Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬರಡು ಕೊಳವೆಬಾವಿಗಳಿಗೆ ಜೀವ ತುಂಬುವ...

ಬರಡು ಕೊಳವೆಬಾವಿಗಳಿಗೆ ಜೀವ ತುಂಬುವ ಉಡುಪಿಯ ಬಸ್ ಡ್ರೈವರ್ ಜೋಸೆಫ್

ವಾರ್ತಾಭಾರತಿವಾರ್ತಾಭಾರತಿ29 April 2017 1:19 PM IST
share
ಬರಡು ಕೊಳವೆಬಾವಿಗಳಿಗೆ ಜೀವ ತುಂಬುವ ಉಡುಪಿಯ ಬಸ್ ಡ್ರೈವರ್ ಜೋಸೆಫ್

ಉಡುಪಿ, ಎ.29: ಇವರ ಹೆಸರು ಜೋಸೆಫ್ ಜಿಎಂ ರೆಬೆಲ್ಲೋ. ವೃತ್ತಿಯಲ್ಲಿ ಬಸ್ ಚಾಲಕನಾಗಿರುವ ಇವರು ಇಂದು ಬರಡು ಕೊಳವೆಬಾವಿಗಳಿಗೆ ಜೀವ ತುಂಬುವ ಅಪರೂಪದ ಕೈಂಕರ್ಯದಲ್ಲಿ ತೊಡಗಿ ಸಾಮಾಜಿಕ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಈ ಅಪರೂಪದ ಸಾಧಕನ ಬಗ್ಗೆ ಬೆಂಗಳೂರು ಮಿರರ್ ಪತ್ರಿಕೆಯ ಲೇಖನವೊಂದು ಬೆಳಕು ಚೆಲ್ಲಿದೆ.

ಕಲ್ಯಾಣಪುರ ಮೂಲದ ಜೋಸೆಫ್ ಅವರು ಹತ್ತನೇ ತರಗತಿಯ ತೇರ್ಗಡೆ ನಂತರ ಡಿಪ್ಲೋಮಾ ಶಿಕ್ಷಣ ಪಡೆದು ಮಂಗಳೂರು-ಉಡುಪಿ ಮಧ್ಯೆ ಸಂಚರಿಸುವ ಖಾಸಗಿ ಬಸ್ ಚಾಲಕರಾಗಿ ತ ಮ್ಮ ವೃತ್ತಿ ಆರಂಭಿಸಿದರು. 2010ರಲ್ಲಿ ನಡೆದ ಅವಘಡವೊಂದರಲ್ಲಿ ಮರದ ಮೇಲಿನಿಂದ ಬಿದ್ದು ಬೆನ್ನು ಹುರಿಗೆ ಗಂಭೀರ ಪೆಟ್ಟಾಗಿತ್ತು. ಒಂದು ವರ್ಷ ಹಾಸಿಗೆ ಹಿಡಿದಿದ್ದ ಅವರು ನಂತರ ಆತ್ಮಸ್ಥೈರ್ಯದಿಂದ ನಡೆದಾಡಿ ಸಾಮಾನ್ಯ ಜೀವನ ನಡೆಸುವಂತಾದರು. ಅವರ ಈ ಹಿಂದಿನ ಮಾಲಕರು ಅವರಿಗೆ ಉಡುಪಿಯ ಮಧ್ವ ವಾದಿರಾಜ ಇನಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಡ್ ಮ್ಯಾನೇಜ್ಮೆಂಟ್ ನ ಬಸ್ ಚಾಲಕನ ಕೆಲಸ ಕೊಡಿಸಿದರು. ಇದು ಅವರ ಜೀವನದ ಗತಿಯನ್ನೇ ಬದಲಾಯಿಸಿ ಬಿಟ್ಟಿತು. ಸಾಕಷ್ಟು ಸಮಯ ಕೂಡ ಅವರ ಬಳಿ ಇದ್ದುದರಿಂದ ಅವರು ಪಂಚಾಯತ್ ಸಭೆಗಳಲ್ಲಿ ಭಾಗವಹಿಸಲಾರಂಭಿಸಿದರು. ಅವರ ಆಸಕ್ತಿಯನ್ನು ಗಮನಿಸಿ ಆಗಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರನ್ನು ಭಾರತ್ ನಿರ್ಮಾಣ ವಾಲಂಟಿಯರ್ ಪ್ರೊಗ್ರಾಂನಲ್ಲಿ ಸೇರಿಸಿದರು. ಜೋಸೆಫ್ ಮುಂದೆ ಅತ್ಯುತ್ತಮ ಸ್ವಯಂ ಸೇವಕ ಪ್ರಶಸ್ತಿಯನ್ನೂ ತಮ್ಮದಾಗಿಸಿದರು.

