Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಂಧೂತಾಯಿ ಸಪ್ಕಾಳ್ ಅವರಿಗೆ ಬಸವ...

ಸಿಂಧೂತಾಯಿ ಸಪ್ಕಾಳ್ ಅವರಿಗೆ ಬಸವ ಪುರಸ್ಕಾರ: ಉಮಾಶ್ರೀ

ವಾರ್ತಾಭಾರತಿವಾರ್ತಾಭಾರತಿ28 April 2017 10:38 PM IST
share
ಸಿಂಧೂತಾಯಿ ಸಪ್ಕಾಳ್ ಅವರಿಗೆ ಬಸವ ಪುರಸ್ಕಾರ: ಉಮಾಶ್ರೀ

ಬೆಂಗಳೂರು, ಎ.28 : 2016ನೆ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರವನ್ನು ಮಹಾರಾಷ್ಟ್ರದ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಳ್ ಅವರಿಗೆ ಘೋಷಿಸಿದ್ದು, ಮೇ 3ರಂದು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದ್ದಾರೆ.

ಸಿಂಧೂ ತಾಯಿ ಸಪ್ಕಾಳ್ ಅವರು ಅನಾಥ ಮಕ್ಕಳ ತಾಯಿ ಎಂದೇ ಹೆಸರಾದವರು. ಇವರು ಅನಾಥ ಮಕ್ಕಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಇದುವರೆಗೂ ರಾಷ್ಟ್ರ ಮಟ್ಟದ 273 ಪ್ರಶಸ್ತಿಗಳು ಅವರಿಗೆ ಲಭಿಸಿವೆ. ಈ ಎಲ್ಲ್ಲ ಪ್ರಶಸ್ತಿಗಳ ಮೊತ್ತವನ್ನು ಸನ್ಮತಿ ಬಾಲನಿಕೇತನ ಸಂಸ್ಥೆಯ ಮೂಲಕ ಅನಾಥ ಮಕ್ಕಳ ಕಲ್ಯಾಣಕ್ಕಾಗಿ ಬಳಸುತ್ತಿದ್ದಾರೆ.

ಪ್ರಸ್ತುತ 300 ಮಕ್ಕಳನ್ನು ಅವರು ಪೋಷಿಸುತ್ತಿದ್ದಾರೆ. ಇವರ ಬಗ್ಗೆ ಚಲನಚಿತ್ರವೂ ನಿರ್ಮಾಣವಾಗಿದೆ. ಈ ಪ್ರಶಸ್ತಿಯನ್ನು ನ್ಯಾ.ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಈ ಪ್ರಶಸ್ತಿಯು 10 ಲಕ್ಷ ರೂ.ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಅದೇ ರೀತಿ 2016ನೆ ಸಾಲಿನ ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿಯನ್ನುಚೆನ್ನೈನ ಪ್ರಸಿದ್ದ ವಿದ್ವಾನ್ ಟಿ.ಎಚ್.ನಾಯಕ ರಾಂ ಅವರಿಗೆ ನೀಡಲಾಗುತ್ತಿದೆ. ಈ ಪ್ರಶಸ್ತಿಯು 10 ಲಕ್ಷ ರೂ.ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ತಿಳಿಸಿದರು.

ಬಿ.ವಿ.ಕಾರಂತ ಪ್ರಶಸ್ತಿಗೆ ಶ್ರೀನಿವಾಸ ಜಿ ಕಪ್ಪಣ್ಣ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿಗೆ ಚಿಂದೋಡಿ ಶ್ರೀಕಂಠೇಶ್, ಸಂತ ಶಿಶುನಾಳ ಪ್ರಶಸ್ತಿಗೆ ವೈ.ಕೆ.ಮುದ್ದುಕೃಷ್ಣ, ನಿಜಗುಣ ಪುರಂದರ ಪ್ರಶಸ್ತಿಗೆ ಪಂ.ಗಣಪತಿ ಭಟ್ ಹಾಸಣಗಿ, ಶಾಂತಲಾ ನಾಟ್ಯ ಪ್ರಶಸ್ತಿಗೆ ಉಷಾ ದಾತಾರ್, ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಹಸನ್ ನಯೀಂ ಸುರಕೋಡ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಶಾಂತಿ ನಾಯಕ, ಜಾನಪದ ಶ್ರೀ ಪ್ರಶಸ್ತಿಗೆ ಲಲಿತಾ ರಾಚಪ್ಪ ಪಾತ್ರೋಟ, ಕುಮಾರವ್ಯಾಸ ಪ್ರಶಸ್ತಿಗೆ ಎನ್.ಆರ್.ಜ್ಞಾನಮೂರ್ತಿ, ಜಕಣಾಚಾರಿ ಪ್ರಶಸ್ತಿಗೆ ವೈ.ಯಂಕಪ್ಪ, ವರ್ಣಶಿಲ್ಪಿವೆಂಕಟಪ್ಪ ಪ್ರಶಸ್ತಿಗೆ ಮಹಾವೀರ ರಾಯಪ್ಪಬಾಳಿಕಾಯಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿಗೆ ಡಾ.ಚನ್ನಣ್ಣ ವಾಲೀಕಾರ ಅವರನ್ನು ಆಯ್ಕೆ ಮಾಡಿದ್ದು, ಈ ಎಲ್ಲ ಪ್ರಶಸ್ತಿಗಳು ತಲಾ 3ಲಕ್ಷ ರೂ.ನಗದು, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ಒಳಗೊಂಡಿವೆ.

ಈ ಎಲ್ಲ ಪ್ರಶಸ್ತಿಗಳನ್ನು ಮೇ 3ರ ಬುಧವಾರ ಸಂಜೆ 7ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರದಾನ ಮಾಡಲಿದ್ದಾರೆ ಎಂದು ಸಚಿವೆ ಉಮಾಶ್ರೀ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X