Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರೋಪಾಡಿ ಜಲೀಲ್ ಹತ್ಯೆ ಪ್ರಕರಣ : 11...

ಕರೋಪಾಡಿ ಜಲೀಲ್ ಹತ್ಯೆ ಪ್ರಕರಣ : 11 ಮಂದಿ ಆರೋಪಿಗಳ ಬಂಧನ; ಐಜಿಪಿ

ಭೂಗತ ಪಾತಕಿ ವಿಕ್ಕಿ ಶೆಟ್ಟಿ ಪಿತೂರಿ

ವಾರ್ತಾಭಾರತಿವಾರ್ತಾಭಾರತಿ29 April 2017 6:40 PM IST
share
ಕರೋಪಾಡಿ ಜಲೀಲ್ ಹತ್ಯೆ ಪ್ರಕರಣ : 11 ಮಂದಿ ಆರೋಪಿಗಳ ಬಂಧನ; ಐಜಿಪಿ

ಮಂಗಳೂರು, ಎ. 29: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ.ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಎಂಬಾತನ ಪಿತೂರಿ ಇದ್ದು, ಆತನ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಆತ ಎಲ್ಲಿದ್ದಾನೆ ಎಂಬುದರ ಬಗ್ಗೆ ಮಾಹಿತಿ ಪಡೆಯಬೇಕಿದೆ. ವಿಕ್ಕಿ ಶೆಟ್ಟಿ ವಿರುದ್ಧ ಕೋಕಾ ಕಾಯ್ದೆ ಜಾರಿಗೊಳಿಸಲುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ರಾಜೇಶ್ ನಾಯಕ್, ನರಸಿಂಹ ಶೆಟ್ಟಿ, ಪ್ರಜ್ವಲ್, ಪುಷ್ಪರಾಜ್, ಸಚಿನ್, ರೋಷನ್, ಸತೀಶ್ ರೈ, ಕೇಶವ, ಪ್ರಶಾಂತ್, ವಚನ್ ಮತ್ತಿತರ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಎರಡು ಮೋಟಾರ್ ಸೈಕಲ್, ಎರಡು ತಲವಾರು ಹಾಗೂ ಒಂದು ಓಮ್ನಿ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ಐಜಿಪಿ ಮಾಹಿತಿ ನೀಡಿದರು.

 ಪ್ರಕರಣದ ರೂವಾರಿ ಕರೋಪಾಡಿ ಮಿತ್ತನಡ್ಕದ ಬೇತ ಮನೆ ನಿವಾಸಿ ಪ್ರಸ್ತುತ ಕನ್ಯಾನದಲ್ಲಿ ಶಾಮಿಯಾನದ ಅಂಗಡಿಯನ್ನು ನಡೆಸುತ್ತಿರುವ ರಾಜೇಶ್ ನಾಯಕ್ ಹಾಗೂ ನರಸಿಂಹ ಯಾನೆ ನರಸಿಂಹ ಶೆಟ್ಟಿ ಇಂದು ಉಡುಪಿಯಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ. ಇವರನ್ನು ವಿಚಾರಿಸಿದಾಗ ಈ ಆರೋಪಿಗಳು ಭೂಗತ ಪಾತಕಿ ವಿಕ್ಕಿ ಶೆಟ್ಟಿ ಯಾನೆ ವಿಕ್ರಮ್ ಶೆಟ್ಟಿ ಯಾನೆ ಬಾಲಕೃಷ್ಣ ಶೆಟ್ಟಿಯ ಪಿತೂರಿಯಂತೆ ಈ ಕೃತ್ಯ ನಡೆಸಿದ್ದಾರೆ. ರಾಜೇಶ್ ನಾಯಕ್ ರೂಪಿಸಿದ ಸಂಚಿಗೆ ಸತೀಶ್, ಕೇಶವ ಮತ್ತು ಪ್ರಶಾಂತ್ ಸಹಾಯ ನೀಡಿದ್ದಾರೆ ಅವರು ಹೇಳಿದರು.

