Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೋಮಾಂಸ ಸೇವನೆ ಆರೋಪ :ಹೊಸಾಡು ಗ್ರಾಪಂ...

ಗೋಮಾಂಸ ಸೇವನೆ ಆರೋಪ :ಹೊಸಾಡು ಗ್ರಾಪಂ ಸದಸ್ಯೆ ಸಹಿತ ಕುಟುಂಬದ ಮೇಲೆ ದೌರ್ಜನ್ಯ ಖಂಡಿಸಿ ‘ಚಲೋ’ ಕಾರ್ಯಕ್ರಮ

ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ29 April 2017 5:56 PM IST
share

ಮಂಗಳೂರು, ಎ.29: ಪರಿಶಿಷ್ಟ ಪಂಗಡದ ಕೊರಗ ಸಮುದಾಯಕ್ಕೆ ಸೇರಿದ ಕುಂದಾಪುರ ತಾಲೂಕಿನ ಹೊಸಾಡು ಗ್ರಾಪಂ ಸದಸ್ಯೆ ಶಕುಂತಳಾ ಮತ್ತವರ ಕುಟುಂಬಸ್ಥರ ಮೇಲೆ ನಡೆದ ಸಂಘಪರಿವಾರದ ಕಾರ್ಯಕರ್ತರು ಮತ್ತು ಗಂಗೊಳ್ಳಿ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ‘ಹೊಸಾಡು ಗ್ರಾಮ ಚಲೋ’ ಕಾರ್ಯಕ್ರಮ ನಡೆಸಲಾಗುವುದು ಎಂದು ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ತಿಳಿಸಿದೆ.

ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಮುಖಂಡರಾದ ಅಶೋಕ್ ಕೊಂಚಾಡಿ ಮತ್ತು ರಘುವೀರ್ ಸೂಟರ್‌ಪೇಟೆ, ಎ.24ರಂದು ಶಕುಂತಳಾರ ಸಹೋದರಿಯ ಮಗಳಾದ ಪ್ರಮೋದಾರ ನಿಶ್ಚಿತಾರ್ಥವಿತ್ತು. ಅಂದು ರಾತ್ರಿ ಸುಮಾರು 12 ಗಂಟೆಗೆ ಕುಟುಂಬಸ್ಥರು ಉಟ ಮಾಡುತ್ತಿದ್ದ ವೇಳೆ ಬಜರಂಗ ದಳದ ಕಾರ್ಯಕರ್ತರಾದ ಸುನೀಲ್ ಪೂಜಾರಿ, ಚಂದ್ರಕಾಂತ ಪೂಜಾರಿ, ಗುರುರಾಜ ಆಚಾರ್ಯ ಮತ್ತಿತರ 10 ಮಂದಿ ಅಕ್ರಮವಾಗಿ ಮನೆಗೆ ನುಗ್ಗಿ ಗೋಮಾಂಸ ಸೇವಿಸುತ್ತಿದ್ದೀರಿ ಎಂದು ಆರೋಪಿಸಿ ಊಟ ಕಿತ್ತು ಬಿಸಾಡಿ ಶಕುಂತಳಾರ ಸಂಬಂಧಿಕರಾದ ಹರೀಶ್, ಮಹೇಶ್, ಶ್ರೀಕಾಂತರಿಗೆ ಹಲ್ಲೆಗೈದು ಕೊಲೆ ಬೆದರಿಕೆ ಹಾಕಿದ್ದಾರೆ. ಹಲ್ಲೆಗೊಳಗಾದ ಮೂವರು ಆಸ್ಪತ್ರೆಗೆ ದಾಖಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಈ ಮಧ್ಯೆ ಹಲ್ಲೆ ನಡೆಸಿದ ಆರೋಪಿಗಳು ಶಕುಂತಳಾ ಮತ್ತಿತರರ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ಆರೋಪಿಸಿದರು.

