Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಟ್ರಾಜಿಡಿ-ಗ್ರೀಕ್ ನಾಟಕಗಳ...

ಟ್ರಾಜಿಡಿ-ಗ್ರೀಕ್ ನಾಟಕಗಳ ಹಿನ್ನೆಲೆಯಲ್ಲಿ

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ28 April 2017 11:59 PM IST
share
ಟ್ರಾಜಿಡಿ-ಗ್ರೀಕ್ ನಾಟಕಗಳ ಹಿನ್ನೆಲೆಯಲ್ಲಿ

ವಿಧಿಯ ಮುಂದೆ ಮನುಷ್ಯನ ಅಸಹಾಯಕತೆಯನ್ನು ಎತ್ತಿ ಹಿಡಿಯುವ ಗ್ರೀಕ್ ನಾಟಕಗಳು ವಿಶ್ವದೆಲ್ಲೆಡೆ ಬೇರೆ ಬೇರೆ ಭಾಷೆಗಳು ತನ್ನ ನೆಲದ ದುರಂತಗಳ ಜೊತೆಗೆ ಸಮೀಕರಿಸಲು ಪ್ರಯತ್ನಿಸಿವೆ. ಸೋಪೋಕ್ಲಿಸ್‌ನ ‘ದುರಂತ’ ನಾಟಕಗಳ ಪಾತ್ರಗಳನ್ನು ಕನ್ನಡಕ್ಕೂ ತರುವ ಪ್ರಯತ್ನ ನಡೆದಿದೆ. ಸೋಪೊಕ್ಲಿಸ್‌ನ ಅಯಾಸ್ ಪಾತ್ರವನ್ನು ಮಹಾಭಾರತದ ಅಶ್ವತ್ಥಾಮನಿಗೆ ಜೋಡಿಸುವ ಪ್ರಯತ್ನವನ್ನು ಬಿಎಂಶ್ರೀ ಮಾಡಿದರು. ಭಾರತದ ಕಾವ್ಯವೂ ದುರಂತ ರೂಪಕಗಳಿಗೆ ಖ್ಯಾತವಾಗಿದೆ. ಆದರೂ ‘ಟ್ರಾಜಿಡಿ’ಯ ಪರಿಕಲ್ಪನೆಗೆ ನಮಗೆ ಪಾಶ್ಚಾತ್ಯ ಸಾಹಿತ್ಯವೇ ಮೂಲವಾಗಿದೆ. ಗ್ರೀಕ್ ನಾಟಕಗಳು ಕನ್ನಡದಲ್ಲಿ ಬಂದ ಬಳಿಕ, ಇಲ್ಲೂ ದುರಂತ ನಾಟಕಗಳ ಬಗ್ಗೆ ಆಸಕ್ತಿಯನ್ನು ತಾಳಲಾಯಿತು. ಕುವೆಂಪು ಭಾಷಾ ಭಾರತಿ ಪ್ರಾಕಾರ ಹೊರತಂದಿರುವ, ವಿಜಯಾ ಗುತ್ತಲ ಅವರ ಸಂಶೋಧನಾತ್ಮಕ ಕೃತಿ ‘ಟ್ರಾಜಿಡಿ’ ವಿವಿಧ ನೆಲೆಗಳಲ್ಲಿ ಆ ಪರಿಕಲ್ಪನೆ ಯನ್ನು ನೋಡುವ ಪ್ರಯತ್ನವನ್ನು ಮಾಡುತ್ತದೆ. ಟ್ರಾಜಿಡಿಯ ಕುರಿತಂತೆ ವಿವಿಧ ಚಿಂತಕರು, ಬರಹಗಾರರು ನೀಡಿರುವ ವ್ಯಾಖ್ಯೆಗಳು ಮತ್ತು ಕೊಟ್ಟಿರುವ ಟಿಪ್ಪಣಿಗಳನ್ನು ಆರಂಭದಲ್ಲಿ ಲೇಖಕರು ದಾಖಲಿಸುತ್ತಾರೆ. ದುರಂತ ನಾಟಕಗಳ ರಸಾಸ್ವಾದದ ಬಗ್ಗೆ ವಿವಿಧ ವಿಮರ್ಶಕರು ಈ ಕೃತಿಯಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಾರೆ.

ಟ್ರಾಜಿಡಿ ಪರಿಕಲ್ಪನೆ ಗ್ರೀಸ್‌ನಲ್ಲಿ ಹುಟ್ಟಿತಾದರೂ, ಆ ಪದದ ಹಿಂದಿರುವ ವಿಸ್ತಾರಗಳನ್ನು ಎರಡನೆ ಅಧ್ಯಾಯದಲ್ಲಿ ಚರ್ಚಿಸುತ್ತಾರೆ. ಅವುಗಳ ಜೊತೆಯಲ್ಲೇ ಗ್ರೀಕ್ ರಂಗ ಭೂಮಿಯ ವಿಕಾಸವನ್ನೂ ಉಲ್ಲೇಖಿಸುತ್ತಾರೆ. ಮೂರನೆ ಅಧ್ಯಾಯದಲ್ಲಿ ಅರಿಸ್ಟಾಟಲ್‌ನಿಂದ ಹಿಡಿದು ನೀಟ್ಶೆಯ ವರೆಗೂ ಹೇಗೆ ಟ್ರಾಜಿಡಿ ಬೇರೆ ಬೇರೆ ಲೇಖಕರು, ಚಿಂತಕರಿಂದ ಗ್ರಹಿಸಲ್ಪಟ್ಟಿದೆ ಎನ್ನುವುದನ್ನು ದಾಖಲಿಸುತ್ತಾರೆ. ಹಾಗೆಯೇ ಕನ್ನಡದಲ್ಲಿ ಟ್ರಾಜಿಡಿ ಕುರಿತ ವಾಗ್ವಾದಗಳನ್ನೂ ಕೃತಿಯ ಕೊನೆಯಲ್ಲಿ ಚರ್ಚಿಸುತ್ತಾರೆ. ಅಧ್ಯಯನಕಾರರು ಬಳಸುವ ಪಾರಿಭಾಷಿಕ ಪದಗಳ ವ್ಯಾಪ್ತಿಯನ್ನು ವಿವರಿಸುವ ಉದ್ದೇಶದಿಂದ ಪ್ರಾಕಾರ ಈ ಕೃತಿಯನ್ನು ಹೊರತಂದಿದೆ. 112 ಪುಟಗಳ ಈ ಕೃತಿಯ ಮುಖಬೆಲೆ 75 ರೂ.

share
ಕಾರುಣ್ಯಾ
ಕಾರುಣ್ಯಾ
Next Story
X