Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ನಲ್ಲಿ ಕೈದಿಗಳ ಉಪವಾಸ...

ಇಸ್ರೇಲ್‌ನಲ್ಲಿ ಕೈದಿಗಳ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಫೆಲೆಸ್ತೀನ್ ಬಂದ್

ವಾರ್ತಾಭಾರತಿವಾರ್ತಾಭಾರತಿ28 April 2017 9:01 PM IST
share
ಇಸ್ರೇಲ್‌ನಲ್ಲಿ ಕೈದಿಗಳ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಫೆಲೆಸ್ತೀನ್ ಬಂದ್

ರಮಲ್ಲಾ (ಫೆಲೆಸ್ತೀನ್), ಎ. 28: ಇಸ್ರೇಲ್‌ನ ಜೈಲುಗಳಲ್ಲಿರುವ ಫೆಲೆಸ್ತೀನ್ ಕೈದಿಗಳು 11 ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಫೆಲೆಸ್ತೀನೀಯರು ಗುರುವಾರ ದೇಶವ್ಯಾಪಿ ಬಂದ್ ಆಚರಿಸಿದರು.ಐವತ್ತು ವರ್ಷಗಳಿಗೂ ಅಧಿಕ ಅವಧಿಯಿಂದ ಇಸ್ರೇಲ್ ಆಕ್ರಮಿಸಿಕೊಂಡಿರುವ ಪಶ್ಚಿಮ ದಂಡೆಯಾದ್ಯಂತ ಅಂಗಡಿಗಳು ಮುಚ್ಚಿದ್ದವು ಹಾಗೂ ರಸ್ತೆಗಳು ನಿರ್ಜನವಾಗಿದ್ದವು.

ರಮಲ್ಲಾದಲ್ಲಿ ನೂರಾರು ಮಂದಿ ಪ್ರತಿಭಟನಾ ಮೆರವಣಿಗೆಗಳನ್ನು ಏರ್ಪಡಿಸಿದರು.ಇಸ್ರೇಲಿ ಸೇನಾ ತಪಾಸಣಾ ಠಾಣೆಯೊಂದರ ದಿಕ್ಕಿನತ್ತ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಸಾಗಿದರು. ಆದರೆ, ಅವರು ಅಲ್ಲಿಗೆ ತಲುಪುವ ಸಾಕಷ್ಟು ಮೊದಲೇ ಫೆಲೆಸ್ತೀನಿ ಭದ್ರತಾ ಪಡೆಗಳು ಅವರನ್ನು ತಡೆದವು.

ಅವರ ಪೈಕಿ ಕೆಲವರು ಫೆಲೆಸ್ತೀನ್ ಪೊಲೀಸರನ್ನು ನಿವಾರಿಸಿಕೊಂಡು ಇಸ್ರೇಲ್ ಗಡಿ ಠಾಣೆಯತ್ತ ಧಾವಿಸಿ ಇಸ್ರೇಲಿ ಸೈನಿಕರತ್ತ ಕಲ್ಲು ತೂರಾಟ ನಡೆಸಿದರು. ಇಸ್ರೇಲ್ ಸೈನಿಕರು ಅಶ್ರುವಾಯು ಸಿಡಿಸಿ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿ ಪ್ರತಿಭಟನಾಕಾರರನ್ನು ಚದುರಿಸಿದರು.

ರಮಲ್ಲಾದ ಹೊರವಲಯದಲ್ಲಿರುವ ಇಸ್ರೇಲ್‌ನ ಸಾಗೋಟ್ ಬಡಾವಣೆಯ ಸಮೀಪ ಪ್ರತಿಭಟನಕಾರರು ಮತ್ತು ಇಸ್ರೇಲ್ ಸೈನಿಕರ ನಡುವೆ ಘರ್ಷಣೆಗಳು ನಡೆದವು. ಯಾರಿಗೂ ಗಂಭೀರ ಪ್ರಮಾಣದಲ್ಲಿ ಗಾಯವಾಗಿಲ್ಲ.

‘‘ದೇಶವ್ಯಾಪಿ ಬಂದ್ ಇತ್ತೀಚಿನ ವರ್ಷಗಳಲ್ಲಿ ಹಿಂದೆಂದೂ ನಡೆದಿಲ್ಲ’’ ಎಂದು ಫೆಲೆಸ್ತೀನಿ ವಾಣಿಜ್ಯ ಸಂಸ್ಥೆಯ ಮುಖ್ಯಸ್ಥ ಖಲೀಲ್ ರಝಾಕ್ ಹೇಳುತ್ತಾರೆ.
‘‘ಸಾರಿಗೆ, ಬೇಕರಿ, ಅಂಗಡಿಗಳು ಸೇರಿದಂತೆ ಫೆಲೆಸ್ತೀನ್‌ನ ಎಲ್ಲ ಉದ್ದಿಮೆಗಳು ಬಂದ್‌ನಲ್ಲಿ ಭಾಗವಹಿಸಿವೆ’’ ಎಂದರು.


ನೀರು, ಉಪ್ಪು ಮಾತ್ರ ಸೇವಿಸುತ್ತಿರುವ ಕೈದಿಗಳು

ಕುಟುಂಬ ಸದಸ್ಯರ ಭೇಟಿಗೆ ಹೆಚ್ಚಿನ ಅವಕಾಶ ನೀಡಬೇಕು ಹಾಗೂ ಜೈಲಿನ ಆವರಣಗಳಲ್ಲಿ ಕೈದಿಗಳಿಗೆ ಟೆಲಿಫೋನ್ ಸಂಪರ್ಕ ಒದಗಿಸಬೇಕು ಎನ್ನುವುದು ಫೆಲೆಸ್ತೀನ್ ಕೈದಿಗಳ ಪ್ರಮುಖ ಬೇಡಿಕೆಯಾಗಿದೆ.

ಎಪ್ರಿಲ್ 17ರಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಸುಮಾರು 1,500 ಫೆಲೆಸ್ತೀನ್ ಕೈದಿಗಳು ಭಾಗವಹಿಸುತ್ತಿದ್ದಾರೆ ಎಂದು ಫೆಲೆಸ್ತೀನ್ ಅಧಿಕಾರಿಗಳು ಹೇಳುತ್ತಾರೆ.

ಮುಷ್ಕರ ನಿರತ ಕೈದಿಗಳು ನೀರು ಮತ್ತು ಉಪ್ಪು ಮಾತ್ರ ಸೇವಿಸುತ್ತಿದ್ದಾರೆ. ಸುಮಾರು 6,500 ಫೆಲೆಸ್ತೀನ್ ಕೈದಿಗಳು ಇಸ್ರೇಲ್‌ನ ಜೈಲುಗಳಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X