ಶಕುಂತಳಾ ನೀಡಿದ ದೂರನ್ನು ಗಂಭೀರವಾಗಿ ಪರಿಗಣಿಸದ ಪೊಲೀಸರು ಬಜರಂಗ ದಳದ ಸುಳ್ಳು ದೂರನ್ನು ಸ್ವೀಕರಿಸಿ ಕೊರಗ ಸಮುದಾಯದವರನ್ನು ವಿವಸ್ತ್ರಗೊಳಿಸಿ ಠಾಣೆಯಲ್ಲಿ ಕೂಡಿ ಹಾಕಿ ಹಿಂಸಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಶಕುಂತಳಾ ಮತ್ತವರ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ ಬಜರಂಗ ದಳದ ಕಾರ್ಯಕರ್ತರನ್ನು ಬಂಧಿಸಿ ಕಠಿಣ ಕ್ರಮ ಜರಗಿಸಬೇಕು ಎಂದು ಸಮಿತಿಯ ಮುಖಂಡರಾದ ನಿರ್ಮಲ ಕುಮಾರ್ ಮತ್ತು ರಮೇಶ್ ಕೋಟ್ಯಾನ್ ಒತ್ತಾಯಿಸಿದರು.

ಪೊಲೀಸರು ಮತ್ತು ಸಂಘಪರಿವಾರ ಶಾಮೀಲಾಗಿ ಈ ಕೃತ್ಯ ಎಸಗಿದೆ. ಆಹಾರ ನಮ್ಮ ಹಕ್ಕು. ಅದನ್ನು ಪ್ರಶ್ನಿಸಲು ಯಾರಿಗೂ ಸಾಧ್ಯವಿಲ್ಲ. ನಾವು ಏನು ತಿನ್ನಬೇಕು ಮತ್ತು ಬೇಡ ಎಂಬುದನ್ನು ನಿರ್ಧರಿಸಲು ಇವರು ಯಾರು? ಎಂದು ಅಶೋಕ್ ಕೊಂಚಾಡಿ ಪ್ರಶ್ನಿಸಿದರು.

ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಪೇಜಾವರ ಸ್ವಾಮೀಜಿ ವೌನ ಮುರಿಯಬೇಕು ಎಂದ ರಘುವೀರ್ ಸೂಟರ್‌ಪೇಟೆ, ಶುಕ್ರವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಸಿದರೂ ಕೂಡ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹಾಗಾಗಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಪಶ್ಚಿಮ ವಲಯ ಐಜಿಪಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಕರಾವಳಿಯಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚುತ್ತಿದೆ. ಉಭಯ ಜಿಲ್ಲೆಗಳ ಶೇ. 60ರಷ್ಟು ಪೊಲೀಸರು ಸಂಘಿಗಳಾಗಿದ್ದಾರೆ. ರಾಜ್ಯ ಸರಕಾರ ಸಂಘ ಪರಿವಾರ ಮತ್ತು ಅದರ ಜೊತೆಗೆ ಶಾಮೀಲಾಗಿರುವ ಪೊಲೀಸರ ವಿರುದ್ಧ ಕ್ರಮ ಜರಗಿಸಬೇಕು ಎಂದು ಕರ್ನಾಟಕ ಕೋಮುಸೌಹಾರ್ದ ವೇದಿಕೆಯ ದ.ಕ.ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ದಿನಕರ ಶೆಟ್ಟಿ, ದಯಾನಾಥ ಕೋಟ್ಯಾನ್, ಶೇಖರ ಚಿಲಿಂಬಿ, ಈಶ್ವರ್ ಟಿ. ಸೂಟರ್‌ಪೇಟೆ, ಚಂದ್ರಕುಮಾರ್, ಕಕೋಸೌ ವೇದಿಕೆಯ ಉಮರ್ ಯು.ಎಚ್. ಉಪಸ್ಥಿತರಿದ್ದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಬಗ್ಗೆ ಕಾರ್ಕಳದ ಶ್ರೀಕಾಂತ್ ಎಂಬಾತ ವಾಟ್ಸ್‌ಆ್ಯಪ್, ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು, ಈತನನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಸಮಿತಿಯ ಮುಖಂಡರು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X