  ಪ್ರಧಾನ ಆರೋಪಿ ರಾಜೇಶ್ ನಾಯಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಈತ ವಿಟ್ಲ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ. ಆರೋಪಿಗಳಾದ ನರಸಿಂಹ ಶೆಟ್ಟಿ ಮೇಲೆ ಎರಡು ಹಾಗೂ ಸತೀಶ್ ರೈ ಮೇಲೆ ನಾಲ್ಕು ಪ್ರಕರಣಗಳು ವಿಟ್ಲ ಠಾಣೆಯಲ್ಲಿ ದಾಖಲಾಗಿವೆ ಎಂದು ಐಜಿಪಿ ಹರಿಶೇಖರನ್ ವಿವರಿಸಿದರು.

  2015ರಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಸ್ಥಾನಕ್ಕೆ ದಿನೇಶ್ ಶೆಟ್ಟಿ ಎಂಬವರು ಆಕಾಂಕ್ಷಿಯಾಗಿದ್ದರು. ದಿನೇಶ್ ಶೆಟ್ಟಿ ಅವರು ವಿಕ್ಕಿ ಶೆಟ್ಟಿಯ ಚಿಕ್ಕಪ್ಪನ ಮಗನಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ವಿಕ್ಕಿ ಶೆಟ್ಟಿಯು ದಿನೇಶ್ ಶೆಟ್ಟಿಯನ್ನು ಬೆಂಬಲಿಸಿದ್ದ.

ಆದರೆ ದಿನೇಶ್ ಶೆಟ್ಟಿಗೆ ಅವಕಾಶ ಸಿಗದೆ ಜಲೀಲ್ ಕರೋಪಾಡಿಗೆ ಉಪಾಧ್ಯಕ್ಷ ಸ್ಥಾನ ಸಿಕ್ಕಿತ್ತು. ಇದರಿಂದ ವಿಕ್ಕಿ ಶೆಟ್ಟಿ ಬೇಸರಗೊಂಡಿದ್ದ. ಕರೋಪಾಡಿ ಗ್ರಾ.ಪಂ.ನ ಯಾವುದೇ ಮುಖ್ಯ ವಿಚಾರಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಾಗಲೂ ದಿನೇಶ್ ಮತ್ತು ಜಲೀಲ್ ಮಧ್ಯೆ ಗಲಾಟೆ ಸಂಭವಿಸುತ್ತಿತ್ತು. ಪಂಚಾಯತ್ ಯಾವುದೇ ತೀರ್ಮಾನವಿದ್ದರೂ ತನ್ನ ಮಾತಿಗೆ ಜಲೀಲ್ ಬೆಲೆ ನೀಡುತ್ತಿಲ್ಲ ಎಂದು ವಿಕ್ಕಿ ಶೆಟ್ಟಿಯು ದಿನೇಶ್ ಶೆಟ್ಟಿಗೆ ದೂರವಾಣಿ ಮೂಲಕ ದ್ವೇಷ ವ್ಯಕ್ತಪಡಿಸುತ್ತಿದ್ದ. ಇದೇ ವಿಚಾರದಲ್ಲಿ ವಿಕ್ಕಿ ಶೆಟ್ಟಿ ಪಿತೂರಿ ನಡೆಸಿದ್ದಾನೆ ಎಂದು ಅವರು ತಿಳಿಸಿದರು.

ರಾಜೇಶ್ ನಾಯಕ್‌ನ ಮೇಲೆ ದಾಖಲಾಗಿರುವ ಪ್ರಕರಣಗಳಿಗೆ ಜಲೀಲ್ ಕಾರಣ ಎಂದು ರಾಜೇಶ್ ಜಲೀಲ್ ವಿರುದ್ಧ ದ್ವೇಷ ಕಾರುತ್ತಿದ್ದ. ಇತ್ತ ರಾಜೇಶ್ ನಾಯಕ್ ಜಲೀಲ್ ವಿರುದ್ಧ ದ್ವೇಷ ಕಾರುತ್ತಿರುವುದನ್ನು ಅರಿತ ವಿಕ್ಕಿ ಶೆಟ್ಟಿ ಆತನ ಮೂಲಕವೇ ಜಲೀಲ್‌ರ ಹತ್ಯೆ ನಡೆಸಿದ್ದಾನೆ ಎಂದು ಐಜಿಪಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಸ್ಪಿ ಭೂಷಣ್ ಗುಲಾಬ್ ರಾವ್ ಬೊರಸೆ, ಹೆಚ್ಚುವರಿ ಎಸ್ಪಿ ಡಾ.ವೇದಮೂರ್ತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X