ಹಲವಾರು ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಅವರು ಪರಿಸರ ರಕ್ಷಣ ಮತ್ತು ಅಂತರ್ಜಲ ಮಟ್ಟ ಏರಿಕೆ ಕುರಿತು ಸಾಕಷ್ಟು ಜ್ಞಾನ ಸಂಪಾದಿಸಿದರು. ತಾವು ಕೆಲಸ ಮಾಡುತ್ತಿರುವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ನಂತರ ಅದನ್ನು ಮರೆತು ಬಿಡುವುದನ್ನು ಕಂಡು ಆ ಗಿಡಗಳನ್ನು ಉಳಿಸಲು ಅವುಗಳ ಬಳಿ ನೀರಿನ ಬಾಟಲಿಯಿಟ್ಟು ಹನಿ ನೀರಾವರಿ ರೀತಿಯಲ್ಲಿ ನೀರುಣಿಸಲು ಯತ್ನಿಸಿದರು. ಚರ್ಚ್ ಸೋಶಿಯಲ್ ಡೆವಲಪ್ಮೆಂಟ್ ಕಮಿಷನ್ನಿನ ಸಂಚಾಲಕರನ್ನಾಗಿ ಅವರನ್ನು ನೇಮಿಸಿದಾಗ ಬರಡು ಕೊಳವೆ ಬಾವಿಗಳಿಗೆ ಜೀವ ತುಂಬುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂಬ ಆಸಕ್ತಿ ಅವರಲ್ಲಿ ಮೂಡಿತು. ತಜ್ಞರನ್ನು ಸಂಪರ್ಕಿಸಿ ಮಾಹಿತಿ ಪಡೆದ ಅವರು ಮಳೆ ನೀರು ಕೊಯ್ಲಿನ ಬಗ್ಗೆ ಸಾಕಷ್ಟು ಓದಿ ತಮ್ಮದೇ ಮಾದರಿಯಲ್ಲಿ ಬರಡು ಕೊಳವೆಬಾವಿಗಳಿಗೆ ಜೀವ ತುಂಬಲು ಯತ್ನಿಸಿ ಅದರಲ್ಲಿ ಯಶಸ್ವಿಯೂ ಆಗಿದ್ದಾರೆ.

ಜೋಸೆಫ್ ಅವರ ಮಾದರಿ ಸರಳ. ಬರಡು ಕೊಳವೆ ಬಾವಿಯ ಸುತ್ತ 10 ಅಡಿ ಅಗಲ ಹಾಗೂ 10 ಅಡಿ ಆಳದ ಗುಂಡಿ ತೋಡಿ ಅದರಿಂದ ಅಪಾಯವುಂಟಾಗದಂತೆ ಅದನ್ನು ಮುಚ್ಚಿ ಒಂದು ಸಣ್ಣ ರಂಧ್ರ ಹಾಗೂ ಅದಕ್ಕೆ ಫಿಲ್ಟರ್ ರೂಪದಲ್ಲಿ ಮೆಶ್ ಅಳವಡಿಸಲಾಗುವುದು. ಮಳೆ ನೀರು ಈ ರಂಧ್ರದ ಮೂಲಕ ಒಳ ಪ್ರವೇಶಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ಕೊಳವೆ ಬಾವಿಗೆ ಮರು ಜೀವ ನೀಡುತ್ತದೆ ಎನ್ನುತ್ತಾರೆ ಜೋಸೆಫ್.
ಮಳೆನೀರು ಕೊಯ್ಲಿನ ಹಲವು ಮಾದರಿಗಳನ್ನೂ ಸಿದ್ಧಪಡಿಸಿರುವ ಜೋಸೆಫ್ ಶಾಲಾ ಮಕ್ಕಳಲ್ಲಿ ಅರಿವನ್ನುಂಟು ಮಾಡುವ ಕಾರ್ಯಕ್ರಮಗಳನ್ನೂ ನಡೆಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X