Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಕರ್ನಾಟಕದತ್ತ ಜೆಡಿಎಸ್ ಗಮನ:...

ಉತ್ತರ ಕರ್ನಾಟಕದತ್ತ ಜೆಡಿಎಸ್ ಗಮನ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 April 2017 8:57 PM IST
share
ಉತ್ತರ ಕರ್ನಾಟಕದತ್ತ ಜೆಡಿಎಸ್ ಗಮನ: ಎಚ್.ಡಿ.ಕುಮಾರಸ್ವಾಮಿ

ಹುಬ್ಬಳ್ಳಿ, ಎ.29: 2018ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 40-50 ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹೊಂದಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಶನಿವಾರ ನಗರದ ಬಸವವೃತ್ತದಲ್ಲಿ ಆಯೋಜಿಸಲಾಗಿದ್ದ ಜಗಜ್ಯೋತಿ ಬಸವೇಶ್ವರ ಜಯಂತ್ಯುತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜೆಡಿಎಸ್ ಪಕ್ಷದ ಹಿರಿಯ ನಾಯಕ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 40 ರಿಂದ 50 ಶಾಸಕರನ್ನು ಗೆಲ್ಲಿಸಿಕೊಳ್ಳಬೇಕೆಂಬ ಗುರಿ ಈಡೇರಿಕೆಗಾಗಿ ಇಂದಿನಿಂದಲೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಉತ್ತರ ಕರ್ನಾಟಕ ಭಾಗದ ಹಾವೇರಿ, ಗದಗ, ಬಾಗಲಕೋಟೆ, ಧಾರವಾಡ ಮತ್ತಿತರ ಜಿಲ್ಲೆಗಳಲ್ಲಿ ಈಗಾಗಲೆ ವಿಧಾನಸಭಾವಾರು ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಅನ್ಯ ಪಕ್ಷದ ಮುಖಂಡರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಆಸಕ್ತಿ ತೋರುತ್ತಿದ್ದಾರೆ ಎಂದು ಅವರು ಹೇಳಿದರು.

ಮೇ 11 ರಿಂದ 13ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಮೇ 6 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗದಲ್ಲಿ ಜೆಡಿಎಸ್ ಪಕ್ಷದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಮೇ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದ ಹೆಚ್ಚಿನ ಗಮನ ಕೇಂದ್ರೀಕರಿಸಿ, ಪಕ್ಷ ಸಂಘಟನೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಂಬಂಧ ಶ್ರಮಿಸಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಇದಕ್ಕೂ ಮುನ್ನ ಬಸವೇಶ್ವರ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, 12ನೆ ಶತಮಾನದಲ್ಲಿ ಮಾನವತಾವಾದ, ವಿಚಾರವಾದ ಹಾಗೂ ಸಾಮಾಜಿಕ ಪರಿವರ್ತನೆಯಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿದ್ದ ಬಸವೇಶ್ವರರ ಜಯಂತಿಯನ್ನು ಇಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ ಎಂದರು.

ಬಸವೇಶ್ವರರ ಜಯಂತಿಯನ್ನು ಕೇವಲ ಅವರ ಭಾವಚಿತ್ರ ಹಾಗೂ ಪ್ರತಿಮೆಗೆ ಹಾರ ಹಾಕುವುದಕ್ಕಷ್ಟೇ ಸೀಮಿತವಾಗಿರಿಸುವುದು ಬೇಡ. ಸಮಾಜಕ್ಕೆ ಅವರು ನೀಡಿರುವ ಸಂದೇಶ, ಮಾರ್ಗದರ್ಶನಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಬಸವಣ್ಣ ನೀಡಿರುವ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ನಮ್ಮಲ್ಲಿರುವ ಬಹುತೇಕ ನ್ಯೂನತೆಗಳನ್ನು ಹೊಗಲಾಡಿಸಬಹುದು ಎಂದು ಕುಮಾರಸ್ವಾಮಿ ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X