Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬರಗಾಲ:...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬರಗಾಲ: ನೀರು, ಮೇವಿಲ್ಲದೆ ಸಂಕಷ್ಟದಲ್ಲಿ ಜಾನುವಾರುಗಳು

ಅಝೀಝ್ ಕಿರುಗುಂದಅಝೀಝ್ ಕಿರುಗುಂದ28 April 2017 4:21 PM IST
share
ಚಿಕ್ಕಮಗಳೂರು ಜಿಲ್ಲೆಯಲ್ಲಿ ಬರಗಾಲ: ನೀರು, ಮೇವಿಲ್ಲದೆ ಸಂಕಷ್ಟದಲ್ಲಿ ಜಾನುವಾರುಗಳು

ಚಿಕ್ಕಮಗಳೂರು, ಎ.28: ಚಿಕ್ಕಮಗಳೂರು ಜಿಲ್ಲೆ ಅಕ್ಷರಶ: ಬರಗಾಲಕ್ಕೆ ತುತ್ತಾಗಿದ್ದು, ಒಂದು ಕಡೆ ಜನರು ಹನಿ ನೀರಿಗಾಗಿ ಪರಿತಪಿಸುತ್ತಿದ್ದರೆ, ಮತ್ತೊಂದೆಡೆ ಜಾನುವಾರುಗಳು ಮೇವಿಗಾಗಿ ಪರದಾಡುತ್ತಿವೆ.

ಪ್ರಾಕೃತಿಕ ಸಮೃದ್ಧಿಗೆ ಹೆಸರಾಗಿದ್ದ ಚಿಕ್ಕಮಗಳೂರು ಜಿಲ್ಲೆ ಬರಗಾಲಪೀಡಿತ ಪ್ರದೇಶವಾಗಿದೆ. ಜಿಲ್ಲೆಯಲ್ಲಿ ಜನರು ಕುಡಿಯುವ ನೀರಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಕುಡಿಯುವ ನೀರು ಪೂರೈಕೆ ಜಿಲ್ಲಾಡಳಿತಕ್ಕೆ ಸವಾಲಿನದ್ದಾಗಿ ಪರಿಣಮಿಸಿದೆ. ಅರಣ್ಯಗಳಲ್ಲಿ ಕಾಡು ಪ್ರಾಣಿಗಳು ಕುಡಿಯುವ ನೀರು ಸಿಗದೆ ನಾಡಿನೊಳಗೆ ಲಗ್ಗೆ ಇಡುತ್ತಿದೆ.

ಮಳೆ ಬೀಳದ ಪ್ರದೇಶಗಳಲ್ಲಿ ಹಸಿರು ಹುಲ್ಲು ಕಣ್ಮರೆಯಾಗಿದ್ದು, ರೈತರು ಜಾನುವಾರುಗಳನ್ನು ಸಂತೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಕೆಲವು ರೈತರು ಹೈನುಗಾರಿಕೆ ಆದಾಯದ ಮೂಲ ಕಂಡುಕೊಂಡಿದ್ದ ಜಾನುವಾರುಗಳನ್ನು ಕಳೆದುಕೊಳ್ಳುತ್ತಿದ್ದಾರೆ. ತಮ್ಮ ಜಾನುವಾರುಗಳನ್ನು ಬದುಕಿಸಿಕೊಳ್ಳಲು ಪರ್ಯಾಯ ಮೇವಿನ ಮೊರೆ ಹೋಗುತ್ತಿದ್ದಾರೆ. ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದ ರೈತರು ತಮ್ಮ ಹಸುಗಳನ್ನು ಉಳಿಸಿಕೊಳ್ಳಲು ಅಡಿಕೆ ಹಾಳೆಯನ್ನು ಹಸುಗಳಿಗೆ ಹಾಕಿ ಹೊಟ್ಟೆ ತುಂಬಿಸುತ್ತಿದ್ದಾರೆ. ಅಡಿಕೆ ಹಾಳೆಗಳನ್ನು ಹಸುಗಳಿಗೆ ಸತತವಾಗಿ ಹಾಕುವುದರಿಂದ ಹಸುಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಸಹ ಬೀರುತ್ತದೆ ಎನ್ನುವ ಆತಂಕವೂ ರೈತರಲ್ಲಿದೆ.

ಇಂತಹ ಸಮಸ್ಯೆಗಳ ಬಗ್ಗೆ ಅರಿವಿರದ್ದರೂ ಜಿಲ್ಲಾಡಳಿತ ಈ ಭಾಗದಲ್ಲಿ ಮೇವು ಕೇಂದ್ರ ತರೆಯುವ ಅಥವಾ ರೈತರಿಗೆ ಮೇವು ಪೂರೈಕೆ ಮಾಡುವಲ್ಲಿ ವಿಫಲವಾಗಿದ್ದು ರೈತರು ಜಿಲ್ಲಾಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ನಿಡಘಟ್ಟ, ಕಳಸಾಪುರ, ಬೆಳವಾಡಿ ಸೇರಿದಂತೆ ಲಕ್ಯಾ ಹೋಬಳಿಯಲ್ಲಿ ಹಸುಗಳನ್ನು ಸಾಕುವುದು ರೈತರಿಗೆ ಗಂಭೀರ ಸಮಸ್ಯೆಯಾಗಿ ಮಾರ್ಪಟ್ಟಿದೆ. ಜಿಲ್ಲಾಡಳಿತ ಬರ ನಿರ್ವಹಣೆಗೆಂದು ಸರ್ಕಾರ ಬಿಡುಗಡೆ ಮಾಡಿದ ಹಣವನ್ನು ಬಳವಸಿಕೊಂಡು ಈಗಲಾದರೂ ಜಾನುವಾರುಗಳ ಹೊಟ್ಟೆ ತುಂಬಿಸುವ ಜೊತೆಗೆ ಬರದಲ್ಲೂ ರೈತರಿಗೆ ಆಸರೆಯಾಗುತ್ತಿರುವ ಹಸುಗಳಿಗೆ ಮೇವನ್ನು ಒದಗಿಸುವ ಮನಸ್ಸು ಮಾಡದಿದ್ದರೆ ಬರದಿಂದ ಬಳಲಿರುವ ರೈತರು ಮತ್ತಷ್ಟು ಕಂಗಾಲಾಗುವುದರಲ್ಲಿ ಅನುಮಾನವಿಲ್ಲ

ಈ ಬಾರಿ ಮಳೆ ಬೀಳುವವರೆಗೆ ಹಸುಗಳು ಹಾಲು ಕೊಡದಿದ್ದರೂ ಪರವಾಗಿಲ್ಲ. ಬರಗಾಲದಲ್ಲಿ ಹಸುಗಳನ್ನು ಸಾಕಲು ಕಷ್ಟವಾಗುತ್ತಿದೆ. ಮೇವಿನ ಕೊರತೆ ಇರುವುದರಿಂದ ದಿನನಿತ್ಯ ಅಡಿಕೆ ಹಾಳೆಯನ್ನು ತಂದು ಹಸುಗಳ ಹೊಟ್ಟೆ ತುಂಬಿಸಬೇಕಾಗಿದೆ. ಆದರೆ ಅಡಿಕೆ ತೋಟದ ಮಾಲಕರು ಅಡಿಕೆ ಹಾಳೆಯನ್ನು ತೆಗೆದುಕೊಂಡು ಹೋಗುವುದಕ್ಕು ಬಿಡುತ್ತಿಲ್ಲ

-ಗುರುಶಾಂತಪ್ಪ, ರೈತ, ಚಿಕ್ಕಮಗಳೂರು.

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X