿನ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ಹಿರಿಯ ಅಧಿಕಾರಿಗಳು ಹಾಗೂ ಆಯುಕ್ತರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ರೇಶನಿಂಗ್ ವ್ಯವಸ್ಥೆಯನ್ನು ವಿಭಿನ್ನ ರೀತಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಳ್ಳಲಾಗಿತ್ತು. ಇದೀಗ ಜೂನ್‌ನಲ್ಲಿ ಮಳೆ ಬರುವ ಸಾಧ್ಯತೆ ಇರುವುದರಿಂದ ಈಗ ಲಭ್ಯವಿರುವ ನೀರಿನ ಸಂಗ್ರಹದ ಆಧಾರದಲ್ಲಿ ಪ್ರತಿನಿತ್ಯ ನೀರು ಪೂರೈಕೆಗೆ ಕ್ರಮ ವಹಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಹಿರಿಯ ಅಧಿಕಾರಿ ಲಿಂಗೇಗೌಡ ಮಾತನಾಡಿ, ಈ ಬಾರಿ ಮಾರ್ಚ್ 19ರಿಂದ ರೇಶನಿಂಗ್ ವ್ಯವಸ್ಥೆ ಆರಂಭಿಸಲಾಗಿದೆ. ಆ ಸಂದರ್ಭ ತುಂಬೆ ಅಣೆಕಟ್ಟಿನಲ್ಲಿ 4.5 ಮೀಟರ್ ನೀರು ಹಾಗೂ ಎಎಂಆರ್ ಅಣೆಕಟ್ಟಿನಲ್ಲಿ 6.5 ಮೀಟರ್ ನೀರಿನ ಲಭ್ಯತೆ ಇತ್ತು. ಈ ನಡುವೆ ಬಂಟ್ವಾಳ, ಭಾಗದಲ್ಲಿ ಅಲ್ಪ ಪ್ರಮಾಣದ ಮಳೆಯಾಗಿ ಸುಮಾರು 22 ಸೆ.ಮೀ.ನಷ್ಟು ನೀರು ಅಣೆಕಟ್ಟಿನಲ್ಲಿ ಹೆಚ್ಚಳವಾಗಿದೆ. ಹಾಗಾಗಿ ಪ್ರಸ್ತುತ ತುಂಬೆ ಅಣೆಕಟ್ಟಿನಲ್ಲಿ 4.98 ಮೀಟರ್ ಹಾಗೂ ಎಎಂಆರ್ ಅಣೆಕಟ್ಟಿನಲ್ಲಿ 3.75 ಮೀಟರ್ ನೀರು ಸಂಗ್ರಹವಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್‌ನ ಸದಸ್ಯ ಐವನ್ ಡಿಸೋಜ, ಉಪ ಮೇಯರ್ ರಜನೀಶ್, ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಅಬ್ದುಲ್ ರವೂಫ್, ನಾಗವೇಣಿ, ಪ್ರತಿಭಾ ಕುಳಾಯಿ, ಸಬಿತಾ ಮಿಸ್ಕಿತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X