Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರ್‌ಸಿಬಿಗೆ ಐಪಿಎಲ್ ಪ್ಲೇ-ಆಫ್‌ಗೆ...

ಆರ್‌ಸಿಬಿಗೆ ಐಪಿಎಲ್ ಪ್ಲೇ-ಆಫ್‌ಗೆ ತಲುಪಲು ಈಗಲೂ ಇದೆ ಅವಕಾಶ!

ವಾರ್ತಾಭಾರತಿವಾರ್ತಾಭಾರತಿ29 April 2017 12:31 PM IST
share
ಆರ್‌ಸಿಬಿಗೆ ಐಪಿಎಲ್ ಪ್ಲೇ-ಆಫ್‌ಗೆ ತಲುಪಲು ಈಗಲೂ ಇದೆ ಅವಕಾಶ!

ಬೆಂಗಳೂರು, ಎ.29: ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಪ್ರಸ್ತುತ 9 ಪಂದ್ಯಗಳಲ್ಲಿ 5 ಅಂಕಗಳನ್ನು ಗಳಿಸಿದ್ದು, ಪ್ಲೇ-ಆಫ್‌ಗೆ ಅರ್ಹತೆ ಪಡೆಯುವುದು ಕನಸಾಗಿ ಉಳಿದಿದೆೆ. ಆದಾಗ್ಯೂ ಅಂಕಿ-ಅಂಶಗಳನ್ನು ಅವಲೋಕಿಸಿದಾಗ ಆರ್‌ಸಿಬಿಗೆ ಪ್ಲೇ-ಆಫ್ ಹಂತಕ್ಕೆ ಸ್ಪರ್ಧೆಯೊಡ್ಡುವ ಅವಕಾಶ ಈಗಲೂ ಇದೆ.

 ಆರ್‌ಸಿಬಿ ತಂಡ ಉಳಿದ ಎಲ್ಲ 5 ಪಂದ್ಯಗಳನ್ನು ಜಯಿಸಿದರೆ 15 ಅಂಕ ಗಳಿಸುತ್ತದೆ. ಅಗ್ರ-4ರಲ್ಲಿ ಸ್ಥಾನ ಪಡೆಯಲು ಸಾಧ್ಯವಿದೆ. ಆರ್‌ಸಿಬಿ ಮತ್ತೊಂದು ಸೋಲು ಅನುಭವಿಸಿದರೆ 13 ಅಂಕ ಗಳಿಸುತ್ತದೆ. ಆಗಲೂ ಪ್ಲೇ-ಆಫ್‌ಗೆ ತಲುಪುವ ಅವಕಾಶ ಮುಕ್ತವಾಗಿರುತ್ತದೆ.

 ಈ ವರ್ಷದ ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಅಂಕಪಟ್ಟಿಯಲ್ಲಿ ಈಗಾಗಲೇ ಅಗ್ರ-2ರಲ್ಲಿ ಸ್ಥಾನ ಪಡೆದಿದ್ದು, ಸನ್‌ರೈಸರ್ಸ್ ಹೈದರಾಬಾದ್ 3ನೆ ಸ್ಥಾನದಲ್ಲಿದೆ. ಒಂದು ವೇಳೆ ಈ ಮೂರು ತಂಡಗಳು ಗೆಲುವಿನ ಓಟ ಮುಂದುವರಿಸಿದರೆ, ಉಳಿದ ತಂಡಗಳು ಸೋಲು ಕಂಡರೆ, ಆರ್‌ಸಿಬಿ 13 ಅಂಕ ಗಳಿಸಿದರೆ ಮುಂದಿನ ಸುತ್ತಿಗೆ ತಲುಪಲು ಅವಕಾಶವಿರುತ್ತದೆ.

 ಪ್ರಸ್ತುತ 9 ಪಂದ್ಯಗಳನ್ನು ಆಡಿರುವ ಕೆಕೆಆರ್ 14 ಅಂಕ ಗಳಿಸಿದ್ದು, ಉಳಿದ 5 ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿದರೆ 20 ಅಂಕ ಗಳಿಸುತ್ತದೆ. ಮುಂಬೈ ಉಳಿದ ಆರರಲ್ಲಿ ಮೂರು ಪಂದ್ಯ ಜಯಿಸಿದರೆ 18 ಅಂಕ ತಲುಪುತ್ತದೆ.

ಸನ್‌ರೈಸರ್ಸ್ ತಂಡ ಉಳಿದ 5 ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿದರೆ 17 ಅಂಕ ಗಳಿಸುತ್ತದೆ. ಒಂದು ವೇಳೆ ಪುಣೆ ತಂಡ ಉಳಿದ 6 ಪಂದ್ಯಗಳಲ್ಲಿ 5ರಲ್ಲಿ ಸೋತರೆ 10 ಅಂಕ ಗಳಿಸುತ್ತದೆ. ಗುಜರಾತ್ ಲಯನ್ಸ್ ಹಾಗೂ ಡೆಲ್ಲಿ ತಂಡ ಉಳಿದ ಪಂದ್ಯಗಳಲ್ಲಿ ತಲಾ 3ರಲ್ಲಿ ಜಯ ಸಾಧಿಸಿದರೆ, ಪಂಜಾಬ್ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಐಪಿಎಲ್‌ನ ಅಂತಿಮ ಅಂಕಪಟ್ಟಿ ಹೀಗಿರುತ್ತದೆ...

ಕೆಕೆಆರ್-20, ಮುಂಬೈ-18, ಸನ್‌ರೈಸರ್ಸ್-17, ಆರ್‌ಸಿಬಿ-15, ಗುಜರಾತ್-12, ಪುಣೆ, ಪಂಜಾಬ್ ಹಾಗೂ ಡೆಲ್ಲಿ-ತಲಾ 10 ಅಂಕ ಗಳಿಸುತ್ತವೆ.

 ಇದರರ್ಥ ಆರ್‌ಸಿಬಿ ಇನ್ನೂ ಒಂದು ಪಂದ್ಯ ಸೋತರೂ, ರನ್‌ರೇಟ್ ಹಂಗಿಲ್ಲದೆ ಮುಂದಿನ ಸುತ್ತಿಗೇರಬಹುದು. ಆದರೆ, ಆರ್‌ಸಿಬಿ ತಂಡದ ಆಟಗಾರರು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಪಡಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X